ಅಂಬೇಡ್ಕರ್ ಜಯಂತಿ ಅಂಗವಾಗಿ ದಲಿತರ ಮನೆಯಲ್ಲಿ ಬಿಎಸ್ ವೈ ಉಪಹಾರ
ಬೆಂಗಳೂರು, ಏಪ್ರಿಲ್ 14: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಅಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ನೆಲಮಂಗಲದ ದಲಿತ ಮನೆಯೊಂದರಲ್ಲಿ ಉಪಹಾರ ಸ್ವೀಕರಿಸಿದರು.
ಬೆಂಗಳೂರಿನ ನೆಲಮಂಗಲ ತಾಲ್ಲೂಕಿನ ದಲಿತ ದಂಪತಿ ಮೈಲನಹಳ್ಳಿಯಲ್ ಮಂಜುಳಾ ಮತ್ತು ನರಸಿಂಹ ಮೂರ್ತಿ ನಿವಾಸದಲ್ಲಿ ಉಪಹಾರ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾಚೇತನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಸಿ.ಪಿ.ಯೋಗೇಶ್ವರ್, ಎಂ.ಜಿ.ನಾಗರಾಜ್, ಸಚ್ಚಿದಾನಂದ ಮುಂತಾದವರು ಉಪಸ್ಥಿತರಿದ್ದರು.

ದಲಿತ ಕಾಲೋನಿ ಭೇಟಿಯ ನಂತರ ಶಾಂತಿನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ, ಡಾಲರ್ಸ್ ಕಾಲೋನಿಯಲ್ಲಿ ಸಫಾಯಿ ಕರ್ಮಚಾರಿಗಳೊಂದಿಗೆ ಸಂವಾದ, ದೊಡ್ಡಬಳ್ಳಾಪುರದಲ್ಲಿ ನೇಕಾರರ ಮನೆಗೆ ಭೇಟಿ ಹೀಗೆ ವಿವಿಧ ಕಾರ್ಯಕ್ರಮಗಳಲ್ಲಿ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications