ಬೆಂಗಳೂರು ಜಲಮಂಡಳಿ ನೇರ-ಫೋನ್ ಇನ್: ಗ್ರಾಹಕರ ಸಮಸ್ಯೆಗಳಿಗೆ ಅಧ್ಯಕ್ಷರಿಂದಲೇ ನೇರ ಪರಿಹಾರ
ಬೆಂಗಳೂರು: ಬೆಂಗಳೂರು ನಗರಕ್ಕೆ ನೀರು ಕುಡಿಯುವ ಕಾವೇರಿ ನೀರು ಪೂರೈಕೆ ಮಾಡುವ 'ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ' (BWSSB) ತನ್ನ ಗ್ರಾಹಕರ ಕುಂದು ಕೊರತೆಗಳನ್ನು ಆಲಿಸಲು ಏಪ್ರಿಲ್ 10ರಂದು ಶುಕ್ರವಾರ ಸಾರ್ವಜನಿಕರೊಂದಿಗೆ ನೇರ-ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದೆ.
ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಗ್ಗೆ 09:30 ರಿಂದ 10:30 ಗಂಟೆವರೆಗೆ ಒಟ್ಟು ಒಂದು ಗಂಟೆ ಕಾಲ ನೇರ ಫೋನ್-ಇನ್ ಕಾರ್ಯಕ್ರಮ ಜರುಗಲಿದೆ. ನಿಮ್ಮ ಓಣಿ, ಬಡಾವಣೆಗಳು ಅಥವಾ ನಿಮ್ಮ ಮನೆಯ ನೀರಿನ ಸಂಪರ್ಕ, ಹೊಸ ಸಂಪರ್ಕ, ನೀರಿನ ಬಾಕಿ ಬಿಲ್ ಪಾವತಿ, ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಜಲಮಂಡಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ನೀವು ನೇರವಾಗಿ ಅಧ್ಯಕ್ಷರಿಗೆ ತಿಳಿಸಬಹುದು. ತ್ವರಿತವಾಗಿ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಲು ಈ ಕಾರ್ಯಕ್ರಮ ಹೆಚ್ಚು ಸಹಕಾರಿಯಾಗುತ್ತದೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು
ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ಇಲ್ಲಿವೆ. ದೂರವಾಣಿ 080-22945119 ಮತ್ತು 080-22229639ಗೆ ಸಂಪರ್ಕಿಸಿ ನಿಮ್ಮ ಸಮಸ್ಯೆ ಹೇಳಿಕೊಳ್ಳಬಹುದು. ದೂರು ನೀಡುವವರಿದ್ದರೆ ನೀರಿನ ಸಂಪರ್ಕ ಹೊಂದಿರುವ ತಮ್ಮ ಸಂಪರ್ಕದ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡುವಂತೆ ತಿಳಿಸಲಾಗಿದೆ. ಸಾರ್ವಜನಿಕರು ಸದರಿ ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳುವಂತೆ ಬೆಂಗಳೂರು ಜಲಮಂಡಳಿಯು ಪ್ರಕಟಣೆಯಲ್ಲಿ ಕೋರಿದೆ.
"ವಿಶ್ವ ಜಲ ದಿನ': ನೀರಿನ ಬಳಕೆ ಮೇಲಿರಲಿ ಇತಿ-ಮಿತಿ
ನೀರು ಅಮೂಲ್ಯ. ಪ್ರತಿಯೊಬ್ಬರಿಗೂ ಗುಣಮಟ್ಟ, ಶುದ್ಧ ಕುಡಿಯುವ ನೀರು ನೀಡುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ ಸಾಧ್ಯವಾದಷ್ಟು ಇತಿ ಮಿತಿಯಲ್ಲಿ ನೀರಿನ ಬಳಕೆ ಮಾಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ಅಧ್ಯಕ್ಷರಾದ ಡಾ.ವಿ.ರಾಮ್ಪ್ರಸಾತ್ ಮನೋಹರ್ ಹೇಳಿದರು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯಲ್ಲಿ ಆಯೋಜಿಸಿದ್ದ "ವಿಶ್ವ ಜಲ ದಿನ" ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಮಾತು ಒಳಚರಂಡಿ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಗುಣಮಟ್ಟ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಆದರೂ, ಜನರು ನೀರನ್ನು ಪೋಲು ಮಾಡಬಾರದು. ಇತಿ ಮಿತಿಯಲ್ಲಿ ಬಳಕೆ ಮಾಡಬೇಕು. ನೀರು ಇದೆ ಎಂಬ ಕಾರಣಕ್ಕೆ ದುರ್ಬಳಕೆ ಮೂಡುವುದು ತಪ್ಪು. ಇದಕ್ಕೆ ದಂಡ ಕೂಡ ವಿಧಿಸುದ್ದೇವೆ ಎಂದು ಅವರು ಎಚ್ಚರಿಸಿದ್ದಾರೆ.
ನೀರನ್ನು ನಾವು ಗಂಗೆ ಎಂದು ಮಾತೃ ಸ್ಥಾನದಲ್ಲಿಟ್ಟು ಪೂಜಿಸುತ್ತೇವೆ. ನಾವು ನದಿಯನ್ನು ಮಾಲಿನ್ಯ ಮಾಡುವುದನ್ನು ನಿಲ್ಲಿಸಬೇಕು. ಏಕೆಂದರೆ, ಮಾಲಿನ್ಯ ಮಾಡುವುದು ಸುಲಭ. ಆದರೆ, ಅದನ್ನು ಸಂಸ್ಕೃರಿಸಿ ಇತರೆ ಕಾರ್ಯಕ್ಕೆ ಬಳಕೆ ಮಾಡುವದು ಕಷ್ಟದ ಕೆಲಸ. ಹೀಗಾಗಿ ಎಲ್ಲರೂ ನೀರಿನ ಮಹತ್ವ ಅರಿತು ಬಳಕೆ ಮಾಡಿ ಎಂದು ವಿನಂತಿಸಿಕೊಂಡರು.
-
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ













Click it and Unblock the Notifications