ನೀರಿನ ಬಿಲ್ ಹಗರಣ: 13 ಸಿಬ್ಬಂದಿ ಅಮಾನತುಗೊಳಿಸಿದ BWSSB
ಬೆಂಗಳೂರು, ಜನವರಿ 5: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನಾಗರಿಕರು ನೀರಿನ ಬಿಲ್ಗಾಗಿ ಪಾವತಿಸಿದ್ದ 7 ಕೋಟಿ ರೂಪಾಯಿಗಳನ್ನು ವಂಚಿಸಿದ ಆರೋಪದ ಮೇಲೆ 13 ಉದ್ಯೋಗಿಗಳನ್ನು ಅಮಾನತುಗೊಳಿಸಿದೆ.
ಅಮಾನತುಗೊಂಡ ಉದ್ಯೋಗಿಗಳಲ್ಲಿ ಯುಟಿಲಿಟಿಯ ಕಂದಾಯ ವ್ಯವಸ್ಥಾಪಕರು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ಗಳು ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್ಗಳು ಸೇರಿದ್ದಾರೆ.
ಹಗರಣದಲ್ಲಿ ಅಮಾನತು ಆದವರ ಕೈವಾಡವನ್ನು ಸಾಬೀತುಪಡಿಸಿದ ವಿಚಾರಣೆಯ ಮಧ್ಯಂತರ ವರದಿಯ ಆಧಾರದ ಮೇಲೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶಗಳಲ್ಲಿ ತಿಳಿಸಿದೆ. ಮಂಡಳಿಯು 2017 ರಿಂದ ದಾಖಲೆಗಳನ್ನು ಪರಿಶೀಲಿಸಲು ಮೂರು ವಿಶೇಷ ಆಡಿಟ್ ಸಮಿತಿಗಳನ್ನು ರಚಿಸಿದೆ.

ಪ್ರಾಥಮಿಕವಾಗಿ ಮೂವರು ಹೊರಗುತ್ತಿಗೆ ಸಿಬ್ಬಂದಿ ಹಿರಿಯ ಅಧಿಕಾರಿಗಳ ಲಾಗಿನ್ ಮತ್ತು ಪಾಸ್ವರ್ಡ್ಗಳನ್ನು ತಿದ್ದಿದ್ದಾರೆ ಮತ್ತು ನೀರಿನ ಬಿಲ್ಗಳಿಗೆ ಕೈಯಾರೆ ಸಂಗ್ರಹಿಸಿದ ಹಣವನ್ನು ಪಾವತಿಸಿಲ್ಲ ಎಂದು ಸಾಬೀತಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.
ಅಮಾನತುಗೊಂಡಿರುವ ಸಿಬ್ಬಂದಿ ಈಗ ಇಲಾಖಾ ವಿಚಾರಣೆ ಎದುರಿಸಲಿದ್ದಾರೆ. ಜವಾಬ್ದಾರಿಯುತ ಹುದ್ದೆಗಳಲ್ಲಿದ್ದ ಕೆಲವು ಸಾಮಾನ್ಯ ಉದ್ಯೋಗಿಗಳು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಸಿಬ್ಬಂದಿಯೊಂದಿಗೆ ಕೈಜೋಡಿಸಿ ಅಪರಾಧ ಎಸಗಿದ್ದಾರೆ ಎಂದು ಆಂತರಿಕ ವಿಚಾರಣೆಯಿಂದ ಸಾಬೀತಾಗಿದೆ ಎಂದು BWSSB ಮೂಲಗಳು ತಿಳಿಸಿವೆ.

ಮೂವರು ಹೊರಗುತ್ತಿಗೆ ನೌಕರರಿಂದ ಅನುಮಾನಾಸ್ಪದ ಚಟುವಟಿಕೆಯ ಸುಳಿವು ನೀಡಿದ ನಂತರ ಪೊಲೀಸರು ಬಂಧಿಸಿದರು. ಮಂಡಳಿಯ ಅಧಿಕಾರಿಗಳು ಆಂತರಿಕ ವಿಚಾರಣೆ ನಡೆಸಿದಾಗ ನಗದು, ಡಿಡಿ ಮತ್ತು ಚೆಕ್ ರೂಪದಲ್ಲಿ ಸಂಗ್ರಹಿಸಲಾದ ನೀರಿನ ಬಿಲ್ BWSSB ಖಾತೆಗೆ ಜಮಾ ಆಗಿಲ್ಲ ಎಂದು ತಿಳಿದು ಬಂದಿದೆ. BWSSBಯಿಂದ ಅಮಾನತುಗೊಂಡವರಲ್ಲಿ: ಭರತ್ ಕುಮಾರ್ ಜಿ ಎಸ್, ಆರ್ ಶ್ರೀನಿವಾಸ್, ವಿಶ್ವನಾಥ್ ಕೆ, ಸಿ ಸೋಮಶೇಖರ್, ಬಿ ನಾಗೇಂದ್ರ, ಸಿ ನಾಗರಾಜು, ಸಚಿನ್ ಪಟೇಲ್, ರಾಮಪ್ಪ ಮಡಿವಾಳರ, ಸ್ನೇಹಾ ವಿ, ಭೀಮಾಶಂಕರ್, ಗೀತಾ ಎಂ, ಎನ್ ರುದ್ರೇಶ್ ಮತ್ತು ಎಸ್ ಯೋಗೇಶ್ ಸೇರಿದ್ದಾರೆ.
ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಹಾಗೂ ನವೋದಯ ಸರ್ವೀಸ್ ಏಜೆನ್ಸಿ ಗುತ್ತಿಗೆ ಸಂಸ್ಥೆಯ ಪ್ರತಿನಿಧಿಗಳು ಶಾಮೀಲಾಗಿ ಅಕ್ರಮ ಎಸಗಿದ್ದರು. ಕೊರೋನಾ ಮತ್ತು ಲಾಕ್ಡೌನ್ ಸಂದರ್ಭದಲ್ಲಿ ನಗದು ರೂಪದಲ್ಲಿ ಸಂಗ್ರಹಿಸಿದ್ದ ನೀರಿನ ಶುಲ್ಕವನ್ನು ಅಧಿಕಾರಿಗಳು ಮತ್ತು ಏಜೆನ್ಸಿ ಪ್ರತಿನಿಧಿಗಳು ಜಲಮಂಡಳಿಯ ಬ್ಯಾಂಕ್ ಖಾತೆಗೆ ಸಂದಾಯ ಮಾಡದೆ ಸ್ವಂತಕ್ಕೆ ಬಳಸಿಕೊಂಡಿದ್ದರು. ಆದರೆ, ಜಲಮಂಡಳಿ ಬ್ಯಾಂಕ್ ಖಾತೆಗೆ ಬಿಲ್ ಪಾವತಿಸಿರುವುದಾಗಿ ನಕಲಿ ದಾಖಲೆಪತ್ರ ಸೃಷ್ಟಿಸಿ ವಂಚಿಸಿದ್ದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications