ಲಿಂಗಾಯತರನ್ನು ಒಡೆದಿದ್ದು ಬಿಎಸ್ ವೈ ಎಂದ ನಟ ಚೇತನ್ ವಿರುದ್ಧ ಪ್ರತಿಭಟನೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಲಿಂಗಾಯತ ಸಮಾಜದಲ್ಲಿ ಒಡಕು. ರಾಜಕೀಯ ಲಾಭಕ್ಕಾಗಿ ಸಮಾಜ ಒಡೆದ ಯಡಿಯೂರಪ್ಪ ಎಂದು ಕನ್ನಡ ನಟ ಚೇತನ್ ಆರೋಪ.
Recommended Video

ಬೆಂಗಳೂರು, ಆಗಸ್ಟ್ 30: ಲಿಂಗಾಯತರನ್ನು ಒಡೆದಿದ್ದೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂದು ಕನ್ನಡ ಚಿತ್ರ ನಟ ಚೇತನ್ ಆರೋಪಿಸಿದ್ದಾರೆ. ಆದರೆ, ಈ ಆರೋಪ ಅವರನ್ನು ವಿವಾದಕ್ಕೆ ಸಿಲುಕಿಸಿದೆ.
ಲಿಂಗಾಯತರ ಪ್ರತ್ಯೇಕ ಧರ್ಮದ ವಿಚಾರವಾಗಿ ಬೆಂಗಳೂರಿನ ಚಾಲುಕ್ಯ ವೃತ್ತದಲ್ಲಿರುವ ಬಸವ ಭವನದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಚೇತನ್, ಮಾಜಿ ಮುಖ್ಯಮಂತ್ರಿ ವಿರುದ್ಧ ಈ ಆರೋಪ ಮಾಡಿದರು. ಆದರೆ, ಅವರ ಈ ಮಾತಿಗೆ ಸಭೆಯಲ್ಲಿ ಕುಳಿತಿದ್ದ ಬಿಎಸ್ ವೈ ಅಭಿಮಾನಿ ಶಿವಕುಮಾರ್ ಎಂಬಾತ ತೀವ್ರವಾಗಿ ಪ್ರತಿಭಟನೆ ನಡೆಸಿದರು. ಅವರಿಗೆ ಇತರ ಕೆಲವು ಸಭಿಕರೂ ದನಿಗೂಡಿಸಿದರು.

ಈ ಸಂದರ್ಭದಲ್ಲಿ ಬಹುತೇಕ ಮಂದಿ ಶಿವಕುಮಾರ್ ಅವರನ್ನು ತಡೆಯಲು ಮುಂದಾದಾಗ ಮಾತಿಗೆ ಮಾತು ಬೆಳೆದು ಸಭೆಯಲ್ಲಿ ಗದ್ದಲದ ವಾತಾವಣ ಉಂಟಾಯಿತು. ಇದು ಕೈಕೈ ಮಿಲಾಯಿಸುವ ಹಂತಕ್ಕೂ ಹೋಗಿ ಮುಟ್ಟಿದಾಗ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಶಿವಕುಮಾರ್ ಅವರನ್ನು ಸಭೆಯಿಂದ ಹೊರಹಾಕಿದರು.
ಸಭಿಕರನ್ನು ಉದ್ದೇಶಿಸಿ ಮಾತನಾಡುವಾಗ ಭಾವೋದ್ವೇಗಕ್ಕೆ ಒಳಗಾದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ರಾಜಕೀಯ ಲಾಭಗಳಿಗಾಗಿ ಲಿಂಗಾಯತ ಸಮುದಾಯವನ್ನು ಒಡೆದರು. ಅವರ ಈ ಕಾರ್ಯಕ್ಕೆ ಸುತ್ತೂರು ಮಠದ ಸ್ವಾಮೀಜಿ ಸೇರಿದಂತೆ ಕೆಲವಾರು ಮಠಾಧಿಪತಿಗಳೂ ಕೈಜೋಡಿಸಿದ್ದರು ಎಂದು ಕಿಡಿಕಾರಿದರು.
-
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications