'ಬಸ್ ಭಾಗ್ಯ ಬೇಕು' ಅಭಿಯಾನಕ್ಕೆ ನೂರಾರು ಜನರ ಸಾಥ್
ನೂರಾರು ಬೆಂಗಳೂರಿಗರು ಶನಿವಾರ ಬಸ್ ಹತ್ತಿದರು. 'ಬಸ್ ಭಾಗ್ಯ ಬೇಕು' ಅಭಿಯಾನದ ಅಂಗವಾಗಿ ನಗರದ ಎಲ್ಲಾ ಜನರಿಗೂ ಕೈಗೆಟುಕುವ ದರದಲ್ಲಿ ಬಿಎಂಟಿಸಿ ಬಸ್ ಸೇವೆ ನೀಡಿ ಅಂತ ಇವರೆಲ್ಲಾ ಬಸ್ ಏರಿ, ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ಬೆಂಗಳೂರು, ಮಾರ್ಚ್ 5: ನೂರಾರು ಬೆಂಗಳೂರಿಗರು ಶನಿವಾರ ಬಸ್ ಹತ್ತಿದರು. 'ಬಸ್ ಭಾಗ್ಯ ಬೇಕು' ಅಭಿಯಾನದ ಅಂಗವಾಗಿ ನಗರದ ಎಲ್ಲಾ ಜನರಿಗೂ ಕೈಗೆಟುಕುವ ದರದಲ್ಲಿ ಬಿಎಂಟಿಸಿ ಬಸ್ ಸೇವೆ ನೀಡಿ ಅಂತ ಇವರೆಲ್ಲಾ ಬಸ್ ಏರಿ, ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
'ಸಿಟಿಜನ್ಸ್ ಫಾರ್ ಬೆಂಗಳೂರು' ಹಾಗೂ 'ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ' ಜಂಟಿಯಾಗಿ ಈ ಅಭಿಯಾನವನ್ನು ಹಮ್ಮಿಕೊಂಡಿತ್ತು. ನಗರದ ಮೆಜೆಸ್ಟಿಕ್, ಕೋರಮಂಗಲ, ಜಯನಗರ, ಶಿವಾಜಿ ನಗರ ಹಾಗೂ ಬನಶಂಕರಿಯಲ್ಲಿ ಪ್ರಯಾಣಿಕರು ಪ್ರತಿಭಟನೆ ನಡೆಸಿದರು.[ಮಾರ್ಚ್ 4ಕ್ಕೆ ಬೆಂಗಳೂರಿನಲ್ಲಿ 'ಬಸ್ ಭಾಗ್ಯ ಬೇಕು' ಅಭಿಯಾನ]

'ಬಸ್ ಭಾಗ್ಯ ಬೇಕು, ಟಿಕೆಟ್ ಅರ್ಧ ಮಾಡಿ, ಬಸ್ ಡಬಲ್' ಮಾಡಿ ಘೋಷಣೆಗಳನ್ನು ಪ್ರತಿಭಟನಾಕಾರರು ಕೂಗಿದರು. ಇನ್ನು ಶಾಂತಿನಗರದಲ್ಲಿ ಪ್ರಯಾಣಿಕರು ಬಿಎಂಟಿಸಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಈ ಸಂಬಂಧ ಮನವಿ ಪತ್ರವನ್ನೂ ನೀಡಿದರು.

ಸ್ಟೀಲ್ ಫ್ಲೈ ಓವರ್ ರದ್ದು ಮಾಡಿದ ನಂತರ ಸರಕಾರ ಬಿಎಂಟಿಸಿಗೆ ಹೆಚ್ಚಿನ ನಿಧಿ ನೀಡಬೇಕು. ಸಾರ್ವಜನಿಕ ಸಾರಿಗೆಗೆ ಉತ್ತೇಜನ ಕೊಡಬೇಕು. ಬಜೆಟ್ ನಲ್ಲಿ ಬಸ್ಸುಗಳ ಸಂಖ್ಯೆ ಹೆಚ್ಚು ಮಾಡಿ ದರವನ್ನು ಕಡಿಮೆ ಮಾಡಬೇಕು ಎಂದು ಅಭಿಯಾನದಲ್ಲಿ ಪಾಲ್ಗೊಂಡವರು ಹೇಳಿದ್ದಾರೆ.
ಬಸ್ಸುಗಳ ಸಂಖ್ಯೆ ಹೆಚ್ಚು ಮಾಡಿದರೆ ಟ್ರಾಫಿಕ್ ಸಮಸ್ಯೆಗೂ ಮುಕ್ತಿ ಸಿಗುತ್ತದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.
-
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್











Click it and Unblock the Notifications