ತುರಹಳ್ಳಿ ಅರಣ್ಯದಲ್ಲಿ ಸುಟ್ಟು ಕರಕಲಾದ ದೇಹ ಪತ್ತೆ
ಬೆಂಗಳೂರು, ಮಾರ್ಚ್ 30: ತುರಹಳ್ಳಿ ಅರಣ್ಯದಲ್ಲಿ ಸುಟ್ಟು ಕರಕಲಾಗಿರುವ ದೇಹ ಪತ್ತೆಯಾಗಿದೆ.
ಎರಡು ದಿನಗಳ ಹಿಂದಷ್ಟೇ ಬೆಂಕಿ ಕಾಣಿಸಿಕೊಂಡಿತ್ತು, ಈ ಬೆಂಕಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಆತನ ಮೃತದೇಹದಿಂದ ಕೆಲವೇ ಕೆಲವು ದೂರದಲ್ಲಿ ಡೀಸೆಲ್ ಪತ್ತೆಯಾಗಿದ್ದು, ಇದನ್ನು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ನಿರ್ಧರಿಸಲು ಸಾಧ್ಯವಾಗಿಲ್ಲ. ವ್ಯಕ್ತಿ ಯಾರೆಂಬುದು ಇನ್ನೂ ತಿಳಿದುಬಂದಿಲ್ಲ.
ನಗರದ ತುರಹಳ್ಳಿ ಅರಣ್ಯದಲ್ಲಿ ಶನಿವಾರ ಸಂಜೆ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶ ಆಹುತಿಯಾಗಿತ್ತು. ಸಂಜೆ ಎಂಟು ಗಂಟೆ ಸಮಯದಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು.

ಒಂದು ಅಗ್ನಿಶಾಮಕ ವಾಹನ. 25ಕ್ಕೂ ಹೆಚ್ಚು ಮಂದಿ ಸ್ಥಳೀಯರು ಹಾಗೂ 13 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು ಮೂರು ತಾಸು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು.
ಬೇಸಿಗೆ ಸಮೀಪಿಸುತ್ತಿರುವುದರಿಂದ ಹುಲ್ಲು ಒಣಗಿ ಹೋಗಿದೆ, ಇದರಿಂದ ಬೆಂಕಿಯ ಕೆನ್ನಾಲಿಗೆ ಶೀಘ್ರ ಹರಡಿದೆ. ಆದರೆ ಅಂದು ಯಾವುದೇ ಪ್ರಾಣಿಗಳಿಗೆ ಅಥವಾ ಮನುಷ್ಯರಿಗೆ ಹಾನಿಯಾಗಿರುವ ಕುರಿತು ವರದಿಯಾಗಿರಲಿಲ್ಲ. ಆದರೆ ಬಳಿಕ ಅರಣ್ಯಾಧಿಕಾರಿಗಳು ತಪಾಸಣೆಗೆಂದು ತೆರಳಿದಾಗ ಸುಟ್ಟು ಕರಕಲು ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು.
Recommended Video
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications