ವಾರದ ಹಿಂದೆ ಇತ್ತು ಈಗಿಲ್ಲ ಬೆಂಗಳೂರು ಪೊಲೀಸ್ ಕಚೇರಿ ಬಳಿಯ ಬಸ್ ಶೆಲ್ಟರ್; ದೂರು ದಾಖಲು!
ಬೆಂಗಳೂರು ಅಕ್ಟೋಬರ್ 6: ಬೆಂಗಳೂರಿನಲ್ಲಿ ಕಳ್ಳರ ಸಂಖ್ಯೆ ಹೆಚ್ಚಾಗುತ್ತಿದೆ. ಸಾರ್ವಜನಿಕರ ಬೆಲೆಬಾಳುವ ವಸ್ತುಗಳಿಗೆ ಕೈ ಹಾಕುತ್ತಿದ್ದ ಕದೀಮರು ಸದ್ಯ ಬಸ್ ಶೆಲ್ಟರ್ (ಬಸ್ ತಂಗುದಾಣ) ಅನ್ನೇ ಕದ್ದಿದ್ದಾರೆ. 10 ಲಕ್ಷ ರೂಪಾಯಿ ಮೌಲ್ಯದ ಸ್ಟೇನ್ಲೆಸ್ ಸ್ಟೀಲ್ ರಚನೆಯಿಂದ ಭದ್ರವಾಗಿದ್ದ ಹೊಚ್ಚಹೊಸ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಶೆಲ್ಟರ್ ಅನ್ನು ಕದೀಮರು ಎತ್ತಂಗಡಿ ಮಾಡಿದ್ದಾರೆ.
ಇದನ್ನು ಜನನಿಬಿಡ ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿ ಸ್ಥಾಪಿಸಲಾಗಿತ್ತು. ಆದರೆ ಸ್ಥಾಪಿಸಿದ ಒಂದು ವಾರದಲ್ಲೇ ನಿಗೂಢವಾಗಿ ಕಣ್ಮರೆಯಾಗಿದೆ. ವಿಧಾನಸೌಧದಿಂದ ಕೇವಲ 1ಕಿಮೀ ದೂರದಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಹಿಂದೆ ಬಸ್ ಶೆಲ್ಟರ್ ಸ್ಥಾಪಿಸಲಾಗಿತ್ತು.

ಬಸ್ ತಂಗುದಾಣವನ್ನು ಆಗಸ್ಟ್ 21 ರಂದು ಸ್ಥಾಪಿಸಲಾಯಿತು. ಆಗಸ್ಟ್ 28 ರಂದು ಇದು ಕಾಣೆಯಾಗಿದೆ. ಘಟನೆ ನಡೆದು ಒಂದು ತಿಂಗಳ ನಂತರ ಸೆಪ್ಟೆಂಬರ್ 30 ರಂದು ಈ ಬಗ್ಗೆ ದೂರು ದಾಖಲಾಗಿದೆ. BMTC ಬಸ್ ಶೆಲ್ಟರ್ಗಳನ್ನು ನಿರ್ಮಿಸುವ ಜವಾಬ್ದಾರಿಯುತ ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿರೆಡ್ಡಿ ಅವರು ಕಳ್ಳತನದ ಬಗ್ಗೆ ವರದಿ ಮಾಡಿದ್ದಾರೆ. ಹೈಗ್ರೌಂಡ್ಸ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ.
ರೆಡ್ಡಿ ಅವರ ದೂರಿನ ಪ್ರಕಾರ, ಬಸ್ ಶೆಲ್ಟರ್ ನಾಪತ್ತೆಯಾಗಿರುವುದನ್ನು ಗಮನಿಸಿದ ನಂತರ, ರೆಡ್ಡಿ ಮತ್ತು ಅವರ ತಂಡವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ವಿಚಾರಿಸಿದೆ. ಅವರು ಅದರ ಕಣ್ಮರೆಯಾದ ಬಗ್ಗೆ ಯಾವುದೇ ಯಾಔಉದೇ ಮಾಹಿತಿ ಇಲ್ಲ ಎಂದಿದ್ದಾರೆ.
ಲಿಂಗರಾಜಪುರ, ಹೆಣ್ಣೂರು, ಬಾಣಸವಾಡಿ, ಪುಲಿಕೇಶಿನಗರ, ಗಂಗೇನಹಳ್ಳಿ, ಭೂಪಸಂದ್ರ, ಹೆಬ್ಬಾಳ, ಯಲಹಂಕ ಮುಂತಾದ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗೆ ಈ ಬಸ್ ಶೆಲ್ಟರ್ ಆಶ್ರಯವಾಗಿತ್ತು.
ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379 (ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಹತ್ತಿರದ ಕಟ್ಟಡಗಳಿಂದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ.
ಬೆಂಗಳೂರಿನ ಬಸ್ ಶೆಲ್ಟರ್ಗಳು ನಾಪತ್ತೆಯಾಗುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಆರಂಭದಲ್ಲಿ ಎಚ್ಆರ್ಬಿಆರ್ ಲೇಔಟ್ ಮತ್ತು ಕಲ್ಯಾಣ್ ನಗರದಲ್ಲಿ ಇಂತಹ ಘಟನೆಗಳು ವರದಿಯಾಗಿದ್ದವು. ಈ ಬಸ್ ಶೆಲ್ಟರ್ಗಳನ್ನು ಸ್ಟೇನ್ಲೆಸ್ ಸ್ಟೀಲ್ನಿಂದ ಮಾಡಲಾಗಿದ್ದು, ಉತ್ತಮ ಬೆಲೆಗೆ ಮಾರಾಟ ಮಾಡಬಹುದು. ಹೀಗಾಗಿ ಕಳ್ಳರು ತಮ್ಮ ಕೈಚಳಕ ತೋರುತ್ತಿದ್ದಾರೆ. ಅಂಥವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಪೊಲೀಸ್ ಮುಖ್ಯಸ್ಥರ ಕಚೇರಿ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಓಡಾಡುತ್ತಾರೆ. ವಾಹನಗಳ ಸಂಚಾರದಿಂದ ಈ ರಸ್ತೆ ಯಾವಾಗಲೂ ತುಂಬಿರುತ್ತದೆ. ಬೆಂಗಳೂರು ಪೊಲೀಸ್ ಮುಖ್ಯಸ್ಥರ ಕಚೇರಿ ಬಳಿಯ ಬಸ್ ಶೆಲ್ಟರ್ ಅನ್ನೇ ಕಳ್ಳರು ಸುಲಭವಾಗಿ ಕದ್ದಿದ್ದಾರೆ ಅಂದರೆ ಇನ್ನೂ ಬೇರೆಡೆ ಇರುವ ಬಸ್ ಸೆಲ್ಟರ್ ಕಥೆ ಏನು ಎನ್ನುವ ಪ್ರಶ್ನೆ ಮೂಡಿದೆ. ಪೊಲೀಸರು ಈ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?











Click it and Unblock the Notifications