ಬೆಂಗಳೂರಿಗರೇ ಗಮನಿಸಿ.. ಮೇ 14ರಂದು ಈ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತ
ಬೆಂಗಳೂರು ಮೇ 13: ನಾಳೆ ಬೆಂಗಳೂರಿನಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ. ನಗರದ ಹಲವು ಪ್ರದೇಶಗಳಲ್ಲಿ ಶನಿವಾರ (ಮೇ 14ರಂದು) ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸುಮಾರು ಮೂರು ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಶ್ರೀಗಂಧ ಕಾವಲ್ ಪಂಪ್ಹೌಸ್ನಲ್ಲಿರುವ 375 ಎಚ್ಪಿ ಪಂಪ್ ದುರಸ್ತಿ ಕಾರ್ಯಾಚರಣೆ ನಡೆಯುವ ಹಿನ್ನೆಲೆಯಲ್ಲಿ ಮೂರು ಗಂಟೆ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ?:
ಬೋವಿ ಕಾಲನಿ, ಇಂದಿರನಾಗರ ಸ್ಲಂ, ಕಾವೇರಿ ನಗರ, ಕರ್ನಾಟಕ ಲೇಔಟ್, ಶಿವನಹಳ್ಳಿ, ಮಹಾಗಣಪತಿ ನಗರ, ಮಂಜುನಾಥನಗರ, ಜಡ್ಜಸ್ ಕಾಲನಿ, ಗೃಹಲಕ್ಷ್ಮೀ ಲೇಔಟ್, ಎಸ್ಬಿಐ ಸ್ಟಾಫ್ ಕಾಲನಿ, ಸಂಜಯಗಾಂಧಿನಗರ, ಶಕ್ತಿ ಗಣಪತಿ ನಗರ, ಬಿಇಎಂಎಲ್ ಲೇಔಟ್, ಕಮಲನಗರ ಸ್ಲಂ, ಕಿರ್ಲೋಸ್ಕರ್ ಲೇಔಟ್, ಕರೆಕಲ್ಲು ಸೇರಿದಂತೆ ಹಲವೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಡಬ್ಲ್ಯುಎಸ್ಎಸ್ಬಿ ತಿಳಿಸಿದೆ.

ಅಸನಿ ಚಂಡಮಾರುತದ ಪರಿಣಾಮ ಕಳೆದ ಮೂರು ನಾಲ್ಕು ದಿನದಿಂದ ಬೆಂಗಳೂರಿನಲ್ಲಿ ಮೋಡ ಕವಿತ ವಾತಾವರಣ, ಮಳೆ ಜೊತೆಗೆ ಅಧಿಕ ಚಳಿ ದಾಖಲಾಗಿದೆ. ಇದರ ನಡುವೆ ಇನ್ನೂ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಣ್ಣು ಸವೆದು ನೀರು ಹರಿದು ಹಲವೆಡೆ ನೀರು ಸರಬರಾಜು ಸಾಧ್ಯವಾಗುತ್ತಿಲ್ಲ. ಜೊತೆಗೆ ಅಲ್ಲಿ ಪೈಪ್ಗಳು ಒಡೆದು ಹೋಗಿರುವ ಹಾಳಾಗಿರುವ ದೂರುಗಳಿವೆ. ಇದರಿಂದಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇದರ ದುರಸ್ಥಿ ಕಾರ್ಯಕ್ಕೆ ಮುಂದಾಗಿದೆ.

ಮಾತ್ರವಲ್ಲದೇ ಈ ಬೇಸಿಗೆಯಲ್ಲಿ ಬೆಂಗಳೂರಿನ ಅಕಾಲಿಕ ಮಳೆಯು ತೀವ್ರವಾದ ಮಿಂಚು, ಜೋರಾದ ಗುಡುಗು, ವೇಗದ ಗಾಳಿ ಮತ್ತು ಕೆಲವೊಮ್ಮೆ ಆಲಿಕಲ್ಲು ಮಳೆಯನ್ನು ತಂದಿದೆ. ಇಬ್ಬರು ನಿವಾಸಿಗಳನ್ನು ಕೊಲ್ಲುವ ಮೂಲಕ ಮಾರಣಾಂತಿಕವಾಗಿ ಮಾರ್ಪಟ್ಟಿದೆ ಮತ್ತು ಸಾವಿರಾರು ಮನೆಗಳಿಗೆ ಹಾನಿಯಾಗಿದೆ ಮತ್ತು ಹಲವಾರು ವ್ಯಾಪಾರಗಳಿಗೆ ನಷ್ಟ ಉಂಟಾಗಿದೆ. ಭಾನುವಾರ ಸುರಿದ ಭಾರಿ ಮಳೆಗೆ ಎಚ್ಎಸ್ಆರ್ ಲೇಔಟ್ನಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಮೇಲಾವರಣದ ಒಂದು ಭಾಗ ಕುಸಿದು ಬಿದ್ದಿರುವುದು ಭತಗ್ಗು ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications