ಆಂಧ್ರಪ್ರದೇಶಕ್ಕೆ ಕೆಎಸ್ಆರ್ ಟಿಸಿ ಬಸ್ ಸೇವೆ ಸ್ಥಗಿತ

ಅಖಂಡ ಆಂಧ್ರಪದೇಶಕ್ಕೆ ಆಗ್ರಹಿಸಿ ಗುರುವಾರ ಸಂಜೆಯಿಂದಲೇ ಆಂಧ್ರಪ್ರದೇಶದಲ್ಲಿ ಪ್ರತಿಭಟನೆಗಳು ಪ್ರಾರಂಭವಾಗಿವೆ. ಆದ್ದರಿಂದ ಕೆಎಸ್ಆರ್ ಟಿಸಿ 451 ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಪ್ರತಿಭಟನೆ ಕಾವು ಕಡಿಮೆಯಾಗುವ ತನಕ ಬಸ್ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಕೆಎಸ್ಆರ್ ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕ ಅಶೋಕ್ ಕುಮಾರ್, ಆಂಧ್ರಪ್ರದೇಶಕ್ಕೆ ಸಾಗುವ 451 ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇವುಗಳಲ್ಲಿ ವೋಲ್ವೋ, ಐರಾವತ, ಸಾಮಾನ್ಯ ಬಸ್ ಗಳು ಸೇರಿವೆ.
ಬಸ್ ಸಂಚಾರ ಸ್ಥಗಿತಗೊಳಿಸಿರುವುದರಿಂದ ಸಂಸ್ಥಗೆ ಪ್ರತಿದಿನ 35 ರಿಂದ 45 ಲಕ್ಷ ನಷ್ಟವಾಗುತ್ತಿದೆ ಎಂದು ಅಶೋಕ್ ಹೇಳಿದ್ದಾರೆ. ಮೂರುದಿನಗಳಲ್ಲಿ ಆಂಧ್ರಪ್ರದೇಶದ ಪರಿಸ್ಥಿತಿಯನ್ನು ನೋಡಿ ಬಸ್ ಸಂಚಾರ ಆರಂಭಿಸುವ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಹೈದರಾಬಾದ್ ಪ್ರತಿದಿನ ಬೆಂಗಳೂರಿನಿಂದ 15 ವೋಲ್ವೋ ಬಸ್ ಸಂಚರಿಸುತ್ತಿತ್ತು. ಅವುಗಳನ್ನು ನಿಲ್ಲಿಸಲಾಗಿದೆ ಸಂಸ್ಥೆಯ ಬಸ್ ಗಳು ಕೋಲಾರ, ಚಿಕ್ಕಬಳ್ಳಾಪುರ, ತಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಗುಲ್ಬರ್ಗಾ ಹಾಗೂ ಬೀದರ್ ಜಿಲ್ಲೆಗಳಲ್ಲಿ ಕರ್ನಾಟಕದ ಗಡಿ ಭಾಗದವರೆಗೆ ಮಾತ್ರ ಸಂಚರಿಸುತ್ತಿವೆ ಎಂದು ಮಾಹಿತಿ ನೀಡಿದರು. (ತೆಲಂಗಾಣ ಪ್ರತಿಭಟನೆ, ಕೆಎಸ್ಆರ್ ಟಿಸಿಗೆ ನಷ್ಟ)
ಆಗಸ್ಟ್ ತಿಂಗಳಿನಲ್ಲಿಯೂ ತೆಲಂಗಾಣ ಪ್ರತಿಭಟನೆ ಹಿನ್ನಲೆಯಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಪರಿಸ್ಥಿತಿ ಸ್ವಲ್ಪ ತಿಳಿಯಾದ ಬಳಿಕ ಸಂಚಾರ ಪ್ರಾರಂಭಿಸಲಾಗಿತ್ತು. ಸದ್ಯ ಭಾರೀ ಪ್ರತಿಭಟನೆ ಹಿನ್ನಲೆಯಲ್ಲಿ ಪುನಃ ಸಂಚಾರ ಸ್ಥಗಿತಗೊಂಡಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications