ಸ್ಪಾ ಬೇಡ ಮಂಚಕ್ಕೆ ಬಾ ಎಂದು ಕರೆದ ಉದ್ಯಮಿ ಜೈಲಿಗೆ
ಬೆಂಗಳೂರು, ಫೆಬ್ರವರಿ 23: ಉದ್ಯಮಿ ಸಾಯಿ ರಾಮಕೃಷ್ಣ ಕರುತರಿ ಅವರು ಸ್ಪಾದಲ್ಲಿ ಕೆಲಸ ಮಾಡುವ ಮಹಿಳೆಗೆ ಕಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸದಾಶಿವ ನಗರದ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾರೆ. ಮಹಿಳೆಯನ್ನು ರಕ್ಷಿಸಲು ತೆರಳಿದ ಪೊಲೀಸರ ಮೇಲೆ ಕೂಡ ಹಲ್ಲೆಗೆ ಯತ್ನಿಸಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ.
ಪೊಲೀಸರು ಹೇಳುವ ಪ್ರಕಾರ ಸ್ಪಾ ಸಿಬ್ಬಂದಿ ಸಂಜೆ ವೇಳೆಗೆ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಉದ್ಯಮಿಯೊಬ್ಬರು ಸ್ಪಾಗೆ ಬಂದು ನನ್ನೊಂದಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದರು. ಅದನ್ನಾಧರಿಸಿ ಸ್ಪಾ ಬಳಿ ತೆರಳಿದಾಗ ಪೊಲೀಸರ ಮೇಲೆ ಹಲ್ಲೆ ಮಾಡಲು ಉದ್ಯಮಿ ಯತ್ನಿಸಿದ್ದ ಎಂದು ತಿಳಿಸಿದ್ದಾರೆ.

ಮಹಿಳೆಯು ಜನವರಿಯಿಂದ ಆ ಸ್ಪಾದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸದಾಶಿವನಗರ ನಿವಾಸಿಯಾಗಿರುವ ರಾಮಕೃಷ್ಣ ಸ್ಪಾದ ಪರ್ಮನೆಂಟ್ ಕಸ್ಟಮರ್ ಆಗಿದ್ದರು. ಫೆ.19 ರಂದು ಸಂಜೆ 6 ಗಂಟೆಗೆ ಸ್ಪಾಗೆ ಬಂದಿದ್ದಾನೆ 11,800 ರ ಪ್ಯಾಕೇಜ್ ನೋಂದಣಿ ಮಾಡಿದ್ದಾನೆ. ಅಲ್ಲಿನ ಥೆರಪಿಸ್ಟ್ ರಾಮಕೃಷ್ಣ ಅವರಿಗೆ ಮಸಾಜ್ ಮಾಡುವಂತೆ ಮಹಿಳೆಗೆ ತಿಳಿಸಿದ್ದಾರೆ. ಅದಾದ ನಂತರ ಮಸಾಜ್ ರೂಮಿಗೆ ಬಂದು ಈ ರೀತಿಯ ಮಸಾಜ್ ಗಳು ನನಗೆ ಇಷ್ಟವಿಲ್ಲ ಎಂದು ರೇಗಾಡಿದ್ದಾರೆ. ಯಾಕೆ ಎಂದು ಅವರನ್ನು ಪ್ರಶ್ನೆ ಮಾಡಿದಾಗ ನೇರವಾಗಿ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದುವಂತೆ ಹೇಳಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.
ರಾಮಕೃಷ್ಣ ಅವರ ಬಳಿ ಇದು ಫ್ಯಾಮಿಲಿ ಸ್ಪಾ ಇಲ್ಲಿ ಅನೈತಿಕ ಚಟುವಟಿಕೆಗೆ ಅವಕಾಶವಿಲ್ಲ, ಇದು ತಪ್ಪು ಎಂದು ಎಷ್ಟೇ ಮನವಿ ಮಾಡಿಕೊಂಡರೂ ಆತ ಮಾತು ಕೇಳಲಿಲ್ಲ. ಒಂದೊಮ್ಮೆ ನೀನು ಒಪ್ಪಿಕೊಳ್ಳದಿದ್ದಲ್ಲಿ ಅನೈತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದೆ ಎಂದು ಪೋಷಕರ ಬಳಿ ಹೇಳುವುದಾಗಿ ಬೆದರಿಕೆ ಕೂಡ ಹಾಕಿದ್ದ.
ಮಹಿಳೆ ತಕ್ಷಣ ಸ್ಪಾದಿಂದ ಹೊರಗಡೆ ಬಂದು ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿದ್ದಾರೆ. ಪಿಂಕ್ ಹೊಯ್ಸಳ ತಕ್ಷಣವೇ ಅಲ್ಲಿಗೆ ಆಗಮಿಸಿದೆ. ಮಹಿಳೆಯ ದೂರನ್ನು ಕೇಳಿ ವಿಚಾರಣೆಗೆ ಮುಂದಾದ ಪಲೀಸರ ಮೇಲೂ ಕೂಡ ಉದ್ಯಮಿ ಹಲ್ಲೆಗೆ ಯತ್ನಿಸಿದ್ದಾನೆ. ಉದ್ಯಮಿ ಮೇಲೆ ಐಪಿಸಿ 354 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications