ಬೆಂಗಳೂರು ವಿವಿ ಪರೀಕ್ಷೆ ಪರಿಕರಗಳ ಖರೀದಿಗೆ ನೀತಿ ಸಂಹಿತೆ ಅಡ್ಡಿ
ಬೆಂಗಳೂರು, ಏಪ್ರಿಲ್ 26: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂವಾಗುವ ಪರೀಕ್ಷೆಗಳಿಗೆ ಬೇಕಾದ ಪರಿಕರಗಳನ್ನು ಕೊಳ್ಳಲು ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಬೆಂಗಳೂರು ವಿವಿಯಲ್ಲಿ ಮೇ 18 ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್, ಕಾನೂನು ವಿಭಾಗದ ಪರೀಕ್ಷೆಗಳು ಆರಂಭವಾಗಲಿದೆ.
ಆದರೆ ಪರೀಕ್ಷೆಗೆ ಬೇಕಾದ ಪರಿಕರಗಳ ಖರೀದಿಗೆ ಟೆಂಡರ್ ಪ್ರಕ್ರಿಯೆಗೆ ನೀತಿ ಸಂಹಿತೆ ಅಡ್ಡಿಯಾಗಿದೆ. ಟೆಂಡರ್ ನಡೆಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರೂ ಈವರೆಗೆ ಉತ್ತರ ಬಂದಿಲ್ಲ. ಹೀಗಾಗಿ ನಿಗದಿತ ದಿನಾಂಕದಿಂದ ಪರೀಕ್ಷೆ ಆರಂಭಗೊಳ್ಳುವುದೇ ಎಂಬ ಅನುಮಾನ ಮೂಡಿದೆ.
ಪರೀಕ್ಷೆ ಆರಂಭಗೊಳ್ಳುವ ಸುಮಾರು ಒಂದೂವರೆ ತಿಂಗಳು ಮೊದಲೇ ಪರೀಕ್ಷೆಗೆ ಬೇಕಾದ ಸಾಮಗ್ರಿಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಅದರಂತೆ ಮೇ ನಲ್ಲಿ ನಡೆಯುವ ಪರೀಕ್ಷೆಗೆ ಫೆಬ್ರವರಿಯಲ್ಲೇ ಟೆಂಡರ್ ಕರೆಯಲಾಗಿತ್ತು.

ಯಾರಿಗೆ ವರ್ಕ್ ಆರ್ಡರ್ ನೀಡಬೇಕು ಎಂದು ಚರ್ಚಿಸಿ, ಮಾರ್ಚ್ ಅಂತ್ಯದಲ್ಲಿ ಇನ್ನೇನು ಟೆಂಡರ್ ಪ್ರಕ್ರಿಯೆ ಶುರುವಾಗಬೇಕಿತ್ತು. ಅಷ್ಟರಲ್ಲಿ ದಿಢೀರ್ ಚುನಾವಣಾ ನೀತಿ ಸಂಹಿತೆ ಜಾರಿಯಾಯಿತು. ಅದರ ಪರಿಣಾಮ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದು ಬೆಂಗಳೂರು ಮೌಲ್ಯಮಾಪನ ಕುಲಸಚಿವ ಡಾ. ಸಿ.ಶಿವರಾಜು ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಯಾವ್ಯಾಯ ಪರೀಕ್ಷೆ: ಮೇ 18ರಿಂದ ಪದವಿಯ 2,4 ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯಲಿದೆ. ಜೂನ್ ನಲ್ಲಿ ಸ್ನಾತಕೋತ್ತರ 2 ಮತ್ತು 4 ನೇ ಸೆಮಿಸ್ಟರ್ ಪರೀಕ್ಷೆಗಳು, ಬಳಿಕ ಎಂಜಿನಿಯರಿಂಗ್ 2,4,6 ನೇ ಸೆಮಿಸ್ಟರ್ ಹಾಗೂ ಕಾನೂನು ಪದವಿ ಪರೀಕ್ಷೆಗಳು ಹೀಗೆ ಜೂನ್ -ಜುಲೈವರೆಗೆ ಹಂತ ಹಂತವಾಗಿ ನಡೆಯಲಿದೆ.
ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆಗಳ ಮುದ್ರಣ, ಉತ್ತರ ಪ್ರತಿಗಳ ಖರೀದಿ, ಪರೀಕ್ಷೆ ಬರೆದ ನಂತರ ಆ ಉತ್ತರ ಪ್ರತಿಗಳನ್ನು ಕಾಲೇಜುಗಳಿಗೆ ಕಳುಹಿಸಲು 6 ಲಕ್ಷ ಕವರ್ ಗಳು, ಪರೀಕ್ಷಾ ಕಾರ್ಯಕ್ಕೆ ಬರುವ ಸಿಬ್ಬಂದಿಗಳಿಗೆ ಟಿಎ-ಡಿಎ ಫಾರಂಗಳು, ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ದಾಖಲಿಸಲು ಎ ಫಾರಂಗಳು, ಹಾಜರಾತಿ ಫಾರಂ ಸೇರಿದಂತೆ ಅನೇಕ ಪರಿಕರಗಳ ಖರೀದಿ ಇರುತ್ತದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
SSLC ಪರೀಕ್ಷೆಗೆ ಹಾಜರಾತಿ ಶಾಕ್: ನಿಯಮ ಉಲ್ಲಂಘಿಸಿದ 35,000 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ











Click it and Unblock the Notifications