ಕಾವೇರಿ ನೀರಿನ ಬಾಕಿ ಬಿಲ್ ಕಟ್ಟುವವರಿಗಾಗಿ ಇಂದಿನಿಂದಲೇ 'ಒಟಿಎಸ್' ಆರಂಭ; 5.11 ಲಕ್ಷ ಮಂದಿಗೆ ಬಿಲ್ ಜತೆ ನೋಟಿಸ್
ಬೆಂಗಳೂರು: ರಾಜ್ಯ ಸರ್ಕಾರದ ನಿರ್ಧಾರದಂತೆ ದೀರ್ಘ ಕಾಲದಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಂತಹ ಗ್ರಾಹಕರಿಗೆ ಅನುಕೂಲ ಒದಗಿಸಲು 'ಒನ್ ಟೈಮ್ ಸೆಟಲ್ಮೆಂಟ್' (𝗢𝗻𝗲 𝗧𝗶𝗺𝗲 𝗦𝗲𝘁𝘁𝗹𝗲𝗺𝗲𝗻𝘁 - 𝗢𝗧𝗦) ಯೋಜನೆ ಪ್ರಕ್ರಿಯೆಯನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕೃತವಾಗಿ ಆರಂಭಿಸಿದೆ. ಇದರ ಜೊತೆಗೆ ಮತ್ತೊಂದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (𝗕𝗪𝗦𝗦𝗕) ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಸೋಮವಾರ ತಿಳಿಸಿದರು.
ಬಾಕಿ ನೀರಿನ ಬಿಲ್ ಮೊತ್ತದ ಮೇಲಿನ ಶೇ. 100 ಅಂದರೆ ಸಂಪೂರ್ಣ ಬಡ್ಡಿ ಕೈ ಬಿಟ್ಟು ಶುಲ್ಕ ಪಾವತಿಸಗೆ ಒಟಿಎಸ್ ಮೂಲಕ ಅವಕಾಶ ನೀಡಲಾಗಿದೆ. ಈ ಯೋಜನೆ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಈ ತಿಂಗಳ ನೀರಿನ ಬಿಲ್ ಜೊತೆಯಲ್ಲೇ ಒಟಿಎಸ್ ಯೋಜನೆ ಅಡಿಯಲ್ಲಿ ಬರುವ ಗ್ರಾಹಕರಿಗೆ ಪಾವತಿ ಮಾಹಿತಿ ಇರುವ ನೋಟಿಸ್ ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಯುಗಾದಿ ಹಬ್ಬದ ವಿಶೇಷ ಕೊಡುಗೆಯಾಗಿ ಜಲಮಂಡಳಿ ವತಿಯಿಂದ ಈ ಒಟಿಎಸ್ ಯೋಜನೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಸ್ವತಃ ಪ್ರಕಟಿಸುವ ಮೂಲಕ ಸಿಹಿ ಸುದ್ದಿ ಕೊಟ್ಟಿದ್ದರು. ಜಲಮಂಡಳಿ ವ್ಯಾಪ್ತಿಯಲ್ಲಿರುವ ಸುಮಾರು 𝟭𝟭 ಲಕ್ಷ ನೀರಿನ ಸಂಪರ್ಕಗಳ ಪೈಕಿ, 𝟱.𝟭𝟭 ಲಕ್ಷ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿರುವುದಾಗಿ ಅವರು ವಿವರಿಸಿದ್ದಾರೆ.
𝟮𝟬𝟮𝟲 ರ ಫೆಬ್ರವರಿ ಅಂತ್ಯದ ಮಾಹಿತಿಯಂತೆ, ಒಟ್ಟು ಬಾಕಿ ಮೊತ್ತ ರೂ. 𝟴𝟱𝟭.𝟯𝟯 ಕೋಟಿಗಳಾಗಿವೆ. ಇದರಲ್ಲಿ ಅಸಲು ಮೊತ್ತ ರೂ. 𝟱𝟯𝟵.𝟰𝟯 ಕೋಟಿ ಹಾಗೂ ಬಡ್ಡಿ ರೂ. 𝟯𝟭𝟭.𝟵𝟬 ಕೋಟಿ ಸೇರಿದೆ. ಈ ಬೃಹತ್ ಬಾಕಿಯನ್ನು ಸುಲಭವಾಗಿ ಪಾವತಿಸಲು ಹಾಗೂ ಗ್ರಾಹಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು, ಏಪ್ರಿಲ್ 𝟮𝟬𝟮𝟲 ರಿಂದ ಜೂನ್ 𝟮𝟬𝟮𝟲 ರವರೆಗೆ (𝟯 ತಿಂಗಳ ಅವಧಿ) ಈ ಒಟಿಎಸ್ ಯೋಜನೆ ಜಾರಿಗೆ ತರಲಾಗುತ್ತಿದೆ.
ಬಿಲ್ ಜೊತೆಯಲ್ಲೇ ಸಮಗ್ರ ಮಾಹಿತಿ
"ಯೋಜನೆಯ ಯಶಸ್ವಿ ಜಾರಿಗೆ ಈಗಾಗಲೇ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಒಟಿಎಸ್ ಯೋಜನೆಗೆ ಅರ್ಹರಾಗಿರುವ ಗ್ರಾಹಕರಿಗೆ ಈ ತಿಂಗಳ ನೀರಿನ ಬಿಲ್ ಜೊತೆಯಲ್ಲಿಯೇ ಸಮಗ್ರ ಮಾಹಿತಿ ಒದಗಿಸಲಾಗುವುದು. ಬಾಕಿ ಮೊತ್ತ, ಮನ್ನಾ ಆಗುವ ಬಡ್ಡಿ, ಪಾವತಿಸಬೇಕಾದ ಅಂತಿಮ ಮೊತ್ತ, ಪಾವತಿಸುವ ವಿಧಾನ ಹಾಗೂ ಯೋಜನೆಯ ಮಾನದಂಡಗಳ ಸಂಪೂರ್ಣ ವಿವರಗಳನ್ನು ಒಳಗೊಂಡಿರುವ ಪ್ರತ್ಯೇಕ ಪತ್ರವನ್ನು ಬಿಲ್ ಜೊತೆಯಲ್ಲೇ ನೀಡಲಾಗುವುದು ಎಂದು ಅವರು ವಿವರಿಸಿದರು.
𝟯𝟭𝟭.𝟵𝟬 ಕೋಟಿ ರೂ. ಬಡ್ಡಿ ಮನ್ನ
ಇಷ್ಟು ದೊಡ್ಡ ಪ್ರಮಾಣದಲ್ಲಿ ನೀರಿನ ಬಾಕಿ ಬಿಲ್ ಮೇಲಿನ ಬಡ್ಡಿ ಮನ್ನಾಗೆ ಸರ್ಕಾರ ನಿರ್ಧರಿಸಿದೆ. ನಗರದಲ್ಲಿ ಬಹಳ ದಿನಗಳಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು, ಬಡ್ಡಿ ಮನ್ನಾದ ಈ ಸುವರ್ಣಾವಕಾಶ ಪಡೆದುಕೊಳ್ಳಬೇಕು. ತಮ್ಮ ಅಸಲು ಹಣವನ್ನು ಪಾವತಿಸುವ ಮೂಲಕ ಮಂಡಳಿಯೊಂದಿಗೆ ಕೈಜೋಡಿಸಬೇಕು ಎಂದು ಜಲಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್













Click it and Unblock the Notifications