ಯಡಿಯೂರಪ್ಪಗೆ ಎಸ್ಸೆಂ ಕೃಷ್ಣ ನೀಡಿದ್ದು ನಂಜುಂಡೇಶ್ವರನ ಪ್ರಸಾದವಾ?
Recommended Video
ಬೆಂಗಳೂರು, ಜುಲೈ 26 : ರಾಜ್ಯದ ಇಪ್ಪತ್ತೈದನೇ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿ. ಎಸ್. ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಶುಕ್ರವಾರ ತಮ್ಮ ಜೇಬಿನಿಂದ ತೆಗೆದುಕೊಟ್ಟಿದ್ದೇನು ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹಲವು ಗಣ್ಯರು ಆಗಮಿಸಿ, ಹಸ್ತಲಾಘವ ಮಾಡಿ, ಶುಭ ಹಾರೈಸಿ, ಕಾರ್ಯಕ್ರಮದಲ್ಲಿ ಆಸೀನರಾಗಿ ಪ್ರಮಾಣವಚನದ ಶುಭ ಗಳಿಗೆಗೆ ಸಾಕ್ಷಿಯಾದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಮುಖಂಡ ಕೆ.ಎನ್.ರಾಜಣ್ಣ, ಶಾಸಕ ರೋಷನ್ ಬೇಗ್ ಕಾಣಿಸಿಕೊಂಡಿದ್ದು ಅಚ್ಚರಿಯನ್ನುಂಟು ಮಾಡಿತ್ತು. ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಇದೆಲ್ಲದರ ನಡುವೆ ಎಸ್ಸೆಂ ಕೃಷ್ಣ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಅಷ್ಟೇ ಅಲ್ಲ, ಯಡಿಯೂರಪ್ಪ ಅವರೊಂದಿಗೆ ಮಾತನಾಡಿ, ಹಸ್ತಲಾಘವ ಮಾಡಿದ ಅವರು, ತಾವು ತಂದಿದ್ದ ಪುಟ್ಟ ಕವರೊಂದನ್ನು ಜೇಬಿನಿಂದ ತೆಗೆದು ನೀಡಿದ್ದು ನೋಡುಗರ ಗಮನ ಸೆಳೆಯಿತು. ಅದೇ ವೇಳೆ ಕೊಟ್ಟಿದ್ದೇನು ಎಂಬ ಕುತೂಹಲವೂ ಎಲ್ಲರಲ್ಲಿ ಉಳಿದು ಹೋಯಿತು.

ಆದರೆ, ಅವರು ನೀಡಿದ್ದು ದೇವರ ಪ್ರಸಾದ ಎಂಬುದಂತೂ ಸತ್ಯ. ಏಕೆಂದರೆ ಅವರು ಸಂಜೆ ಮೈಸೂರಿನ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ತಮ್ಮ ಕುಟುಂಬ ಸಮೇತ ಆಗಮಿಸಿದ್ದರು. ಅಲ್ಲದೆ ದೇವರ ದರ್ಶನ ಪಡೆದು, ವಿಶೇಷ ಪೂಜೆಯನ್ನು ಸಲ್ಲಿಸಿದ್ದರು.
ಈ ಪೂಜಾ ಕಾರ್ಯಕ್ರಮದ ಬಳಿಕ ಬೆಂಗಳೂರಿಗೆ ತೆರಳಿ, ಯಡಿಯೂರಪ್ಪ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರಿಂದ ನಂಜುಂಡೇಶ್ವರನ ಪ್ರಸಾದವನ್ನು ನೀಡಿರಬಹುದು ಎಂಬುದು ಸದ್ಯದ ಮಟ್ಟಿಗೆ ಚರ್ಚೆಯಲ್ಲಿದೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications