BWSSB: ಮಳೆಗಾಲದಲ್ಲೂ ಬೆಂಗಳೂರಿನ ಇಲ್ಲಿ 'ಟ್ಯಾಂಕರ್' ನೀರೇ ಆಧಾರ, ಪತ್ತೆಯಾಗದ ಸಮಸ್ಯೆ.!
ಬೆಂಗಳೂರು, ಜುಲೈ 25: ಬೆಂಗಳೂರಿನಲ್ಲಿ ಬೇಸಿಗೆ ಕಾಲದಲ್ಲಿ ನೀರಿಗೆ ಹಾಹಾಕಾರ ಸ್ಥಿತಿ ಉಂಟಾಗುವುದು ಸಾಮಾನ್ಯ. ಆದರೆ ರಾಜ್ಯಾದ್ಯಂತ ಈ ಮಟ್ಟಿಗೆ ಭಾರೀ ಮಳೆ ಆದರೂ ಸಹಿತ, ಕಾವೇರಿ ಕೊಳ್ಳದಲ್ಲಿ ನೀರಿದ್ದರೂ ಸಹಿತ ರಾಜಧಾನಿಯ ಈ ಬಡಾವಣೆಗಳಿಗೆ ಟ್ಯಾಂಕರ್ ನೀರೇ ಆಧಾರವಾಗಿದೆ.
ಬೆಂಗಳೂರಿನ ಬೇಗೂರು ರಸ್ತೆಯನ್ನು ಸೇಂಟ್ ಫ್ರಾನ್ಸಿಸ್ ಶಾಲೆಯ ಬಳಿ ನೀರಿನ ಅಭಾವ ಉಂಟಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಬಡಾವಣೆಗಳ ಜನರಿಗೆ ಆರೋಗ್ಯಕರ ನೀರು ಸಿಗುತ್ತಿಲ್ಲ. ಮಳೆಗಾಲದಲ್ಲೂ ಜನ ನೀರಿಗೆ ತತ್ತರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಟ್ಯಾಂಕರ್ ನೀರು ತರಿಸುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB)ಯು ಕಾವೇರಿ ನದಿಯಿಂದ ನಗರಕ್ಕೆ ನೀರು ಪೂರೈಸುತ್ತಿದೆ. ಆದರೆ ಈ ರಸ್ತೆಯಲ್ಲಿ ಒಡೆದು ಹೋಗಿರುವ ನೀರು ಪೂರೈಕೆಯ ಪೈಪ್ ಸ್ಥಳ ಪತ್ತೆ ಮಾಡುವಲ್ಲಿ ವಿಫಲವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ರಸ್ತೆಯ ಅಕ್ಕಪಕ್ಕದ ಬಡಾವಣೆಗಳ ಜನರಿಗೆ ಸಮಸ್ಯೆ ಉಂಟಾಗಿದೆ.
ಅಸಲಿಗೆ ಇದು 110 ಹಳ್ಳಿಗಳ ವ್ಯಾಪ್ತಿಯಲ್ಲಿ ಬರುತ್ತದೆ. ಇಲ್ಲಿ ಬೆಂಗಳೂರು ಜಲಮಮಂಡಳಿಯು ಪರಿಪೂರ್ಣ ನೀರಿನ ಪೈಪ್ ಲೈನ್ಗಳು ಒದಗಿಸುವ ಕಾರ್ಯ ನಡೆಯುತ್ತಿದೆ. ಕುಡಿಯುವ ನೀರಿನ ಪೈಪ್ಲೈನ್ ವ್ಯವಸ್ಥೆ ಇರುವ ಸ್ಥಳದಲ್ಲಿ ಸಮಸ್ಯೆ ಆಗಿದ್ದು, ಇದನ್ನು ಜಲಮಂಡಳಿ ಅಧಿಕಾರಿಗಳೇ ನಿರ್ವಹಿಸುತ್ತಿದ್ದಾರೆ.
ಕೊಳಚೆ ಮಿಶ್ರಿತ ನೀರು, ಅನಾರೋಗ್ಯದ ಆತಂಕ
ಕಾವೇರಿ ನೀರಿನ ಪೈಪ್ ಒಡೆದ ಪರಿಣಾಮ, ಕೊಳಚೆ ನೀರು ಪೈಪ್ ಒಳಗೆ ಮಿಶ್ರಣಗೊಂಡು ಪೂರೈಕೆ ಆಗುತ್ತಿದೆ. ಹೀಗಾಗಿ ಈ ಭಾಗದ ಜನರು ಆನಾರೋಗ್ಯ ಉಂಟಾಗುವ ಆತಕದಲ್ಲಿದ್ದಾರೆ. ಇಂತಹ ತೊಂದರೆ ಆದಾಗ ಸಮಸ್ಯೆ ಕಂಡುಹಿಡಿಯಲು ಹಲವೆಡೆ ಅಂತಹ ಪೈಪ್ಗಳನ್ನು ಅಳವಡಿಸಲಾಗಿದೆ. ಆದರೆ ಪೈಪ್ ಎಲ್ಲಿ, ಎಷ್ಟು ಕಡೆಗಳಲ್ಲಿ ಒಡೆದಿವೆ ಎಂಬುದು ನಾಲ್ಕು ದಿನವಾದರೂ ಪತ್ತೆ ಆಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದರಿಂದ ನೀರಿನ ಅಭಾವ ಉಂಟಾಗುವುದು ಮಾತ್ರವಲ್ಲದೆ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುವಂತಾಗಿದೆ. ಜನರಿಗೆ ಸದ್ಯಕ್ಕೆ ಟ್ಯಾಂಕರ್ ನೀರೆ ಆಧಾರವಾಗಿದೆ. ಈ ಕುರಿತು ಬೆಂಗಳೂರು ಜಲಮಂಡಳಿಯು ಸಮಸ್ಯೆ ಸೃಷ್ಟಿಯಾಗಿ ಮೂರು ದಿನಗಳ ನಂತರ ಕಾರ್ಯಪವೃತ್ತವಾಗಿದೆ ಎಂದು ಸ್ಥಳೀಯರು ದೂರಿದರು.
BWSSB ಅಧಿಕಾರಿಗಳು ಹೇಳಿದ್ದೇನು?
ಸಮಸ್ಯೆ ಕುರಿತು 'ಒನ್ ಇಂಡಿಯಾ ಕನ್ನಡ' ಜೊತೆಗೆ ಮಾತನಾಡಿದ ಬೆಂಗಳೂರು ಜಲಮಂಡಳಿಯ ಕಾರ್ಯನಿರ್ವಾಹಕ ಇಂಜಿನಿಯರ್ ಅಧಿಕಾರಿ ರಾಘವೇಂದ್ರ ಅವರು, ನಮ್ಮ ಜಲಮಂಡಳಿ ಅಧಿಕಾರಿಗಳು ಸಮಸ್ಯೆ ಪತ್ತೆ ಮಾಡಿದ್ದಾರೆ. ಒಂದು ಕಡೆ ಪೈಪ್ ಒಡೆದಿರುವುದನ್ನು ಬೊಮ್ಮನಹಳ್ಳಿ ವಲಯದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇನ್ನು ಎಲ್ಲೆಲ್ಲಿ ಒಡೆದಿದೆ ನೋಡಿಕೊಂಡು ಶನಿವಾರದ ಒಳಗೆ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಜಲಮಂಡಳಿ ಪರ ಮಾಹಿತಿ ನೀಡಿದರು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಭೂಗತ ಕಾರ್ಯ ಕೈಗೊಂಡ ವೇಳೆ ಪೈಪ್ ಒಡೆದು ಈ ರೀತಿ ಸಮಸ್ಯೆ ಆಗಿದೆ. ಇದು ಬೊಮ್ಮನಹಳ್ಳಿ ವಲಯವ್ಯಾಪ್ತಿಗೆ ಬರುತ್ತದೆ. ಇನ್ನೆರಡು ದಿನದಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications