ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿವಿಧ ಕಾರ್ಯಕ್ರಮಗಳಿಗೆ ಬಿಎಸ್ ವೈ ಚಾಲನೆ
ಬೆಂಗಳೂರು, ಜನವರಿ 5: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿವಿಧ ಕಾರ್ಯಕ್ರಮಗಳಿಗೆ ಬುಧವಾರ (ಜನವರಿ 6, 2021) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಈ ಕುರಿತು ಮಂಡಳಿಯ ಅಧ್ಯಕ್ಷರಾದ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ವೇಳೆ, ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ 287 ಕೋಟಿ ರುಪಾಯಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿರುವುದಾಗಿ ಹೇಳಿದ್ದರು.
ಅಂದ ಹಾಗೆ ಬುಧವಾರದಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ, ಸಾಂದೀಪನಿ ಶಿಷ್ಯವೇತನ ಯೋಜನೆ, ಪುರುಷೋತ್ತಮ ಯೋಜನೆ, ಅರುಂಧತಿ, ಅನ್ನದಾತ ಹಾಗೂ ಮೈತ್ರೇಯಿ ಯೋಜನೆಗಳಿಗೆ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿಯನ್ನು ಸಹ ಅವರು ಹಂಚಿಕೊಂಡಿದ್ದರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಯೋಜನೆ ವಿವರಗಳು ಹೀಗಿವೆ:

* ಐನೂರು ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ.
* ಕಳೆದ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ, ಒಂದು ಜಿಲ್ಲೆಗೆ ತಲಾ ಮೂವರು ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ.
* ಚಾಣಕ್ಯ ಆಡಳಿತ ತರಬೇತಿ ಯೋಜನೆಯ ಅಡಿಯಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ.
* ಉನ್ನತ ಶಿಕ್ಷಣ ಪೂರ್ಣಗೊಳಿಸುವ 7500 ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಾಂದೀಪನಿ ಶಿಷ್ಯವೇತನದ ಅಡಿಯಲ್ಲಿ ಆರ್ಥಿಕ ನೆರವು.
* ಅರುಂಧತಿ ಯೋಜನೆಯ ಹೆಸರಲ್ಲಿ ಬಡ ಹೆಣ್ಣುಮಕ್ಕಳ ಮದುವೆಗೆ 25 ಸಾವಿರ ರುಪಾಯಿ.
* ಅನ್ನದಾತ ಯೋಜನೆ ಹೆಸರಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ಕೊಳವೆಬಾವಿ ಕೊರೆಸುವುದಕ್ಕೆ, ಟ್ರ್ಯಾಕ್ಟರ್ ಖರೀದಿಗೆ ಮತ್ತು ಹೈನುಗಾರಿಕೆಗೆ ಧನಸಹಾಯ.
* ಮೈತ್ರೇಯಿ ಯೋಜನೆ ಅಡಿಯಲ್ಲಿ ಅರ್ಚಕರು, ಪುರೋಹಿತರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರುಪಾಯಿಯ ಬಾಂಡ್ ನೀಡಲಾಗುತ್ತದೆ.
Recommended Video
* ಬ್ರಾಹ್ಮಣರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ ಜಿಲ್ಲೆಗಳಲ್ಲಿ ಸಹಾಯವಾಣಿ ಕೇಂದ್ರ ತೆರೆಯುವುದಕ್ಕೆ ಚಿಂತನೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications