Indira Canteens: ಇಂದಿರಾ ಕ್ಯಾಂಟೀನ್ಗಳಲ್ಲಿ ಕುಡಿಯಲು ನೀರಿಲ್ಲ, ಬಿಲ್ ಕಟ್ಟಿಲ್ಲ ಎಂದು ಸಂಪರ್ಕ ಕಡಿತ
ಸಿದ್ದರಾಮಯ್ಯ ಸರ್ಕಾರದ ಮಹಾತ್ವಕಾಂಕ್ಷಡಯ ಯೋಜನೆಯಾದ ಇಂದಿರಾ ಕ್ಯಾಂಟೀನ್, ನೀರಿನ ಸಮಸ್ಯೆಯಿಂದ ಬಳಲುತ್ತಿದೆ. ಹಸಿದು ಬರುವ ಗ್ರಾಹಕರು ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದಾರೆ.
ಬೆಂಗಳೂರು, ಜನವರಿ, 31: ರಾಜ್ಯದಲ್ಲಿ ಬಡವರ ಹಸಿವು ನೀಗಿಸುವ ಮಹತ್ವದ ಯೋಜನೆಯಾಗಿ ಸಿದ್ದರಾಮಯ್ಯ ಸರ್ಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಯೋಜನೆ ಹಳ್ಳಹಿಡಿಯುತ್ತಿದೆ. ಈಗಾಗಲೇ ಹಣದ ಕೊರತೆ ಎದುರಿಸುತ್ತಿರುವ ಬೆಂಗಳೂರಿನ ಇಂದಿರಾ ಕ್ಯಾಂಟೀನ್ಗಳಿಗೆ ಈಗ ನೀರಿನ ಸಮಸ್ಯೆಯೂ ಎದುರಾಗಿದೆ. ಬಿಲ್ ಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕ್ಯಾಂಟೀನ್ಗಳಿಗೆ ನೀರಿನ ಪೂರೈಕೆಯನ್ನು ಸ್ಥಗಿತಗೊಳಿಸಿದೆ.
ಬೆಂಗಳೂರಿನ 8 ವಲಯಗಳಲ್ಲೂ ಇರುವ ಇಂದಿರಾ ಕ್ಯಾಂಟೀನ್ಗಳಿಗೆ ನೀರಿನ ಬಿಲ್ ಬಾಕಿಯಿದೆ. ಇದರಿಂದ ಹಸಿವಿನಿಂದ ಬರುವ ಗ್ರಾಹಕರು ನೀರಿಗಾಗಿ ಪರಿತಿಸುವಂತಾಗಿದೆ. ಈ ಇಂದಿರಾ ಕ್ಯಾಂಟಿನ್ಗಳು ಒಟ್ಟು 40 ಲಕ್ಷ ರೂಪಾಯಿ ನೀರಿನ ಬಿಲ್ ಬಾಕಿ ಉಳಿಸಿಕೊಂಡಿವೆ ಎಂದು ತಿಳಿದು ಬಂದಿದೆ.
ನೀರಿನ ಬಿಲ್ ಪಾವತಿಯಾಗಿಲ್ಲ ಎಂಬುದನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಚಿತಪಡಿಸಿದ್ದಾರೆ. ಇಂದಿರಾ ಕ್ಯಾಂಟೀನ್ಗಳಲ್ಲಿ ಕುಡಿಯುವ ನೀರಿನ ಕೊರತೆಯ ಬಗ್ಗೆ ನನಗೆ ದೂರುಗಳು ಬಂದಿವೆ. ಒಪ್ಪಂದದಂತೆ ಇಂದಿರಾ ಕ್ಯಾಂಟೀನ್ಗಳಲ್ಲಿ ನೀರು ಒದಗಿಸುವ ಜವಾಬ್ದಾರಿ ಗುತ್ತಿಗೆದಾರರ ಮೇಲಿದ್ದು, ನೀರಿನ ಬಿಲ್ ಪಾವತಿಸಬೇಕು. ಇದು ಗುತ್ತಿಗೆದಾರ ಮತ್ತು ಬಿಡಬ್ಲ್ಯುಎಸ್ಎಸ್ಬಿ ನಡುವಿನ ಒಪ್ಪಂದವಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಗುತ್ತಿಗೆದಾರರು ನೀರಿನ ಟ್ಯಾಂಕರ್ ಹಾಗೂ ಶುದ್ಧೀಕರಿಸಿದ ನೀರಿನ ಕ್ಯಾನ್ಗಳ ಮೇಲೆ ಅವಲಂಬಿತರಾಗಿದ್ದಾರೆ. ಗಾಂಧಿನಗರ, ವಸಂತನಗರ, ಬನ್ನಪ್ಪ ಪಾರ್ಕ್, ಶಿವಾಜಿನಗರ, ಜಯನಗರ ಸೇರಿದಂತೆ ಅನೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ.
ಕಳೆದ ಒಂಬತ್ತು ತಿಂಗಳಿಂದ ಬಿಡಬ್ಲ್ಯುಎಸ್ಎಸ್ಬಿ ನೀರು ಸರಬರಾಜು ಸ್ಥಗಿತಗೊಳಿಸಿದ್ದು, ನಾವು ನೀರಿನ ಟ್ಯಾಂಕರ್ಗಳು ಮತ್ತು ನೀರಿನ ಕ್ಯಾನ್ಗಳ ಮೇಲೆ ಅವಲಂಬಿತರಾಗಿದ್ದೇವೆ ಎಂದು ಗಾಂಧಿನಗರದ ಇಂದಿರಾ ಕ್ಯಾಂಟೀನ್ನ ವ್ಯವಸ್ಥಾಪಕಿ ಸುವರ್ಣ ತಿಳಿಸಿದ್ದಾರೆ.
ಈಗೀನ ಗುತ್ತಿಗೆದಾರರು ಹಿಂದಿನ ಗುತ್ತಿಗೆದಾರರ ಮೇಲೆ ಮತ್ತು ಹಲವಾರು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿರುವ ಬಿಲ್ಗಳನ್ನು ಬಿಬಿಎಂಪಿ ಇನ್ನೂ ತಮ್ಮ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ.

2017 ರ ಆರಂಭದಲ್ಲಿ 101 ಕ್ಯಾಂಟೀನ್ಗಳನ್ನು ತೆರೆದ ನಂತರ, ಅದರ ಜನಪ್ರಿಯತೆಯ ಆಧಾರದ ಮೇಲೆ ಬೆಂಗಳೂರಿನ ಎಲ್ಲಾ 198 ವಾರ್ಡ್ಗಳಿಗೆ ಯೋಜನೆಯನ್ನು ವಿಸ್ತರಿಸಲಾಯಿತು. ಪ್ರಸ್ತುತ ಇಂದಿರಾ ಕ್ಯಾಂಟೀನ್ಗಳಲ್ಲಿ 5 ರೂಪಾಯಿಗೆ ಉಪಹಾರ, 10 ರೂಪಾಯಿಗೆ ಮಧ್ಯಾಹ್ನ ಮತ್ತು ರಾತ್ರಿ ಊಟ ನೀಡಲಾಗುತ್ತಿದೆ. ಬೆಂಗಳೂರಿನ ಬಹುತೇಕ ಕ್ಯಾಂಟೀನ್ಗಳ ಕಾರ್ಯಾಚರಣೆಗೆ ಧನಸಹಾಯ ನೀಡಲು ಪ್ರಸ್ತುತ ಬಿಜೆಪಿ ಸರ್ಕಾರಕ್ಕೆ ಆಸಕ್ತಿಯಿಲ್ಲವಾದ ಕಾರಣ ಈ ಕ್ಯಾಂಟೀನ್ಗಳು ಹಲವು ಕೊರತೆಯನ್ನು ಎದುರಿಸುತ್ತಿವೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
2017-18 ಮತ್ತು 2018-2019ರಲ್ಲಿ ಅಂದಿನ ಸರ್ಕಾರ ಕ್ರಮವಾಗಿ 100 ಕೋಟಿ ಮತ್ತು 145 ಕೋಟಿ ರೂಪಾಯಿ ಮಂಜೂರು ಮಾಡಿತ್ತು, ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ಯೋಜನೆಗೆ ಯಾವುದೇ ಹಣವನ್ನು ನಿಗದಿಪಡಿಸಲಾಗಿಲ್ಲ. ಹಾಗಾಗಿ, ಪೌರಕಾರ್ಮಿಕ ಸಂಸ್ಥೆಯು ತನ್ನ ಸ್ವಂತ ಬಜೆಟ್ನಿಂದ ಕ್ಯಾಂಟೀನ್ಗಳಿಗೆ ಹಣ ಮಂಜೂರು ಮಾಡಿದೆ.
ಇಂದಿರಾ ಕ್ಯಾಂಟೀನ್ಗಳನ್ನು ನಡೆಸಲು ಬಿಬಿಎಂಪಿ 2022-23ರ ಬಜೆಟ್ನಲ್ಲಿ 60 ಕೋಟಿ ರೂಪಾಯಿ ಮೀಸಲಿಟ್ಟಿತ್ತು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications