Bengaluru Water Crisis: ಹಲವು ಬಡಾವಣೆಗಳಲ್ಲಿ BWSSB ಅಧಿಕಾರಿಗಳಿಂದ ಟ್ಯಾಂಕರ್ ನೀರು ವ್ಯವಸ್ಥೆ
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಹೇರೋಹಳ್ಳಿ ವಾರ್ಡ್ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಸುದ್ದಿ ಅರಿಯುತ್ತಲೇ ಸ್ಥಳಕ್ಕೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಸ್ಥಳದಲ್ಲಿದ್ದ ಕೆಂಪೇಗೌಡ ಬಡಾವಣೆಯ ನಾಗರಿಕರೊಂದಿಗೆ ಚರ್ಚಿಸಿದ ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳು ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರನ್ನು ಸರಬರಾಜು ಮಾಡುವುದರ ಮೂಲಕ ಸಮಸ್ಯೆ ಬಗೆಹರಿಸಿದರು. ಇನ್ಮುಂದೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ಬಿಡಬ್ಲ್ಯೂಎಸ್ಎಸ್ಬಿ ಮುಖ್ಯ ಎಂಜನಿಯರ್ ಅವರು ತಮ್ಮ ಅಧಿಕಾರಿಗಳ ತಂಡದೊಂದಿಗೆ ಭಾರತಿನಗರಕ್ಕೆ ಭೇಟಿ ನೀಡಿ ಕುಡಿಯುವ ನೀರು ಸರಬರಾಜುವಿನ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದರು.
ಅಧಿಕಾರಿಗಳಿಗೆ ಸೂಚನೆ
ನೀರು ಸರಬರಾಜಾಗುವ ಪೈಪ್ ಲೈನ್ ವ್ಯವಸ್ಥೆ ಹಾಗೂ ಸುಗಮ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ರೀತಿಯ ಸಮಸ್ಯೆಯಾಗಂತೆ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಕ್ರಮವಹಿಸಲು ಸೂಚನೆ ನೀಡಿದರು.
ನಾಯಂಡಹಳ್ಳಿಯ ಪಂತರ್ ಪಾಳ್ಯದ ಅಂಬೇಡ್ಕರ್ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಉದ್ಭವವಾಗಿರುವುದನ್ನು ಅರಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಾಗರಿಕರೊಂದಿಗೆ ಚರ್ಚಿಸಿದರು. ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದರು.
ಜ್ಞಾನಭಾರತಿ ಬಳಿ ನೀರು ಸರಬರಾಜು ಪೈಪ್ ಗೆ ಹಾನಿ
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಬಳಿ ಕುಡಿಯುವ ನೀರು ಸರಬರಾಜು ಮಾಡುವ 1000 ಎಂಎಂ ವ್ಯಾಸದ ಪೈಪ್ ಲೈನ್ಗೆ ಗುರುವಾರ ಬೆಳಗ್ಗೆ ಹಾನಿಯಾಗಿತ್ತು. ಹಾನಿಯಾಗಿರುವುದು ಗೊತ್ತಾಗುತ್ತಲೇ ಸ್ಥಳಕ್ಕೆ ತೆರಳಿದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಕಾರ್ಮಿಕರೊಡಗೂಡಿ ನಿರಂತರ ನಾಲ್ಕುಗಂಟೆಗಳ ಕಾಲ ಸದರಿ ಪೈಪ್ ಅನ್ನು ದುರಸ್ತಿಗೊಳಿಸಿದರು. ಈ ಮೂಲಕ ರಾಜರಾಜೇಶ್ವರಿ ನಗರಕ್ಕೆ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ
ನಿರಂತರ ನೀರು ಸರಬರಾಜು ಮಾಡುವಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications