ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉದ್ಯಮಿ ಭೀಕರ ಹತ್ಯೆ
ಬೆಂಗಳೂರು, ಜೂನ್ 7: ಬೆಂಗಳೂರಿನ ಹೆಣ್ಣೂರು ಕ್ರಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮೂವತ್ತೈದು ವರ್ಷದ ಜಯರಾಮ್ ಎಂಬಾತನ ಕೊಲೆಯಾಗಿದೆ. ಆತನನ್ನು ಸಂಬಂಧಿಕರೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ವಾಟರ್ ಪ್ಯೂರಿಫೈ ಉದ್ಯಮ ನಡೆಸುತ್ತಿದ್ದ ಜಯರಾಮ್ ನನ್ನು ಚಾಕು ಹಾಗೂ ಲಾಂಗ್ ನಿಂದ ಇರಿದು ಕೊಲ್ಲಲಾಗಿದೆ. ಆಸ್ತಿ ವಿವಾದಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ಪ್ರಾಥಮಿಕ ತನಿಖೆ ವೇಳೆ ವ್ಯಕ್ತವಾಗಿದೆ. ಇದೇ ವೇಳೆ ಜಯರಾಮ್ ಗೆ ಅಪರಾಧ ಹಿನ್ನೆಲೆಯಿತ್ತು ಎಂಬ ಮಾಹಿತಿ ಹರಿದಾಡುತ್ತಿದೆ.
ಜಯರಾಮ್ ತನ್ನ ಅಕ್ಕನನ್ನೇ ಕೊಲೆ ಮಾಡಿದ್ದ ಆರೋಪ ಹೊತ್ತಿದ್ದ ಬಗ್ಗೆ ಕೇಳಿಬರುತ್ತಿದೆ. ಆದರೆ ಆ ಬಗ್ಗೆ ಇನ್ನೂ ಖಚಿತವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.[ಹಾಸನದಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಐವರು ಕಳ್ಳಿಯರ ಬಂಧನ]

ವಾಟರ್ ಪ್ಯೂರಿ ಫೈ ಉದ್ಯಮ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸಾಕ್ಷ್ಯ ಸಂಗ್ರಹದಲ್ಲಿ ತೊಡಗಿದ್ದಾರೆ. ಆರೋಪಿಗಳ ಶೀಘ್ರ ಬಂಧನದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಕೊಲೆ ದೂರು ದಾಖಲಿಸಲಾಗಿದೆ.












Click it and Unblock the Notifications