ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿವಿಧ ಕಾರ್ಯಕ್ರಮಗಳಿಗೆ ಬಿಎಸ್ ವೈ ಚಾಲನೆ
ಬೆಂಗಳೂರು, ಜನವರಿ 5: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿವಿಧ ಕಾರ್ಯಕ್ರಮಗಳಿಗೆ ಬುಧವಾರ (ಜನವರಿ 6, 2021) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.
ಈ ಕುರಿತು ಮಂಡಳಿಯ ಅಧ್ಯಕ್ಷರಾದ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ವೇಳೆ, ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ 287 ಕೋಟಿ ರುಪಾಯಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿರುವುದಾಗಿ ಹೇಳಿದ್ದರು.
ಅಂದ ಹಾಗೆ ಬುಧವಾರದಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ, ಸಾಂದೀಪನಿ ಶಿಷ್ಯವೇತನ ಯೋಜನೆ, ಪುರುಷೋತ್ತಮ ಯೋಜನೆ, ಅರುಂಧತಿ, ಅನ್ನದಾತ ಹಾಗೂ ಮೈತ್ರೇಯಿ ಯೋಜನೆಗಳಿಗೆ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿಯನ್ನು ಸಹ ಅವರು ಹಂಚಿಕೊಂಡಿದ್ದರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಯೋಜನೆ ವಿವರಗಳು ಹೀಗಿವೆ:

* ಐನೂರು ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ.
* ಕಳೆದ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ, ಒಂದು ಜಿಲ್ಲೆಗೆ ತಲಾ ಮೂವರು ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ.
* ಚಾಣಕ್ಯ ಆಡಳಿತ ತರಬೇತಿ ಯೋಜನೆಯ ಅಡಿಯಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ.
* ಉನ್ನತ ಶಿಕ್ಷಣ ಪೂರ್ಣಗೊಳಿಸುವ 7500 ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಾಂದೀಪನಿ ಶಿಷ್ಯವೇತನದ ಅಡಿಯಲ್ಲಿ ಆರ್ಥಿಕ ನೆರವು.
* ಅರುಂಧತಿ ಯೋಜನೆಯ ಹೆಸರಲ್ಲಿ ಬಡ ಹೆಣ್ಣುಮಕ್ಕಳ ಮದುವೆಗೆ 25 ಸಾವಿರ ರುಪಾಯಿ.
* ಅನ್ನದಾತ ಯೋಜನೆ ಹೆಸರಲ್ಲಿ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ಕೊಳವೆಬಾವಿ ಕೊರೆಸುವುದಕ್ಕೆ, ಟ್ರ್ಯಾಕ್ಟರ್ ಖರೀದಿಗೆ ಮತ್ತು ಹೈನುಗಾರಿಕೆಗೆ ಧನಸಹಾಯ.
* ಮೈತ್ರೇಯಿ ಯೋಜನೆ ಅಡಿಯಲ್ಲಿ ಅರ್ಚಕರು, ಪುರೋಹಿತರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರುಪಾಯಿಯ ಬಾಂಡ್ ನೀಡಲಾಗುತ್ತದೆ.
Recommended Video
* ಬ್ರಾಹ್ಮಣರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ ಜಿಲ್ಲೆಗಳಲ್ಲಿ ಸಹಾಯವಾಣಿ ಕೇಂದ್ರ ತೆರೆಯುವುದಕ್ಕೆ ಚಿಂತನೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications