ಬೋರ್ವೆಲ್ ನಿರ್ವಹಣೆಗೆ AI ತಂತ್ರಜ್ಞಾನ ಅಳವಡಿಕೆ: BWSSB
ಬೆಂಗಳೂರು, ಮಾರ್ಚ್ 26: ಮಳೆ ಬಾರದೆ ಇದ್ದಾಗ ಅಂತರ್ಜಲ ಸಹ ಕುಸಿಯುತ್ತದೆ. ಈ ಕಾರಣದಿಂದಲೇ ಕೊಳವೆ ಬಾವಿಗಳಲ್ಲಿ ನೀರು ಬರದೇ ಬೆಂಗಳೂರಿನಲ್ಲಿ ಸಮಸ್ಯೆ ಆಗುತ್ತಿದೆ. ಇಂತಹ ಸಮಸ್ಯೆ ತಡೆಯಲು ಬೆಂಗಳೂರು ಜಲಮಂಡಳಿಯು AI ತಂತ್ರಜ್ಞಾನ ಸೇರಿದಂತೆ ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ.
ಸೋಮವಾರ ನಗರದ ಚಿನ್ನಪ್ಪ ಗಾರ್ಡನ್ ನಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (AI) ಮತ್ತು ಐಓಟಿ (IOT) ತಂತ್ರಜ್ಞಾನ ಅಳವಡಿಸಲಾಗಿರುವ ಕೊಳವೆ ಬಾವಿಯ ಟ್ರಯಲ್ ರನ್ ಅನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷರು ಡಾ.ರಾಮ್ ಪ್ರಸಾದ್ ಮನೋಹರ್ ಪರಿಶೀಲಿಸಿದರು.

ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯಲು ಜಲಮಂಡಳಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ ಎಂದು ಜಲ ಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದರು.
ಕೊಳವೆ ಬಾವಿ ಪದೇ ಪದೆ ರಿಪೇರಿ
ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 14 ಸಾವಿರಕ್ಕೂ ಅಧಿಕ ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೊಳವೆ ಬಾವಿಗಳ ಪಂಪ್ ಸೆಟ್ಗಳನ್ನ ಹೆಚ್ಚಿನ ಸಮಯ ಬಳಸುವುದರಿಂದ ನೀರಿಲ್ಲದಿರುವುದು ಗೊತ್ತಾಗಿದೆ.
ಕೊಳೆವೆ ಬಾವಿಯಲ್ಲಿ ನೀರು ಇಲ್ಲದ್ದ ಗೊತ್ತಾಗದೆ ಮೋಟಾರ್ ಅನ್ನು ಓಡಿಸುವುದರಿಂದ ಬಹಳಷ್ಟು ಕೊಳವೆ ಬಾವಿಗಳು ರಿಪೇರಿಗೆ ಬರುತ್ತಿವೆ. ಇತ್ತೀಚೆಗೆ ಕೊಳವೆಬಾವಿಗಳು ಪದೇ ಪದೆ ತಾಂತ್ರಿಕ ಸಮಸ್ಯೆಗೆ ಸಿಲುಕುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಈ AI ಮತ್ತು ಐಓಟಿ(IOT) ತಂತ್ರಜ್ಞಾನ ಅಳವಡಿಸಲಾಗಿದೆ. ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಇಂದು ಪರಿಶೀಲಿಸಲಾಯಿತು ಎಂದು ಅವರು ಮಾಹಿತಿ ನೀಡಿದರು.

ತಂತ್ರಜ್ಞಾನದ ಅಳವಡಿಕೆಯ ಪ್ರಯೋಜನಗಳು
ಕೊಳವೆ ಬಾವಿಗಳಿಗೆ ಈ ನೂತನ ತಂತ್ರಜ್ಞಾನದ ಅಳವಡಿಕೆಯಿಂದ ಕೊಳವೆ ಬಾವಿಗಳನ್ನು ಸಮರ್ಥವಾಗಿ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸಲು ಸುಲಭವಾಗುತ್ತದೆ. ಕೊಳವೆ ಬಾವಿಗಳ ಅನಗತ್ಯ ಬಳಕೆ ತಪ್ಪಿಸಲು ಸಾಧ್ಯವಾಗುತ್ತದೆ. ಬಾವಿಯಲ್ಲಿ ನೀರಿಲ್ಲದೆ ಇರುವಂತಹ ಸಮಯದಲ್ಲಿ ಬಳಸುವುದನ್ನ ತಪ್ಪಿಸುವುದರ ಮೂಲಕ ಕೊಳವೆ ಬಾವಿಗಳು ನಿಷ್ಕ್ರಿಯ ಆಗುವುದನ್ನು ತಪ್ಪಿಸಬಹುದಾಗಿದೆ.
ಕೊಳವೆ ಬಾವಿಗಳನ್ನು ಸುಸ್ಥಿರವಾಗಿ ಹಾಗೂ ತಾಂತ್ರಿಕವಾಗಿ ಬಳಸುವುದು ಅಲ್ಲದೆ, ಪದೇಪದೇ ಮೋಟಾರ್ ಸುಟ್ಟು ಹೋಗುವಂತಹ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗೆ ಸಿಲುಕುವುದನ್ನು ಈ ಆಧುನಿಕ ತಂತ್ರಜ್ಞಾನಗಳು ತಪ್ಪಿಸುತ್ತವೆ. ಅಲ್ಲದೇ ಇವುಗಳ ನಿರ್ವಹಣೆಯ ವೆಚ್ಚವನ್ನು ಕಡಿಮೆಗೊಳಿಸಲು ತಂತ್ರಜ್ಞಾನ ಅಳವಡಿಕೆ ಸಹಕಾರಿಯಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.
ಖಾಸಗಿ ಟ್ಯಾಂಕರ್ ವಿರುದ್ಧ ದೂರು
ನಗರದಲ್ಲಿ ಜನರಿಗೆ ಕುಡಿಯುವ ನೀರನ್ನು ಪೂರೈಸಲು ಸುನೀಲ್ ಎನ್ನುವವರಿಗೆ ಸೇರಿದ ಖಾಸಗಿ ಟ್ಯಾಂಕರ್ ಕೆಎ-52 ಸಿ-0204 ಪಡೆದುಕೊಳ್ಳಲಾಗಿತ್ತು. ವಾರ್ಡ್ ನಂ 130ರಲ್ಲಿರುವ ಸಾರ್ವಜನಿಕರಿಗೆ ವಿತರಿಸಲು ಸೂಚಿಸಲಾಗಿತ್ತು. ಆದರೇ ಸದರಿ ಖಾಸಗಿ ಟ್ಯಾಂಕರ್ ಮಾಲೀಕ ಸುನೀಲ್ ಅವರು ಶೆಟ್ಟಿಹಳ್ಳಿ ಮುಖ್ಯ ರಸ್ತೆಯ ಮಲ್ಲಸಂದ್ರ ವಾರ್ಡ್ ಸಂ 14ರಲ್ಲಿ ವಾಣಿಜ್ಯ ಉದ್ದೇಶಕ್ಕೆ ನೀರು ವಿತರಿಸಿರುವುದು ಮಾ.24ರಂದು ಕಂಡು ಬಂದಿದೆ.
ಹೀಗಾಗಿ ಆ ಖಾಸಗಿ ಟ್ಯಾಂಕರ್ ಮಾಲೀಕ ಸುನೀಲ್ ಎನ್ನುವವರ ವಿರುದ್ಧ ಜಲಮಂಡಳಿಯ ಸಹಾಯಕ ಎಂಜನಿಯರ್ ಕಾರ್ತಿಕ್ ಮಂಜು ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications