ರೊಹಿಂಗ್ಯಾ ಮುಸ್ಲಿಮರ ಹೇಳಿಕೆ: ತೇಜಸ್ವಿ ಸೂರ್ಯಗೆ ರಾಮಲಿಂಗಾ ರೆಡ್ಡಿ ತಿರುಗೇಟು

ಬೆಂಗಳೂರು, ಡಿಸೆಂಬರ್ 11: ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿರುವ ರೊಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ಮತದಾರರ ಗುರುತಿನ ಚೀಟಿಗಳನ್ನು ಪಡೆಯುತ್ತಿದ್ದಾರೆ ಎಂಬ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಿಮ್ಮ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಅಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮ್ಮಿಂದ ಏಕೆ ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ.

'ನಮ್ಮ ಇಂದಿನ ಸಭೆಯಲ್ಲಿ, ರೊಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ಮತದಾರರ ಗುರುತಿನ ಚೀಟಿಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ವಿಚಾರವನ್ನು ಅನೇಕ ನಾಗರಿಕರು ನಮ್ಮ ಗಮನಕ್ಕೆ ತಂದಿದ್ದಾರೆ. ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಮತ್ತು ಬಿಟಿಎಂ ಲೇಔಟ್‌ನಲ್ಲಿ ನೈಜ ಮತದಾರರಿಗೆ ಮಾತ್ರ ವೋಟರ್ ಐಡಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ' ಎಂದು ತೇಜಸ್ವಿ ಸೂರ್ಯ ಗುರುವಾರ ಟ್ವೀಟ್ ಮಾಡಿದ್ದರು.

BTM Layout Congress MLA Ramalinga Reddy Hits Back At Tejasvi Surya Over Rohingya Muslims Remark

ಈ ಟ್ವೀಟ್ ಅನ್ನು ಹಂಚಿಕೊಂಡಿರುವ ರಾಮಲಿಂಗಾ ರೆಡ್ಡಿ, 'ನೀವು ಬಿಟಿಎಂನಲ್ಲಿ ರೊಹಿಂಗ್ಯಾ ಮುಸ್ಲಿಮರು ಮತದಾರರ ಐಡಿ ಪಡೆಯುತ್ತಿದ್ದಾರೆ ಎಂದು ಮಾತನಾಡಿದ್ದಾರೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ (ಆರು ವರ್ಷ) ನಿಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಅಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಏಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ? ಅವರನ್ನು ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಉದ್ದೇಶಕ್ಕೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ನಿಮ್ಮ ಸರ್ಕಾರ ಅದನ್ನು ಮಾಡುವಂತೆ ಮಾಡಿ' ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+