ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಪರೇಷನ್ ಕಮಲ ನಡೆಸಲೇ ಇಲ್ಲ, ಚುನಾವಣೆ ಬಗ್ಗೆ ಚರ್ಚೆ: ಬಿಎಸ್ವೈ

|
Google Oneindia Kannada News

Recommended Video

ಆಪರೇಷನ್ ಕಮಲ ನಡೆಸೇ ಇಲ್ವಂತೆ BSY..! | Oneindia Kannada

ಬೆಂಗಳೂರು, ಜನವರಿ 17: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷಯಡಿಯೂರಪ್ಪನವರು ಬುಧವಾರ ಮಧ್ಯರಾತ್ರಿ 12 ಗಂಟೆ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾ ಶ್ರೀ ಗಳನ್ನು ಭೇಟಿ ಮಾಡಲು ದೆಹಲಿಯಿಂದ ನೇರವಾಗಿ ಬಂದಿದ್ದೇನೆ ಎಂದರು.

ಕರ್ನಾಟಕದ ರಾಜಕೀಯ ಪರಿಸ್ಥಿತಿ ಏನಾಗಲಿದೆ? ಏನು ಹೇಳುತ್ತದೆ ಜ್ಯೋತಿಷ್ಯ?ಕರ್ನಾಟಕದ ರಾಜಕೀಯ ಪರಿಸ್ಥಿತಿ ಏನಾಗಲಿದೆ? ಏನು ಹೇಳುತ್ತದೆ ಜ್ಯೋತಿಷ್ಯ?

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ದಗಂಗಾ ಶ್ರೀಗಳ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನಲೆಯಲ್ಲಿ ವೆಂಟಿಲೇಟರ್ ಮೂಲಕ ಹಳೆಯ ಮಠದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚೇತರಿಸಿಕೊಳ್ಳುವ ಭರವಸೆಯಿದೆ, ಅವರ ದರ್ಶನ ಪಡೆಯಲು ತೆರಳುತ್ತಿದ್ದೇನೆ ಎಂದರು.

BS Yeddyurappa says no Operation Kamala, Preparation for LS Polls

ಆಪರೇಷನ್ ಕಮಲ ನಡೆಸಲಿಲ್ಲ: ನಾವು ಯಾವ ಆಪರೇಷನ್ ಮಾಡಲು ಹೋಗಿರಲಿಲ್ಲ. ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ನಮ್ಮ ಒಬ್ಬ ಶಾಸಕರಿಗೆ ಮಂತ್ರಿ ಮಾಡುತ್ತೇನೆ ಎಂದು ಆಮಿಷ ಒಡ್ಡಿದ್ದರು. ಕಾಂಗ್ರೆಸ್, ಜೆಡಿಎಸ್ ಮುಖಂಡರಿಂದಲೇ ಬಿಜೆಪಿ ಶಾಸಕರಿಗೆ ಆಫರ್ ಬಂದಿತ್ತು. ಉಳಿದೆಲ್ಲವೂ ಗಾಳಿ ಸುದ್ದಿ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Operation ಕಮಲ ಯಶಸ್ಸಾಗಲು ಸಾಧ್ಯವಿಲ್ಲ ಅನ್ನೋದಿಕ್ಕೆ ಇಲ್ಲಿವೆ 4 ಕಾರಣಗಳು
ಆಡಳಿತ ಪಕ್ಷದ ಅತೃಪ್ತ ಶಾಸಕರನ್ನು 'ಆಪರೇಷನ್ ಕಮಲ'ದ ಮೂಲಕ ಸೆಳೆದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಪ್ರಯತ್ನ ನಡೆಸಿದ್ದು, ಹೀಗಾಗಿಯೇ ಬಿಜೆಪಿಯ ಎಲ್ಲ ಶಾಸಕರಿಗೆ ಗುರುಗ್ರಾಮದ ಹೋಟೆಲ್ ನಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ ಎಂದು ಹೇಳಲಾಗಿತ್ತು.

ಆದರೆ, ಬಿಜೆಪಿ ಶಾಸಕರನ್ನು ಕಾಂಗ್ರೆಸ್ -ಜೆಡಿಎಸ್ ಮುಖಂಡರಿಂದ ರಕ್ಷಿಸುವ ಸಲುವಾಗಿ ಗುರುಗ್ರಾಮದಲ್ಲಿರಿಸಲಾಗಿತ್ತು ಎಂದು ಯಡಿಯೂರಪ್ಪ ಹೇಳಿದರು.

ಆಪರೇಷನ್ ಕಮಲ : ತಿಳಿಯಬೇಕಾದ 7 ಪ್ರಮುಖ ಸಂಗತಿಗಳುಆಪರೇಷನ್ ಕಮಲ : ತಿಳಿಯಬೇಕಾದ 7 ಪ್ರಮುಖ ಸಂಗತಿಗಳು

ಶಾಸಕರೆಲ್ಲ ಒಟ್ಟಾಗಿ ಲೋಕಸಭಾ ರಣತಂತ್ರದ ಬಗ್ಗೆ ಚರ್ಚೆ ನಡೆಸಿದೆವು, ಈ ಬಾರಿ 20 ಲೋಕಸಭಾ ಸೀಟು ಗೆಲ್ಲಬೇಕು ಎಂಬುದು ನಮ್ಮ ಗುರಿ. ನಾಳೆ ಎಲ್ಲರೂ ಬೆಂಗಳೂರಿಗೆ ಬರಲಿದ್ದಾರೆ. ಚುನಾವಣೆಗೆ ಸಿದ್ಧತೆ ಆರಂಭವಾಗಿದೆ ಎಂದರು.

English summary
Former CM, BJP state president BS Yeddyurappa returned to Bengaluru and said no Operation Kamala, we were busy in preparation for LS Polls. The BJP has also advised the MLAs to return to Bengaluru and get actively involved in preparations for the Lok Sabha polls
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X