ಬೆಂಗಳೂರಿನ ಪ್ರವಾಹ, ಮಾಲಿನ್ಯ ನಿಯಂತ್ರಣಕ್ಕೆ 9 ಒಳಚರಂಡಿ ಸಂಸ್ಕರಣಾ ಘಟಕ ತೆರೆಯಲು BWSSB ಪ್ಲಾನ್
ಬೆಂಗಳೂರು, ಜುಲೈ 4: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೆರೆಗಳ ಮೇಲೆ ಒಂಬತ್ತು ಒಳಚರಂಡಿ ಸಂಸ್ಕರಣಾ ಘಟಕಗಳನ್ನು (STPs) ಸ್ಥಾಪಿಸಲು ಯೋಜನೆಯನ್ನು ಸಿದ್ಧಪಡಿಸುತ್ತಿದ್ದು, ಅವುಗಳ ಸ್ಥಾಪನೆಗೆ ಸೂಕ್ತವಾದ ಸ್ಥಳಗಳನ್ನು ಹುಡುಕುತ್ತಿದೆ ಎಂದು ಡಿಎಚ್ ವರದಿ ಮಾಡಿದೆ.
ಪ್ರವಾಹ ತಗ್ಗಿಸುವ ಯೋಜನೆಗಳ ಭಾಗವಾಗಿ ಕೈಗೊಳ್ಳಬಹುದಾದ ಯೋಜನೆಯು ನಗರದ ಉತ್ತರ ಮತ್ತು ಪೂರ್ವ ಭಾಗಗಳಲ್ಲಿನ ಜಲಮೂಲಗಳ ಮೇಲೆ ಕೇಂದ್ರೀಕರಿಸುತ್ತದೆ. ನಾವು ನೀರನ್ನು ಸಂಸ್ಕರಿಸಿ ಬೆಂಗಳೂರಿನಿಂದ ಸುತ್ತಮುತ್ತಲಿನ ಜಿಲ್ಲೆಗಳಿಗೆ ಸಾಗಿಸಿದರೆ, ನಗರ ಮತ್ತು ನೆರೆಹೊರೆಯ ಪ್ರದೇಶಗಳಿಗೆ ಅನುಕೂಲವಾಗುತ್ತದೆ" ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆರೆಗಳಿಗೆ ಕೊಳಚೆ ನೀರು ಹರಿದು ಬರುತ್ತಿರುವ ಬಗ್ಗೆ ಹಲವು ದೂರುಗಳನ್ನು ಸೂಚಿಸಿದ ಅಧಿಕಾರಿ, ಕೆರೆ ಪರಿಸರ ಕಲುಷಿತಗೊಳ್ಳುತ್ತಿರುವ ಕಾರಣ ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸುವ ಅಗತ್ಯವಿದೆ. ತಾತ್ತ್ವಿಕವಾಗಿ ಪ್ರತಿ ಕೆರೆವು ಒಳಚರಂಡಿ ಸಂಸ್ಕರಣಾ ಘಟಕ ಹೊಂದಿರಬೇಕು. BWSSB ಸೀಮಿತ ಸಂಪನ್ಮೂಲಗಳನ್ನು ಹೊಂದಿರುವುದರಿಂದ ಇದು 10 ಮಧ್ಯವರ್ತಿ ಒಳಚರಂಡಿ ಪಂಪಿಂಗ್ ಕೇಂದ್ರಗಳನ್ನು (ISPS) ಪ್ರಸ್ತಾಪಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಒಳಚರಂಡಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವುದು ಬಂಡವಾಳ ಕೊರತೆ ಇರುವುದರಿಂದ ಪ್ರತಿ ಕೆರೆಯಲ್ಲಿ ಒಂದನ್ನು ಸ್ಥಾಪಿಸುವುದು ಅಸಾಧ್ಯ. ಆದ್ದರಿಂದ ನಾವು ಒಳಚರಂಡಿ ಹತ್ತಿರದ ಒಳಚರಂಡಿ ಸಂಸ್ಕರಣಾ ಘಟಕ ತಲುಪುವುದಕ್ಕಾಗಿ ಕೆಲವು ಒಳಚರಂಡಿ ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗುವುತ್ತೇವೆ ಎಂದರು.

ಹೊಸ ಎಸ್ಟಿಪಿಗಳನ್ನು ಸ್ಥಾಪಿಸುವ ಆಲೋಚನೆಯನ್ನು ತಜ್ಞರು ಸ್ವಾಗತಿಸಿದರೂ, ಅವುಗಳನ್ನು ಮೇಲ್ವಿಚಾರಣೆ ಮಾಡದಿರುವುದು ಯೋಜನೆಯನ್ನು ನಿಷ್ಪ್ರಯೋಜಕವಾಗಿಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಪಾರದರ್ಶಕತೆ ಮತ್ತು ಅಂಕಿ ಅಂಶವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಅವಶ್ಯಕತೆಯಿದೆ. ಈ ಡೇಟಾವನ್ನು ಮೇಲ್ವಿಚಾರಣೆ ಮಾಡಬೇಕು ಮತ್ತು ಸಲಹೆಗಳನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಕ್ಷನ್ ಏಡ್ ಅಸೋಸಿಯೇಶನ್ ಇಂಡಿಯಾದ ಕಾರ್ಯಕ್ರಮ ವ್ಯವಸ್ಥಾಪಕ ರಾಘವೇಂದ್ರ ಬಿ ಪಚ್ಚಾಪುರ ಹೇಳಿದರು.
ರಾಘವೇಂದ್ರ ಅವರ ಪ್ರಕಾರ, ಹೊಸ ಒಳಚರಂಡಿ ಸಂಸ್ಕರಣಾ ಘಟಕಗಳು ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ನೀರಿನ ತೃತೀಯ ಸಂಸ್ಕರಣೆಯನ್ನು ಖಚಿತಪಡಿಸಿಕೊಳ್ಳಬೇಕು. ನೀರಿನ ಮರುಬಳಕೆಗೆ ತೃತೀಯ ಹಂತದ ಕ್ರಮದ ಮಹತ್ವವನ್ನು ಅವರು ಒತ್ತಿ ಹೇಳಿದರು.
BWSSB ವಿಶ್ವಬ್ಯಾಂಕ್ನಿಂದ 1,000 ಕೋಟಿ ರೂಪಾಯಿಗಳ ಆರ್ಥಿಕ ನೆರವಿನೊಂದಿಗೆ ಯೋಜನೆಯನ್ನು ಕೈಗೆತ್ತಿಕೊಳ್ಳಲು ಯೋಜಿಸಿದೆ. ಈ ನಿಧಿಯು ಬೆಂಗಳೂರಿನ ಪ್ರವಾಹ ತಗ್ಗಿಸುವ ಅನುದಾನದ ಭಾಗವಾಗಿದೆ. ಬೆಂಗಳೂರಿಗೆ 3,000 ಕೋಟಿ ರೂಪಾಯಿ ಸಿಗುವ ನಿರೀಕ್ಷೆಯಿದ್ದರೆ, ಉಳಿದ Rs 2,000 ಕೋಟಿಯನ್ನು ಮಳೆನೀರು ಚರಂಡಿ (SWD) ಜಾಲವನ್ನು ಬಲಪಡಿಸಲು ಮತ್ತು ಕೆರೆಗಳ ಪುನಶ್ಚೇತನಕ್ಕೆ ವಿನಿಯೋಗಿಸಲಾಗುತ್ತದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications