ಬೆಂಗಳೂರು: ನೂರಾರು ಮಳೆನೀರು ಇಂಗುಗುಂಡಿ ನಿರ್ಮಿಸಿ ಮಾದರಿ ಆಯ್ತು ಜಲಮಂಡಳಿ
ಬೆಂಗಳೂರು, ಮೇ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಭಾರೀ ಹಾಹಾಕಾರ ಉಂಟಾಗಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಾಕಷ್ಟ ಕಡೆಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಮಾಡಿ, ಮೈಲಿಗಲ್ಲು ಸಾಧಿಸಿದೆ.
ಹೌದು, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಪೂರ್ವ ಮುಂಗಾರು ಮಳೆ ಸಕ್ರಿಯವಾಗಿದೆ. ಮುಂಗಾರು ಮಳೆ (Monsoon Rain) ಆರಂಭವಾಗಲು ತಿಂಗಳು ಬಾಕಿ ಇರುವಾಗಲೇ ಬೆಂಗಳೂರು ಜಲಮಂಡಳಿಯು ನಗರಾದ್ಯಂತ ಒಟ್ಟು 986 ಮಳೆ ನೀರು ಇಂಗು ಗುಂಡಿಗಳನ್ನು (Rainwater Harvesting) ನಿರ್ಮಿಸುವ ಮೂಲಕ ಮಾದರಿ ಆಗಿದೆ.

ಉದ್ಯಾನಗರಿಯಲ್ಲೇ ಅಂತರ್ಜಲ ಕುಸಿತ
ಉದ್ಯಾನ ನಗರಿ ಎಂದು ಹೆಸರಾಗಿರುವ ಬೆಂಗಳೂರಿನಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ನಗರದಲ್ಲಿ ಲಕ್ಷಾಂತರ ಜನರು ಅಂತರ್ಜಲದ ನೀರಿನ ಮೇಲೆಯೇ ಅವಲಂಬಿತರಾಗಿದ್ದರು. ಆದರೆ ಮಳೆ ಕೊರತೆ, ಇನ್ನಿತರ ಕಾರಣಗಳಿಂದ ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿ ಹೋಗಿತ್ತು. ಇದು ಈ ವರ್ಷ ಇನ್ನಿಲ್ಲದ ಸಮಸ್ಯೆಯಾಗಿ ಕಾಡಿತು.
ಮಳೆ ನೀರು ಕೊಯ್ಲು ಅಳವಡಿಸಿಕೊಂಡಿರುವ ಹಲವಾರು ಕಟ್ಟಡಗಳಲ್ಲಿ ಮಳೆ ನೀರಿನ ಇಂಗುಗುಂಡಿಗಳನ್ನು ರಚಿಸದೇ ಇರುವ ಕಾರಣ ಅಂತರ್ಜಲ ಮರುಪೂರಣ ಸರಿಯಾಗಿ ಆಗುತ್ತಿಲ್ಲ. ಮರುಪೂರಣ ಆಗದೇ ಇರುವ ಕಾರಣ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಲೇ ಇದೆ.
ಮಳೆ ನೀರು ಮರುಪೂರಣ
ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಸಾಕಷ್ಟು ಸಮಸ್ಯೆ ಆಗಲಿದೆ ಎಂಬುದನ್ನು ಮನಗಂಡ ಜಲಮಂಡಿಯು ಇದನ್ನು ತಡೆಗಟ್ಟುಲುಜನರು ಮಳೆ ನೀರು ಮರುಪೂರಣಕ್ಕಾಗಿ ಇಂಗು ಗುಂಡಿಗಳನ್ನು ನಿರ್ಮಿಸಬೇಕು. ಈ ನಿಮಿತ್ತ ಜನರಲ್ಲಿ ಜಾಗೃತಿ ಮೂಡಿಸುವ ಗುರಿ ಜಲಮಂಡಳಿ ಹೊಂದಿದೆ ಎಂದು BWSSB ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು.
ಹೆಚ್ಚು ಇಂಗುಗುಂಡಿಗಳ ನಿರ್ಮಾಣಕ್ಕೆ ನಿರ್ದೇಶನ
ಬೆಂಗಳೂರಿನಲ್ಲಿ ಜಲಮಂಡಳಿಯ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಕೊಳವೆ ಬಾವಿಗಳು ಬತ್ತಿ ಹೋಗಿವೆಯೋ ಅಲ್ಲೆಲ್ಲ ಮಳೆ ನೀರು ಇಂಗಲು ಸುಲಭವಾಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೆ ಎಚ್ಚೆತ್ತ ಅಧಿಕಾರಿಗಳು ಕೇವಲ ಒಂದೇ ತಿಂಗಳ ಸಮಯದಲ್ಲಿ ನಗರಾದ್ಯಂತ ಬರೋಬ್ಬರಿ 986 ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ವಲಯವಾರು ನಿರ್ಮಿಸಲಾಗುವ ಇಂಗುಗುಂಡಿಗಳ ಮೂಲಕ ಮಳೆಯ ನೀರು ಯಾವುದೇ ಕಲ್ಮಶವಿಲ್ಲದೇ ನೆಲದಡಿಗೆ ಇಳಿಯುವಂತೆ ಮಾಡಲಾಗಿದೆ.
ಅದೇ ರೀತಿ ನಗರದ ರಸ್ತೆಗಳಲ್ಲಿನ ನೀರು ಹರಿದು ಒಳಚರಂಡಿಗೆ ಸೇರ್ಪಡೆ ಆಗಿ ತೊಂದರೆ ಆಗದಂತೆ ತಡೆಯಲು ಇದು ಸಹಕಾರಿಯಾಗಲಿದೆ ಎಂದು ಜಲಮಂಡಲಿ ಅಭಿಪ್ರಾಯಪಟ್ಟಿದೆ.
ಸಮುದಾಯ ಮಳೆ ನೀರು ಕೊಯ್ಲುಗಾಗಿ 74 ಪ್ರಸ್ತಾವನೆ
ಬೆಂಗಳೂರಿನಲ್ಲಿ ಕುಸಿದಿರುವ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಮತ್ತು ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಜಲಮಂಡಳಿಯು ಸಮುದಾಯ ಮಳೆನೀರು ಕೋಯ್ಲು (ಕಮ್ಯೂನಿಟಿ ರೈನ್ ಹಾರ್ವೆಸ್ಟಿಂಗ್) ಯೋಜನೆ ಆರಂಭಿಸಿದೆ. ಇದಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.
ಈ ಕಾರಣದಿಂದ ಕೆಲವು ಸಮುದಾಯಗಳು ತಾವು ಮಳೆ ನೀರು ಕೊಯ್ಲು ಅವಳಡಿಕೆ ಮಾಡಿಕೊಳ್ಳುವುದಾಗಿ ಪ್ರಸ್ತಾವನೆ ಸಲ್ಲಿಸಿವೆ. ಈ ಕುರಿತು ನಿರ್ಧರಿಸಿ ಆದಷ್ಟು ಶೀಘ್ರವೇ ಮೊದಲ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications