ನೀರು ಸೋರಿಕೆ ತಡೆಗೆ, ಅಕ್ರಮ ಸಂಪರ್ಕ ಪತ್ತೆಗೆ BWSSB ಮಾಸ್ಟರ್ ಪ್ಲಾನ್: ಕಾರ್ಯಕ್ರಮಕ್ಕೆ ಇಂದು ಡಿಸಿಎಂ ಚಾಲನೆ
ಬೆಂಗಳೂರು, ನವೆಂಬರ್ 19: ಬೆಂಗಳೂರಿಗೆ ದೂರದ ಪ್ರದೇಶದಿಂದ ಕಾವೇರಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಕಾವೇರಿ ಐದನೇ ಹಂತದ ಯೋಜನೆಯಿಂದ ಬೆಂಗಳೂರಿಗೆ ನೀರು ಬರುತ್ತಿದೆ. ಆದರೆ ಪೈಪ್ಗಳಲ್ಲಿ ಆಗಾಗ ನೀರು ಸೋರಿಕೆ, ಸರಬರಾಜಿನಲ್ಲಿ ವ್ಯತ್ಯಯದಂತಹ ಸಮಸ್ಯೆಗಳು ಆಗಾಗ ಉಂಟಾಗುತ್ತವೆ. ನೀರು ಸೋರಿಕೆ ತಡೆಗೆ ಇದೀಗ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ತಂತ್ರಜ್ಞಾನ ಅಳವಡಿಸಿಕೊಂಡಿದೆ. ವಿನೂತನ ಕಾರ್ಯಕ್ರಮ ರೂಪಿಸಿದೆ. ಅದಕ್ಕೆ ಇಂದು ಚಾಲನೆ ದೊರೆಯಲಿದೆ.
ಈ ಬಗ್ಗೆ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಅವರು ಮಾಹಿತಿ ನೀಡಿದರು. ಬೆಂಗಳೂರಿನಾದ್ಯಂತ ನೀರು ಸೋರಿಕೆ ತಡೆಯಲು ಮತ್ತು ಅನಧಿಕೃತ ನೀರು ಹಾಗೂ ಒಳಚರಂಡಿ (ಸೀವೇಜ್) ಸಂಪರ್ಕಗಳನ್ನು ಪತ್ತೆ ಹಚ್ಚಲು BWSSB ಒಂದು ಮಹತ್ವದ ಮತ್ತು ವಿನೂತನ ಕಾರ್ಯಕ್ರಮ ರೂಪಿಸಿದೆ. ಅದಕ್ಕೆ ಇಂದು (ನ.19) ಬುಧವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಈ ಯೋಜನೆಯು ಎರಡು ಪ್ರಮುಖ ಅಂಶಗಳನ್ನು ಒಳಗೊಂಡಿದೆ. 'ಬ್ಲೂ ಫೋರ್ಸ್' ವಿಶೇಷ ದಳದ ಪ್ರಾರಂಭ ಬಿಡಬ್ಲ್ಯೂ ಎಸ್ ಎಸ್ ಬಿಯು ತನ್ನ ಪ್ರತಿಯೊಂದು ಉಪವಿಭಾಗಕ್ಕೆ ಒಂದು ವಿಶೇಷ 'ಬ್ಲೂ ಫೋರ್ಸ್' ತಂಡವನ್ನು (ಒಟ್ಟು 16 ಮೂವರು ಸದಸ್ಯರು) ರಚಿಸಿದೆ. ಈ ವಿಶೇಷ ದಳವು ಈ ವಾರದಿಂದಲೇ ತನ್ನ ಕಾರ್ಯಾಚರಣೆ ಆರಂಭಿಸಲಿದೆ ಎಂದರು.
ಸೋರಿಕೆ ತಡೆಯ ಕಾರ್ಯ ಹೇಗೆ?
ಈ ಕಾರ್ಯಕ್ರಮ ಮೂಲಕ ಅಕ್ರಮ ನೀರು ಬಳಕೆ ಮತ್ತು ಒಳಚರಂಡಿ ಸಂಪರ್ಕಗಳನ್ನು ಪತ್ತೆಹಚ್ಚುವುದು. ಅನಧಿಕೃತವಾಗಿ ನೀರು ಸೋರುವಿಕೆ ಮತ್ತು ಬೈಪಾಸ್ ಸಂಪರ್ಕಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ನೀರಿನ ಸೋರಿಕೆಯಿಂದ ಮಂಡಳಿಗೆ ಆಗುತ್ತಿರುವ ಭಾರಿ ಆರ್ಥಿಕ ನಷ್ಟವನ್ನು ತಡೆಗಟ್ಟುವುದು. ನೀರಿನ ನ್ಯಾಯಯುತ ವಿತರಣೆ ಖಚಿತಪಡಿಸುವುದು ಈ ವಿಶೇಷ ದಳದ ಉದ್ದೇಶವಾಗಿದೆ ಎಂದು ವಿವರಿಸಿದರು.
ರೋಬೋಟಿಕ್ ಮತ್ತು ಎಐ ತಂತ್ರಜ್ಞಾನ ಅಳವಡಿಕೆ
ಕುಡಿಯುವ ನೀರಿನ ಸೋರಿಕೆಯ ನಿಖರ ಸ್ಥಳವನ್ನು ಪತ್ತೆಹಚ್ಚಲು ಮತ್ತು ಅನಗತ್ಯ ರಸ್ತೆ ತೋಡುವಿಕೆಗೆ ಕಡಿವಾಣ ಹಾಕಲು ಮಂಡಳಿಯು ಪ್ರಮುಖ ರೋಬೋಟಿಕ್ ತಂತ್ರಜ್ಞಾನ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಈ ರೋಬೋಟ್ ತಂತ್ರಜ್ಞಾನ ಕಾರ್ಯ ನಿರ್ವಹಿಸಲಿದೆ. ರೋಬೋ ಪರೀಕ್ಷೆಯಿಂದ ನಿಖರವಾದ ದೋಷದ ಸ್ಥಳ ಪತ್ತೆ ಆಗುತ್ತದೆ. ರಸ್ತೆ ತೋಡುವಿಕೆ ಮತ್ತು ಸಾರ್ವಜನಿಕರಿಗೆ ಆಗುವ ತೊಂದರೆಗಳು ಗಣನೀಯವಾಗಿ ಕಡಿಮೆ ಆಗುತ್ತವೆ. ದೂರು ಪರಿಹಾರ ಪ್ರಕ್ರಿಯೆಯು ವೇಗಗೊಳ್ಳುತ್ತದೆ.
ಅಕ್ರಮ ಸಂಪರ್ಕಗಳಿಂದ ಮಂಡಳಿಗೆ ಭಾರಿ ನಷ್ಟ ಉಂಟಾಗುತ್ತದೆ. ತಂತ್ರಜ್ಞಾನ ಮತ್ತು ಕಾನೂನು ಜಾರಿಗೊಂಡು ಎಲ್ಲ ಉಲ್ಲಂಘನೆಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ. ಈ ವಿನೂತನ ಉಪಕ್ರಮದಿಂದ ಸುಮಾರು ಶೇಕಡ 28ರಷ್ಟು ನೀರಿನ ನಷ್ಟವನ್ನು ಗಣನೀಯವಾಗಿ ಕಡಿತಗೊಳಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಹೇಳಿದರು.
ತಂತ್ರಜ್ಞಾನದ ಉಪಯೋಗಗಳನ್ನು ನೋಡುವುದಾದರೆ, ಪೈಪ್ಲೈನ್ಗಳ ಒಳಭಾಗದ ನಿಖರ ಪರಿಶೀಲನೆ ನಡೆಸಲು ಸಾಧ್ಯವಾಗುತ್ತದೆ. ಎಐ ನಿಖರವಾದ ಲೀಕೇಜ್ ಸ್ಥಳ ಪತ್ತೆ ಜೊತೆಗೆ ಆಧಾರಿತ ದೋಷ ಪತ್ತೆಹಚ್ಚುವಿಕೆ ಮತ್ತು ಸಂಪೂರ್ಣ ಪೈಪ್ಲೈನ್ ಜಾಲದ ಡಿಜಿಟಲ್ ಮ್ಯಾಪಿಂಗ್ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications