ಬುರ್ಖಾ ಧರಿಸಿ ಬಂದವರು ಮುಸ್ಲಿಂ ಮಹಿಳೆಯಲ್ಲ!
ಬೆಂಗಳೂರು, ಅಕ್ಟೋಬರ್. 14: ಸದಾ ತಮ್ಮ ವಿಭಿನ್ನ ಪ್ರತಿಭಟನೆಗಳ ಮೂಲಕವೇ ಗಮನ ಸೆಳೆಯುವ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಬುರ್ಖಾ ಧರಿಸಿ ಕೈಯಲ್ಲಿ ಖಡ್ಗ ಹಿಡಿದು ಪ್ರತಿಭಟನೆ ನಡೆಸಿದರು. ಈ ಬಾರಿ ಅವರು ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಬುರ್ಖಾ ಧರಿಸಿಕೊಂಡು ಬೆಂಗಳೂರಿನ ಪುರಭವನದ ಎದುರು ಹಾಜರಾದರು.
ಮಹಿಳೆಯರಿಗೆ ಆತ್ಮಸ್ಥೈರ್ಯ ತುಂಬಲು ಅಕ್ಟೋಬರ್ 13 ರಂದು ಪುರಭವನದಿಂದ ಕೆಂಪೇಗೌಡ ಬಸ್ ನಿಲ್ದಾಣದವರೆಗೆ ಮೆರವಣಿಗೆ ನಡೆಸಿದರು. ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಆತಂಕದ ವಿಷಯ. ಬೆಂಗಳೂರು ಅತ್ಯಾಚಾರ ನಗರವಾಗಿ ಬದಲಾಗುತ್ತಿದೆ ಎಂದು ಹೇಳಿದರು.[ಕಳಸಾ ಬಂಡೂರಿಗಾಗಿ ಬೆಂಗಳೂರು ಸ್ಥಬ್ಧ: ಚಿತ್ರಗಳಲ್ಲಿ]
ಮಹಿಳೆಯರಿಗೆ ರಕ್ಷಣೆಯಿಲ್ಲ. ಇದೀಗ ಪುರುಷರಿಗೂ ರಕ್ಷಣೆ ಇಲ್ಲದ ಸ್ಥಿತಿ ಉಂಟಾಗಿದೆ. ಸರಗಳ್ಳತನ ತಡೆಯಲು ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ದೂರಿದರು. ಮಹಿಳೆಯರು ಮತ್ತು ತಮ್ಮ ಬೆಂಬಲಿಗೊಂದಿಗೆ ಘೋಷಣೆ ಕೂಗುತ್ತ ಕೆಂಪೇಗೌಡ ಬಸ್ ನಿಲ್ದಾಣದವರೆಗೆ ತೆರಳಿದರು. ವಾಟಾಳ್ ಅವರ ಪ್ರತಿಭಟನೆಯನ್ನು ಒಂದು ಸುತ್ತು ಹಾಕಿಕೊಂಡು ಬರೋಣ....

ಹೆಣ್ಣು ಮಕ್ಕಳ ಸ್ಥಾನದಲ್ಲಿ ನಿಂತು ಯೋಚಿಸಿ
ಆಡಳಿತ ನಡೆಸುವವರಿಗೆ ನಿಜ ನೋವು ಗೊತ್ತಾಗಬೇಕು ಎಂದರೆ ಅವರು ಹೆಣ್ಣು ಮಕ್ಕಳ ಸ್ಥಾನದಲ್ಲಿ ನಿಂತು ಯೋಚನೆ ಮಾಡಬೇಕು. ರಾಜ್ಯ ಮತ್ತು ದೇಶದಲ್ಲಿ ದೌರ್ಜನ್ಯ ತಡೆಗೆ ಇರುವ ಕಾನೂನುಗಳನ್ನು ಇನ್ನಷ್ಟು ಬಿಗಿ ಮಾಡಬೇಕು ಎಂದು ನಾಗರಾಜ್ ಒತ್ತಾಯ ಮಾಡಿದರು.

ಅಪರಾಧಿಗಳನ್ನು ಮೊದಲು ಹಿಡಿಯಿರಿ
ಸಾಮೂಹಿಕ ಅತ್ಯಾಚಾರ ಪ್ರಕರಣಗಳು ಅತ್ಯಂತ ಖಂಡನೀಯ. ಅತ್ಯಾಚಾರ ಆರೋಪಿಗಳು ಕಠಿಣ ಶಿಕ್ಷೆ ವಿಧಿಸಬೇಕು. ನೀಡುವ ಶಿಕ್ಷೆ ಇತರೆ ಆರೋಪಿಗಳಿಗೆ ಭಯ ಹುಟ್ಟಿಸುವಂತಿರಬೇಕು ಎಂದು ನಾಗರಾಜ್ ಆಗ್ರ೪ಹಿಸಿದರು.ಆಗಲೇ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕೈಯಲ್ಲಿ ಖಡ್ಗ
ಅತ್ಯಾಚಾರ ಸರಗಳ್ಳತನ ಬೆಂಗಳೂರಿನ ಪ್ರತಿದಿನದ ಸುದ್ದಿಯಾಗಿದೆ. ಮಹಿಳೆಯರು ಮುಕ್ತವಾಗಿ ಸಂಚರಿಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಜನರ ಬೆಳಗ್ಗೆ ಸರಗಳ್ಳತನ ನಡೆದರೆ, ಸಂಜೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಉದ್ಯೋಗಸ್ಥ ಮಹಿಳೆಯರು ಭಯ-ಭೀತಿಯಲ್ಲಿ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ರಕ್ಷಣೆ ಇಲ್ಲ
ಸರಗಳ್ಳತನ ತಡೆಯಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ನೀಡುತ್ತಿರುವ ಭದ್ರತೆಯನ್ನು ವಿಸ್ತಾರ ಮಾಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ನಿರ್ದಾಕ್ಷಣ್ಯ ವಿಚಾರಣೆ ಮಾಡಬೇಕು ಎಂದು ಆಗ್ರಹಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ












Click it and Unblock the Notifications