ವೈದ್ಯೆಗೆ ಕಿರುಕುಳ ನೀಡಿದ ಉದ್ಯಮಿ ಬಂಧನ
ಬೆಂಗಳೂರು, ಡಿ. 23: ಮದುವೆಯಾಗುವಂತೆ ಒತ್ತಾಯಿಸಿ ವೈದ್ಯೆಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಉದ್ಯಮಿಯನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಉದ್ಯಮಿ ಲೋಗನಾಥನ್ (28) ತಮಿಳುನಾಡು ಮೂಲದವರು. ಜಸ್ಟ್ ಡಯಲ್ ಸಂಸ್ಥೆಯ ಮೂಲಕ ವೈದ್ಯೆಯ ದೂರವಾಣಿ ಸಂಖ್ಯೆ ಪಡೆದ ಉದ್ಯಮಿ ನಂತರ ವೈದ್ಯೆಯನ್ನು ಚಿಕಿತ್ಸೆ ನೆಪದಲ್ಲಿ ಭೇಟಿಯಾಗಿದ್ದ. ವಾಟ್ಸಾಪ್ ಮೂಲಕ ಅವರಿಗೆ ಮೆಸೇಜ್ ಕಳಿಸುತ್ತ ಸ್ನೇಹ ಮುಂದುವರಿಸಿದ್ದ.
ಕೆಲವು ದಿನಗಳ ನಂತರ ಮದುವೆ ಪ್ರಸ್ತಾಪವಿಟ್ಟಿದ್ದ. ಆದರೆ, ವೈದ್ಯೆ ತಿರಸ್ಕರಿಸಿದಾಗ ಅವರ ಫೋಟೊಗಳನ್ನು ವ್ಯಾಟ್ಸಾಪ್ ಮೂಲಕ ಡೌನ್ಲೋಡ್ ಮಾಡಿ ನಕಲಿ ಖಾತೆ ಸೃಷ್ಟಿಸಿದ್ದ. ಅವರ ಹೆಸರಿನಲ್ಲಿ ಅನೇಕರೊಂದಿಗೆ ಚಾಟ್ ಮಾಡುತ್ತ, ವೈದ್ಯೆಗೂ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ್ದ.
ಆಗ ಸಿಟ್ಟಿಗೆದ್ದ ವೈದ್ಯೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ಗೌರವಕ್ಕೆ ಧಕ್ಕೆ ತಂದಿರುವುದು ಹಾಗೂ ಸೈಬರ್ ಅಪರಾಧ ಆರೋಪದಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಮಿಳುನಾಡಿಗೆ ತೆರಳಿ ಆರೋಪಿ ಉದ್ಯಮಿಯನ್ನು ಬಂಧಿಸಿ ಕರೆತಂದಿದ್ದಾರೆ.

ಜಸ್ಟ್ ಡಯಲ್ ವಿರುದ್ಧ ಕ್ರಮ? : ವೈದ್ಯೆಯ ಖಾಸಗಿ ಮೊಬೈಲ್ ಸಂಖ್ಯೆಯನ್ನು ಬೇರೊಬ್ಬರಿಗೆ ನೀಡಿದ ಆರೋಪದ ಮೇಲೆ ಜಸ್ಟ್ ಡಯಲ್ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಚಿಂತಿಸುತ್ತಿದ್ದಾರೆ.
ಅಗತ್ಯ ಮಾಹಿತಿ ಪಡೆಯಲು ಜಸ್ಟ್ ಡಯಲ್ ಸಂಸ್ಥೆಗೆ ವೈದ್ಯೆ ಕರೆ ಮಾಡಿದ್ದಾಗ ಅವರ ಮೊಬೈಲ್ ಸಂಖ್ಯೆಯನ್ನು ದಾಖಲಿಸಿಕೊಳ್ಳಲಾಗಿತ್ತು. ನಂತರ ಆರೋಪಿ ಉದ್ಯಮಿ ವೈದ್ಯರ ದೂರವಾಣಿ ಸಂಖ್ಯೆ ಕೇಳಿದಾಗ ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಜಸ್ಟ್ ಡಯಲ್ ಸಂಸ್ಥೆಯನ್ನು ವಿಚಾರಣೆಗೊಳಪಡಿಸಲು ಪೊಲೀಸರು ನಿರ್ಧರಿಸಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications