ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸೌಧದ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ ಸಿಎಂ ಯಡಿಯೂರಪ್ಪ

|
Google Oneindia Kannada News

Recommended Video

ವಿಧಾನಸೌಧದ ಕಚೇರಿಗೆ ಬಿಎಸ್‍ವೈ ದಿಢೀರ್ ಭೇಟಿ | Oneindia Kannada

ಬೆಂಗಳೂರು, ಆಗಸ್ಟ್ 1: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಧಾನಸೌಧ ಸ್ವೀಕೃತಿ ಶಾಖೆಗೆ
ದಿಢೀರ್ ಭೇಟಿ ನೀಡಿ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದಾರೆ.

ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದ ಸಿಬ್ಬಂದಿಗೆ ತರಾಟೆ ತೆಗೆದುಕೊಂಡಿದ್ದು ಆಡಳಿತ ಯಂತ್ರ ಚುರುಕುಗೊಳಿಸಲು ಪ್ರಯತ್ನ ಮಾಡಿದ್ದಾರೆ.

ಕೇವಲ ಭೇಟಿ ನೀಡಿದ್ದಷ್ಟೆ ಅಲ್ಲದೆ ಸಿಬ್ಬಂದಿಗಳ ಬೆಂಡೆತ್ತಿದ್ದಾರೆ. ಸ್ವಲ್ಪ ಸುಳಿವು ಇಲ್ಲದೆಯೇ ಏಕಾಏಕಿ ಕಚೇರಿಗಳಿಗೆ ಭೇಟಿ ನೀಡಿದ್ದಾರೆ. ಸರಿಯಾದ ಸಮಯದಲ್ಲಿ ಕಚೇರಿಗೆ ಬರದ ಸಿಬ್ಬಂದಿ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ.

ಆಗಸ್ಟ್‌ 5ರವರೆಗೆ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಇಲ್ಲಆಗಸ್ಟ್‌ 5ರವರೆಗೆ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಇಲ್ಲ

ನಾಳೆಯಿಂದ ಸರಿಯಾದ ಸಮಯಕ್ಕೆ ಬರಬೇಕು, ಒಂದೊಮ್ಮೆ ತಡವಾದರೆ ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

BSY Sudden Visit To Vidhana Soudha

ವಿಧಾನ ಸೌಧದ ನೆಲಮಹಡಿಯಲ್ಲಿರುವ ಸ್ವೀಕೃತಿ ಮತ್ತು ರವಾನೆ ಶಾಖೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರಿ ಕೆಲಸದ ವೇಳೆಯಲ್ಲಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಚೇರಿಯಲ್ಲಿ ಹಾಜರಿರಬೇಕೆಂಬ ಸೂಚನೆಯನ್ನು ನೀಡುವುದರ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

ಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ ಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಒಂದು ವಾರವಾಗುತ್ತಿದೆ.ತಮ್ಮ ಕೆಲಸ ಆರಂಭಿಸಿದ್ದಾರೆ.

ಆಗಸ್ಟ್ 5 ರ ನಂತರ ಸಂಪುಟ ವಿಸ್ತರಣೆ ಮಾಡಲಿದ್ದು, ಎರಡು ಹಂತಗಳಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂದು ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಅಮಿತ್ ಷಾ ಜೊತೆ ಚರ್ಚಿಸಲಿದ್ದಾರೆ.

English summary
Chief minister BS Yeddyurappa gave random visit to Vidhanasoudha offices and charged to officers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X