ಮೋದಿ ಸಮಾವೇಶಕ್ಕೆ ಸ್ವಾಗತಿಸುತ್ತಿದೆ ಬಿಎಸ್ವೈ ಪೋಸ್ಟರ್!
ಬೆಂಗಳೂರು, ನ. 13 : ಮಾಜಿ ಮುಖ್ಯಮಂತ್ರಿ ಮತ್ತು ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳುವ ವಿಷಯ ಯಕ್ಷಪ್ರಶ್ನೆಯಾಗಿದೆ. ಆದರೆ, ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಸದ್ಯ ಮೋದಿ ಸಮಾವೇಶದ ಸ್ಥಳದಲ್ಲೂ ಯಡಿಯೂರಪ್ಪ ಪೋಸ್ಟರ್ ಜನರನ್ನು ಸ್ವಾಗತಿಸುತ್ತಿದೆ.
ನ.17ರ ಭಾನುವಾರ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶದ ಸುತ್ತ-ಮುತ್ತಲಿನ ಸ್ಥಳದಲ್ಲಿ ವಿವಿಧ ನಾಯಕರು ಪೋಸ್ಟರ್ ಗಳು ರಾರಾಜಿಸುತ್ತಿವೆ. ಅವುಗಳಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪೋಸ್ಟರ್ ಸಮಾವೇಶದ ಪ್ರವೇಶ ದ್ವಾರದ ಬಳಿಯೇ ಇದೆ.

ಶಾದಿ ಭಾಗ್ಯ ಯೋಜನೆ ವಿಸ್ತರಣೆ ಮತ್ತು ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಯಡಿಯೂರಪ್ಪ ನಡೆಸುತ್ತಿರುವ ಅಹೋರಾತ್ರ ಧರಣಿಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡುತ್ತಿರುವ ಈ ಪೋಸ್ಟರ್ ಮೋದಿ ಸಮಾವೇಶದ ಪ್ರವೇಶ ದ್ವಾರದ ಬಳಿಯಲ್ಲಿಯೇ ಇದೆ. ಯಡಿಯೂರಪ್ಪ ಬಿಜೆಪಿಗೆ ಮರಳದಿದ್ದರೂ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಿಸಿದ್ದಾರೆ.
ಆದ್ದರಿಂದ ಯಡಿಯೂರಪ್ಪ ಅಭಿಮಾನಿಗಳು ನರೇಂದ್ರ ಮೋದಿ ಸಮಾವೇಶದ ಹೆಬ್ಬಾಗಿಲಲ್ಲಿ ಇಂತಹ ಪೋಸ್ಟರ್ ಹಾಕಿರಬಹುದು. ಆದರೆ, ಬಿಜೆಪಿ ನಾಯಕರು ಸಮಾವೇಶದ ದಿನ ಅದನ್ನು ಅಲ್ಲಿಂದ ತೆಗೆಯುತ್ತಾರೋ ಅಥವ ಹಾಗೆ ಉಳಿಸಿಕೊಳ್ಳುತ್ತಾರೋ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕರೊಬ್ಬರು ಜನರಿಗೆ ದೀಪಾವಳಿ ಶುಭಾಶಯ ಸಲ್ಲಿಸಲು ಹಾಕಿದ್ದ ಪೋಸ್ಟರ್ ಗಳಲ್ಲಿಯೂ ಬಿಜೆಪಿ ನಾಯಕರ ಚಿತ್ರಗಳ ನಡುವೆ ಯಡಿಯೂರಪ್ಪ ಅವರ ಫೋಟೋ ಹಾಕಿದ್ದರು. ಅದಕ್ಕೂ ಮುನ್ನ ಗೋವಾದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯ ಸಂದರ್ಭದಲ್ಲಿಯೂ ಬಿಜೆಪಿ ನಾಯಕರ ಪೋಟೋ ಜೊತೆಗೆ ಯಡಿಯೂರಪ್ಪ ಫೋಟೋ ಕಾಣಿಸಿಕೊಂಡಿತ್ತು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications