ಮಳೆಯಿಂದ ತತ್ತರಿಸಿರುವ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ
ಬೆಂಗಳೂರು, ಸೆ. 11: ಎಡಬಿಡದೆ ಸುರಿಯುತ್ತಿರುವ ಮಳೆಗೆ ತತ್ತರಿಸಿರುವ ಬೆಂಗಳೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಕೂಡಾ ಎದುರಾಗಿದೆ. ನಗರದ ಉತ್ತರ ಹಾಗೂ ಪೂರ್ವ ಭಾಗಕ್ಕೆ ಕಾವೇರಿ ನೀರು ಪೂರೈಸುವ ಪೈಪ್ ಲೈನ್ ನಲ್ಲಿ ಸೋರಿಕೆ ಕಂಡು ಬಂದಿದ್ದರಿಂದ ಭಾನುವಾರ ಪೂರ್ತಿ ಆ ಭಾಗದ ಜನತೆ ಪರದಾಡಿದ್ದಾರೆ.
ಭಾನುವಾರದಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು, ಪೈಪ್ ಲೈನ್ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಸೋಮವಾರದ ಸಂಜೆ ವೇಳೆಗೆ ನೀರು ಪೂರೈಸಲಾಗುವುದು, ಸಾರ್ವಜನಿಕರು ಸಹಕರಿಸುವಂತೆ ಜಲಮಂಡಳಿ ಕೋರಿದೆ.

ಕಾವೇರಿ ನಾಲ್ಕನೇ ಘಟ್ಟದ 2ನೇ ಹಂತದ ನೀರು ಬೆಂಗಳೂರಿನ ಉತ್ತರ ಹಾಗೂ ಪೂರ್ವ ಭಾಗದ ಕೆಲವು ಕಡೆಗೆ ಕುಡಿಯುವ ನೀರು ಒದಗಿಸುತ್ತಿದೆ. ಉತ್ತರಹಳ್ಳಿ ಬಳಿ ಈ ಪೈಪ್ ಲೈನ್ ನಲ್ಲಿ ಸೋರಿಕೆಯಾಗಿದ್ದು, ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಕುಡಿಯುವ ನೀರು ವ್ಯರ್ಥವಾಗೋದನ್ನು ತಪ್ಪಿಸೋಕೆ ಜಲಮಂಡಳಿ ತುರ್ತು ರಿಪೇರಿ ಕಾರ್ಯ ಹಮ್ಮಿಕೊಂಡಿತ್ತು.
ಇದರಿಂದಾಗಿ ಅನಿವಾರ್ಯವಾಗಿ ರಾಜಾಜಿನಗರ, ಮಹಾಲಕ್ಷ್ಮೀ ಲೇ ಔಟ್, ಬಸವೇಶ್ವರ ನಗರ, ಜಿಕೆವಿಕೆ, ಎಚ್.ಎಸ್.ಆರ್ ಲೇಔಟ್,ರಾಜರಾಜೇಶ್ವರಿ ನಗರ, ಎಚ್ ಆರ್ ಬಿಆರ್ ಲೌಟ್, ಸರ್ವಜ್ಞನಗರ, ಜೆಪಿನಗರ ಸೇರಿದಂತೆ ನಗರದ ಪಶ್ಚಿಮ, ಪೂರ್ವ, ಉತ್ತರ ಭಾಗಗಳಲ್ಲಿ ನೀರಿನ ಪೂರೈಕೆ ಸ್ಥಗಿತಗೊಳಿಸಲಾಗಿತ್ತು.
ಮಳೆಯಿಂದಾಗಿ ಹಲವೆಡೆ ನೀರು ಪೂರೈಕೆ ಪೈಪ್ ಗಳಲ್ಲಿ ಕೆಸರು, ಕಸ, ಮಣ್ಣು ಸೇರಿಕೊಂಡಿವೆ. ಕೆಲವೆಡೆ ಕೊಳಚೆ ನೀರು ಹಾಗೂ ಶುದ್ಧ ನೀರು ಮಿಶ್ರಣವನ್ನು ಸಾರ್ವಜನಿಕರು ಪಡೆಯುತ್ತಿದ್ದಾರೆ. ಈ ಬಗ್ಗೆ ಕಾರ್ಯಾಚರಣೆ ಜಾರಿಯಲ್ಲಿದ್ದು, ದುರಸ್ತಿ ಕಾರ್ಯ ಪೂರ್ಣಗೊಂಡ ಬಳಿಕ ನೀರು ಪೂರೈಕೆಯಾಗಲಿದೆ ಎಂದು ಜಲಮಂಡಳಿ (ಉತ್ತರ) ಮುಖ್ಯ ಇಂಜಿನಿಯರ್ ರವೀಂದ್ರ ಅವರು ಹೇಳಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications