ಕುಮಾರಸ್ವಾಮಿಯಿಂದ ಲಿಂಗಾಯತ ಮಠಾಧೀಶರಿಗೆ ಅವಮಾನ: ಬಿಎಸ್‌ವೈ ಆರೋಪ

ಬೆಂಗಳೂರು, ಮೇ 24: ಮುಖ್ಯಮಂತ್ರಿ ಕುಮಾರಸ್ವಾಮಿ ಎಲ್ಲಾ ಮಠಾಧೀಶರಿಗೆ ಅಪಮಾನ ಮಾಡಿದ್ದಾರೆ, ಸ್ವಾಮೀಜಿಗಳಿಗೆ ಬನ್ನಿ ರಾಜಕೀಯಕ್ಕೆ ಎಂದು ಹಗುರವಾಗಿ ಮಾತಾಡಿದ್ದಾರೆ, ಅವರವರ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರ ಸ್ವಾಮೀಜಿಗಳಿಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಡಾಲರ್ಸ್‌ ಕಾಲೊನಿಯ ನಿವಾಸದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹಾಗೂ ಸಾಣೇಹಳ್ಳಿ ಶ್ರೀಗಳ ಬಗ್ಗೆ ಕುಮಾರಸ್ವಾಮಿ ಹಗುರವಾಗಿ ಮಾತಾಡಿದ್ದಾರೆ. ಕುಮಾರಸ್ವಾಮಿಯವರೇ ನೀವು ಎಷ್ಟು ಕ್ಷೇತ್ರದಲ್ಲಿ ಗೆದ್ದಿದೀರಿ, ಅಶ್ವಮೇಧಯಾಗದ ಕುದುರೆ ಕಟ್ಟಿ ಹಾಕಲು ನೀವು ಎಷ್ಟು ಸೀಟ್ ಗೆದ್ದಿದ್ದೀರಿ ಎಂದು ಗೊತ್ತಿದೆಯಾ ಎಂದು ಪ್ರಶ್ನಿಸಿದರು.

BSY accuses HDK insulted seers of Lingayath

ಕುಮಾರಸ್ವಾಮಿಯವರೆ ನೀವು 149 ಕಡೆ ಠೇವಣಿ ಕಳೆದುಕೊಂಡಿರೋದು ಗೊತ್ತಿದೆಯಾ, ಜನ ನಿಮ್ಮನ್ನು ತಿರಸ್ಕರಿಸಿದ್ದಾರೆ, ರಾಷ್ಟ್ರೀಯ ನಾಯಕರನ್ನು ತಬ್ಬಿಕೊಳ್ಳುತ್ತೀರಾ ಆದರೆ ನಿಮ್ಮ ಮುಖ್ಯಮಂತ್ರಿ ಮಾಡಿದ ಸಿದ್ದರಾಮಯ್ಯನವರನ್ನು ಮಾತನಾಡಿಸಿಲ್ಲ, ಇದು ಸಿದ್ದರಾಮಯ್ಯ ಮತ್ತು ಅವರ ಸಮುದಾಯಕ್ಕೆ ಮಾಡಿರುವ ಅಪಮಾನ ಅಲ್ಲವಾ ಎಂದರು.

ಎಚ್‌ಡಿ ಕುಮಾರಸ್ವಾಮಿಯವರು ಮೇ 23ರಂದು ಕರ್ನಾಟದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಂತರ ಹಲವು ದೇವಾಲಯಗಳು ಹಾಗೂ ಮಠಗಳಿಗೆ ಭೇಟಿ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+