ತುರಹಳ್ಳಿ ಅರಣ್ಯದಲ್ಲಿ ಸುಟ್ಟು ಕರಕಲಾದ ದೇಹ ಪತ್ತೆ
ಬೆಂಗಳೂರು, ಮಾರ್ಚ್ 30: ತುರಹಳ್ಳಿ ಅರಣ್ಯದಲ್ಲಿ ಸುಟ್ಟು ಕರಕಲಾಗಿರುವ ದೇಹ ಪತ್ತೆಯಾಗಿದೆ.
ಎರಡು ದಿನಗಳ ಹಿಂದಷ್ಟೇ ಬೆಂಕಿ ಕಾಣಿಸಿಕೊಂಡಿತ್ತು, ಈ ಬೆಂಕಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಆತನ ಮೃತದೇಹದಿಂದ ಕೆಲವೇ ಕೆಲವು ದೂರದಲ್ಲಿ ಡೀಸೆಲ್ ಪತ್ತೆಯಾಗಿದ್ದು, ಇದನ್ನು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ನಿರ್ಧರಿಸಲು ಸಾಧ್ಯವಾಗಿಲ್ಲ. ವ್ಯಕ್ತಿ ಯಾರೆಂಬುದು ಇನ್ನೂ ತಿಳಿದುಬಂದಿಲ್ಲ.
ನಗರದ ತುರಹಳ್ಳಿ ಅರಣ್ಯದಲ್ಲಿ ಶನಿವಾರ ಸಂಜೆ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶ ಆಹುತಿಯಾಗಿತ್ತು. ಸಂಜೆ ಎಂಟು ಗಂಟೆ ಸಮಯದಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು.

ಒಂದು ಅಗ್ನಿಶಾಮಕ ವಾಹನ. 25ಕ್ಕೂ ಹೆಚ್ಚು ಮಂದಿ ಸ್ಥಳೀಯರು ಹಾಗೂ 13 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು ಮೂರು ತಾಸು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು.
ಬೇಸಿಗೆ ಸಮೀಪಿಸುತ್ತಿರುವುದರಿಂದ ಹುಲ್ಲು ಒಣಗಿ ಹೋಗಿದೆ, ಇದರಿಂದ ಬೆಂಕಿಯ ಕೆನ್ನಾಲಿಗೆ ಶೀಘ್ರ ಹರಡಿದೆ. ಆದರೆ ಅಂದು ಯಾವುದೇ ಪ್ರಾಣಿಗಳಿಗೆ ಅಥವಾ ಮನುಷ್ಯರಿಗೆ ಹಾನಿಯಾಗಿರುವ ಕುರಿತು ವರದಿಯಾಗಿರಲಿಲ್ಲ. ಆದರೆ ಬಳಿಕ ಅರಣ್ಯಾಧಿಕಾರಿಗಳು ತಪಾಸಣೆಗೆಂದು ತೆರಳಿದಾಗ ಸುಟ್ಟು ಕರಕಲು ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು.
Recommended Video
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications