ಕನಕಪುರ ರಸ್ತೆ: ಜಲಮಂಡಳಿಯ ತೆರೆದ ಪೈಪ್ಲೈನ್ ಚೇಂಬರ್ಗೆ ಬಿದ್ದು ವಿದ್ಯಾರ್ಥಿ ಸಾವು
ಬೆಂಗಳೂರು: ನಗರದ ಕನಕಪುರ ರಸ್ತೆಯಲ್ಲಿ ಜಲಮಂಡಳಿಯ ನಿರ್ಲಕ್ಷ್ಯದ ಪರಿಣಾಮವಾಗಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಪೈಪ್ಲೈನ್ ಕಾಮಗಾರಿಗೆ ಸಂಬಂಧಿಸಿದಂತೆ ತೆರೆದು ಬಿಟ್ಟಿದ್ದ ಕಾಂಕ್ರೀಟ್ ಚೇಂಬರ್ಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಮೃತ ಬಾಲಕನನ್ನು ಪ್ರೀತಮ್ ಎಂದು ಗುರುತಿಸಲಾಗಿದ್ದು, ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ. ಮಗ ಮನೆಗೆ ಮರಳದ ಕಾರಣ ಕುಟುಂಬಸ್ಥರು ಹಾಗೂ ಸ್ಥಳೀಯರು ಆತಂಕದಿಂದ ಹುಡುಕಾಟ ನಡೆಸುತ್ತಿದ್ದರು. ಇದೇ ವೇಳೆ ಪೈಪ್ಲೈನ್ ಕಾಮಗಾರಿಯ ಸ್ಥಳದ ಬಳಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪರಿಶೀಲನೆ ನಡೆಸಿದಾಗ, ಚೇಂಬರ್ ಒಳಗೆ ಪ್ರೀತಮ್ನ ಶವ ತೇಲುತ್ತಿರುವುದು ಪತ್ತೆಯಾಗಿದೆ. ಈ ದೃಶ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಚೇಂಬರ್ಗೆ ಮುಚ್ಚಳ ಹಾಕಿರಲಿಲ್ಲ
ಜಲಮಂಡಳಿಯ ಪೈಪ್ಲೈನ್ ಕಾಮಗಾರಿ ಹಲವು ದಿನಗಳಿಂದ ವಿಳಂಬವಾಗಿದ್ದು, ಕಾಮಗಾರಿಯ ಭಾಗವಾಗಿ ನಿರ್ಮಿಸಲಾದ ಚೇಂಬರ್ಗೆ ಮುಚ್ಚಳವೇ ಹಾಕಲಾಗಿರಲಿಲ್ಲ. ಅಲ್ಲದೆ ಯಾವುದೇ ಎಚ್ಚರಿಕಾ ಫಲಕಗಳು, ತಡೆಗೋಡೆಗಳು ಅಥವಾ ಸುರಕ್ಷತಾ ಕ್ರಮಗಳಿಲ್ಲದಿರುವುದರಿಂದ ಈ ಪ್ರದೇಶ ಸಾರ್ವಜನಿಕರಿಗೆ ಅಪಾಯದ ತಾಣವಾಗಿ ಪರಿಣಮಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
ಪ್ರೀತಮ್ ಈ ಮಾರ್ಗದಲ್ಲಿ ಹೋಗುವ ವೇಳೆ ಅನಿರೀಕ್ಷಿತವಾಗಿ ಕಾಲು ಜಾರಿ ಚೇಂಬರ್ ಒಳಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ಅಥವಾ ಕಡಿಮೆ ಬೆಳಕಿನ ಸಮಯದಲ್ಲಿ ಈ ಚೇಂಬರ್ ಕಾಣಿಸದಿರುವುದೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ದುರಂತದ ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ಮೃತ ಬಾಲಕನ ಕುಟುಂಬಸ್ಥರು ಜಲಮಂಡಳಿ ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯವೇ ನಮ್ಮ ಮಗನ ಸಾವಿಗೆ ಕಾರಣ" ಎಂದು ಕುಟುಂಬಸ್ಥರು ಹಿಡಿಶಾಪ ಹಾಕಿದ್ದಾರೆ. ಅಲ್ಲದೆ ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ನಿವಾಸಿಗಳು, ಜಲಮಂಡಳಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ತಕ್ಷಣ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸುರಕ್ಷಿತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ. ಕಾಮಗಾರಿಗೆ ಹೊಣೆಗಾರರಾಗಿದ್ದ ಗುತ್ತಿಗೆದಾರರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಪಾತ್ರದ ಬಗ್ಗೆ ಪರಿಶೀಲನೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಕಾಮಗಾರಿ ನಿರ್ಲಕ್ಷ್ಯ ಸಾಬೀತಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಘಟನೆಯಿಂದಾಗಿ ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಸುರಕ್ಷತೆ ಕುರಿತಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಮಕ್ಕಳು ಹಾಗೂ ಸಾರ್ವಜನಿಕರ ಜೀವ ರಕ್ಷಿಸಲು ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳು ಅಗತ್ಯ ಎಂಬ ಬೇಡಿಕೆಯನ್ನು ಮುನ್ನೆಲೆಗೆ ತಂದಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications