ಬಿಎಸ್ವೈ ಆಡಿಯೋ: ಆಂತರಿಕ ತನಿಖಾ ಸಮಿತಿ ರಚನೆಯಲ್ಲಿ ವಿಳಂಬ ಏಕೆ?
ಬೆಂಗಳೂರು, ನವೆಂಬರ್ 6: ಆಪರೇಷನ್ ಕಮಲ ಮಾಡಿದ್ದು ಹೌದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
ಅದಕ್ಕೊಂದು ಆಂತರಿಕ ತನಿಖಾ ಸಮಿತಿ ರಚಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದರು. ಆದರೆ ಇಲ್ಲಿಯವರೆಗೂ ಯಾವುದೇ ತನಿಖಾ ಸಮಿತಿ ರಚನೆಯಾಗಿಲ್ಲದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇದೀಗ ನಳಿನ್ ಕುಮಾರ್ ದೆಹಲಿ ಪ್ರವಾಸದಲ್ಲಿದ್ದು ಅಲ್ಲಿಂದ ಬಂದ ಬಳಿಕ ಸಮಿತಿ ರಚನೆಯಾಗಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.

ತನಿಖಾ ಸಮಿತಿ ವಿಳಂಬ ಏಕೆ?
ಒಂದೊಮ್ಮೆ ತನಿಖಾ ಸಮಿತಿ ರಚಿಸಿ ಅದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ರೀತಿ ಹೇಳಿದ್ದು ಹೌದು ಎಂದು ಸಾಬೀತಾದರೆ, ವರದಿ ಬಂದರೆ ಅದರಿಂದ ಪಕ್ಷಕ್ಕೆ ಕೆಟ್ಟ ಹೆಸರು. ಹಾಗಾಗಿ ತನಿಖಾ ಸಮಿತಿ ರಚನೆ ವಿಳಂಬ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಭಾನುವಾರವೇ ಸಮಿತಿ ರಚನೆ ಎಂದು ಹೇಳಿದ್ರು
ಕಳೆದ ಭಾನುವಾರವೇ ಸಮಿತಿ ರಚಿಸುವುದಾಗಿ ನಳಿನ್ ಕುಮಾರ್ ಕಟೀಲು ಹೇಳಿದ್ದರು. ಆದರೆ ಇನ್ನೂ ಎರಡು ದಿನಗಳ ಕಾಲ ಸಮಿತಿ ರಚನೆ ಅನುಮಾನವಾಗಿದೆ. ಕಟೀಲ್ ದೆಹಲಿಯಿಂದ ಬಂದ ಬಳಿಕವಷ್ಟೇ ಸಮಿತಿ ರಚನೆಯಾಗಲಿದೆ.

ಯಡಿಯೂರಪ್ಪ ಆಡಿಯೋ ಪರಿಗಣಿಸುತ್ತೇವೆ
ಸುಪ್ರೀಂ ಪೀಠ, ಸಿಡಿ ವಿಚಾರ ಬಿಟ್ಟು ಎಲ್ಲವನ್ನೂ ಕೇಳಿಯೇ ಆಗಿದೆ. ತೀರ್ಪು ಸಿದ್ದಗೊಳ್ಳುತ್ತಿರುವ ಹಂತದಲ್ಲಿ ಆಡಿಯೋ ಕುರಿತು ಹೊಸ ವಾದ ಬೇಡ. ತೀರ್ಪಿನಲ್ಲಿ ಸಿಡಿ ವಿಚಾರವನ್ನು ಪರಿಗಣಿಸುತ್ತೇವೆ ಎಂದಿದೆ.

ಏನಿದು ಆಪರೇಷನ್ ಕಮಲ ಆಡಿಯೋ
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಪರೇಷನ್ ಕಮಲದ ಉಸ್ತುವಾರಿಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಹೊತ್ತಿದ್ದರು ಎಂದು ಮಾತನಾಡಿದ್ದರು ಎನ್ನಲಾಗಿತ್ತು. ಬಿಎಸ್ ಯಡಿಯೂರಪ್ಪ ಧ್ವನಿಯನ್ನೇ ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಜತೆಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಯ ವಿರುದ್ಧ ಈ ಆಡಿಯೋವನ್ನು ಅಸ್ತ್ರವಾಗಿ ಬಳಸಿದ್ದರು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications