BTM Layout Constituency : ಕ್ಷೇತ್ರದಲ್ಲಿ ಹೇಗಿದೆ ವಿಧಾನಸಭೆ ಚುನಾವಣಾ ಕಾವು?: ವರದಿ, ವಿಶ್ಲೇಷಣೆ ಇಲ್ಲಿದೆ
ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಕೈ ನಾಯಕ ರಾಮಲಿಂಗಾ ರೆಡ್ಡಿ ಮೂರು ಬಾರಿ ಚುನಾಯಿತರಾಗಿದ್ದಾರೆ.2023ರ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಹಿನ್ನೆಡೆ ಉಂಟು ಮಾಡಲು ಜೆಡಿಎಸ್, ಬಿಜೆಪಿ ಸಜ್ಜಾಗಿವೆ.
ಬೆಂಗಳೂರು, ಫೆಬ್ರವರಿ 21: ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣ ಮಾಡಿದರೂ ಸಹಿತ ಸಿಲಿಕಾನ್ ಸಿಟಿ ಬೆಂಗಳೂರಿನ ದಕ್ಷಿಣದ ಒಂದು ಪ್ರದೇಶವು 'ಬಿಟಿಎಂ ಲೇಔಟ್' ಎಂದೇ ಪ್ರಸಿದ್ಧಿ ಪಡೆದಿದೆ. ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಟಿಎಂ ಲೇಔಟ್ ಸಹ ಒಂದಾಗಿದೆ.
ಭೌಗೋಳಿಕವಾಗಿ ಈ ಬಿಟಿಎಂ ಬಡಾವಣೆ ವಿಸ್ತಾರವಾಗಿದೆ. ಸಮೃದ್ಧವಾದ ತಾವರೆಕೆರೆ, ಮಡಿವಾಳ ಭೈರಸಂದ್ರವನ್ನು ಕ್ಷೇತ್ರ ಒಳಗೊಂಡಿದೆ. ನಗರದ ಹೊರ ವರ್ತುಲ ರಸ್ತೆ (ORR)ಯು ಈ ಲೇಔಟ್ ಅನ್ನು ಮೊದಲನೇ ಹಂತ ಮತ್ತು ಎರಡನೇ ಹಂತವಾಗಿ ಬೇರ್ಪಡಿಸುತ್ತದೆ. ಈ ಪ್ರದೇಶಕ್ಕೆ ಅಂಟಿಕೊಂಡಿರುವ ತಾವರೆಕೆರೆಗೆ ದೇಶ, ವಿದೇಶಗಳಿಂದ ಹಕ್ಕಿಗಳು ವಲಸೆ ಬರುತ್ತವೆ. ಕೋರಮಂಗಲ, HSR ಬಡಾವಣೆ, ಬನ್ನೇರುಘಟ್ಟ ರಸ್ತೆ, ಜೆಪಿನಗರ, ಮಡಿವಾಳ ಹಾಗೂ ಜಯನಗರ ಬಿಟಿಎಂ ಲೇಔಟ್ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ವಾಸಸ್ಥಾನಕ್ಕೆ ನಗರದ ಹಲವು ಪ್ರದೇಶಗಳ ಪೈಕಿ ಇದು ಸಹ ಅನುಕೂಲಕರ ಪರಿಸರ ಹೊಂದಿದೆ.
ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ಹತ್ತು ಕಿಲೋಮೀಟರ್ ದೂರದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ (ಅಭಯಾರಣ್ಯ) ಇದೆ. ಈ ಕ್ಷೇತ್ರವು ಮೊದಲು ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಕ್ಷೇತ್ರಗಳ ವಿಂಗಡಣೆ ಬಳಿಕ ಸ್ವತಂತ್ರ ವಿಧಾನಸಭಾ ಕ್ಷೇತ್ರವಾಯಿತು. ಇಲ್ಲಿಂದ ಕಾಂಗ್ರೆಸ್ನ ನಾಯಕ ರಾಮಲಿಂಗಾ ರೆಡ್ಡಿ ಅವರು ಸತತವಾಗಿ ಮೂರು ಬಾರಿ ಗೆದ್ದು ಬೀಗಿದ್ದಾರೆ. ಇದೀಗ ಅವರು ನಾಲ್ಕನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿ 2023ನೇ ವಿಧಾನಸಭಾ ಚುನಾವಣೆ ಎದುರು ನೋಡುತ್ತಿದ್ದಾರೆ.

ಬಿಟಿಎಂ ಲೇಔಟ್ ಕ್ಷೇತ್ರದ ರಾಜಕೀಯ ಹಿನ್ನೆಲೆ
ಬಿಟಿಎಂ ಲೇಔಟ್ ಕ್ಷೇತ್ರದ ಇತಿಹಾಸ ನೋಡುವುದಾದರೆ ಸದ್ಯ ರಾಜ್ಯದ ಅಧಿಕಾರ ವಹಿಸಿಕೊಂಡಿರುವ ಬಿಜೆಪಿ ಇಲ್ಲಿ ಒಂದಕ್ಕು ಹೆಚ್ಚು ಭಾರಿ ಗೆದ್ದಿಲ್ಲ. ಹಿಂದಿನಿಂದಲೂ ಈ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯೇ ಆಗಿದೆ. 1967ರ ಎಸ್.ನಿಜಲಿಂಗಪ್ಪ ಅವರ ಕಾಲದಿಂದಲೂ ಇಲ್ಲಿ ಕಾಂಗ್ರೆಸ್ಸೇ ಸಾರ್ವಭೌಮ. 2008 ರಿಂದ ರಾಮಲಿಂಗಾರೆಡ್ಡಿ ಅವರು ಮೂರು ಬಾರಿ ಚುನಾಯಿತರಾಗಿದ್ದಾರೆ, ಶಾಸಕರಾಗಿದ್ದಾರೆ. 2004ರಲ್ಲಿ ಒಮ್ಮೆ ಮಾತ್ರವೇ ಬಿಜೆಪಿಯ ಗಂಗಾಧರ್ ನಾಗೇಶ್ ಭಟ್ ಅವರು ಗೆದ್ದಿದ್ದಾರೆ. ಇದರ ಹೊರತು ಕಾಂಗ್ರೆಸ್ ಮಣಿಸುವಲ್ಲಿ ಸಾಕಷ್ಟು ಭಾರಿ ಜೆಡಿಎಸ್ ಮತ್ತು ಬಿಜೆಪಿ ವಿಫಲವಾಗಿವೆ.

ಬಿಟಿಎಂ ಲೇಔಟ್: ರಾಮಲಿಂಗಾ ರೆಡ್ಡಿ ಗೆಲುವಿನ ನಿರೀಕ್ಷೆ
2023ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನಾಯಕ, ಶಾಸಕ ರಾಮಲಿಂಗಾರೆಡ್ಡಿ ಅವರು ನಾಲ್ಕನೇ ಬಾರಿಗೆ ಜಯದ ನಿರೀಕ್ಷೆಯಲ್ಲಿದ್ದಾರೆ. ಅವರಿಗೆ ಶಾಸಕರಾಗಿ, ಸಚಿವರಾಗಿಯೂ ಅನುಭವ ಇದೆ. ಜನರ ಸಮಸ್ಯೆ ಆಲಿಸುವ, ಸಾರ್ವಜನಿಕ ಕೈಗೆ ಸಿಗುವ ಜನನಾಯಕರ ಪೈಕಿ ಇವರು ಹೌದು. ಎಲ್ಲರೊಟ್ಟಿಗೆಯು ಸಮಾನರಾಗಿದ್ದು, ಅಪಾರ ಗೌರವ ಸಂಪಾದಿಸಿದ್ದಾರೆ. ಅವರು ತಮ್ಮ ಕಾರ್ಯಗಳಿಂದಲೇ ಹೆಚ್ಚು ಪ್ರಾಬಲ್ಯ ಹೊಂದಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮ ಮಾಡುವ ಮೂಲಕವೇ ಹೆಸರುವಾಸಿಯಾಗಿದ್ದಾರೆ. ಹೀಗಾಗಿ ಈ ಕ್ಷೇತ್ರ ಪಡೆದುಕೊಳ್ಳುವುದು ಬಿಜೆಪಿ ಮತ್ತು ಜೆಡಿಎಸ್ಗೆ ಅಷ್ಟು ಸುಲಭವಲ್ಲ ಎಂದು ರಾಜಕೀಯ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರಬಲ ಪೈಪೋಟಿ
ಇನ್ನೇನು ಚುನಾವಣೆ ಹತ್ತಿರವಾಗುತ್ತಿದೆ. ಈ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾದರೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಲಸಿಗರೇ ಹೆಚ್ಚಿರುವ ಈ ಕ್ಷೇತ್ರದಲ್ಲಿ ಸತತವಾಗಿ ಕೈ ನಾಯಕರು ಗೆಲುವಿನ ನಗೆ ಬೀರುತ್ತಿದ್ದಾರೆ. ಹೀಗಿರುವಾಗ ಬಿಜೆಪಿಗೆ ಈ ಕ್ಷೇತ್ರ ಧಕ್ಕಿಸಿಕೊಳ್ಳುವುದು ಕಷ್ಟಸಾಧ್ಯವಾಗಬಹುದು. ರಾಮಲಿಂಗಾರೆಡ್ಡಿ ಅವರನ್ನು ಮಣಿಸಲು ಬಿಜೆಪಿಯಲ್ಲಿ ನಾ ಮುಂದು, ತಾ ಮುಂದು ಎಂದು ಟಿಕೆಟ್ ಆಕಾಂಕ್ಷಿಗಳು ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಜೆಡಿಎಸ್ ಸಹ ಕಳೆದ 2018ರ ಚುನಾವಣೆಯಲ್ಲಿ ತೀವ್ರ ಹಣಾಹಣಿ ಮಧ್ಯೆ 20,000 ಮತಗಳ ಅಂತರದಿಂದ ಸೋಲುಂಡಿತ್ತು. ಈ ಸಲ ಬಿಜೆಪಿ ಹಾಗೂ ಜೆಡಿಎಸ್ ಎರಡು ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನೀಡಲಿವೆ.

ಬಿಟಿಎಂ ಲೇಔಟ್ ಕ್ಷೇತ್ರ: ಟಿಕೆಟ್ ಆಕಾಂಕ್ಷಿಗಳು ಯಾರು?
ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ರಾಮಲಿಂಗಾರೆಡ್ಡಿಯವರಿಗೇ ಟಿಕೆಟ್ ಎಂಬುದರಲ್ಲಿ ಎರಡು ಮಾತಿಲ್ಲ. ಬಹುತೇಕ ಅವರೇ ಪೈನಲ್ ಆಗಿದ್ದಾರೆ. ಇನ್ನೂ ಬಿಜೆಪಿಯಿಂದ ವಿವೇಕ್ ರೆಡ್ಡಿ ಸೇರಿದಂತೆ ಮತ್ತಿಬ್ಬರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಈ ಬಗ್ಗೆ ಸ್ಪಷ್ಟ ನಿಲುವು ತೋರದ ಬಿಜೆಪಿ ಬೇರೊಬ್ಬ ಪ್ರಭಾವಿ ನಾಯಕರನ್ನು ತಂದು ನಿಲ್ಲಿಸುವ ಸಾಧ್ಯತೆ ಇದೆ. ಇನ್ನೂ ಜೆಡಿಎಸ್ನಿಂದ ಕಳೆದ ಬಾರಿ ಸೋತ ದೇವದಾಸ್ ಅವರನ್ನು ಅಥವಾ ಹೊಸ ಮುಖ ಪರಿಚಯಿಸಬಹುದು. ಟಿಕೆಟ್ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಬಿಟ್ಟು ಉಳಿದ ಪಕ್ಷಗಳಿಂದ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ.
ಮತದಾರರ ಸಂಖ್ಯೆ
ವಾರ್ಡ್ -176
ಒಟ್ಟು ಮತದಾರರು- 2,83,000
ಒಕ್ಕಲಿಗರು- 55,000
ಲಿಂಗಾಯತ - 5,000
ಬ್ರಾಹ್ಮಣರು- 23,000
ಒಬಿಸಿ- 28,000
ಎಸ್ಸಿ-ಎಸ್ಟಿ - 52,000
ಮುಸ್ಲಿಂ - 12,000
ಇತರೆ-1,08,000
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications