BWSSB: 110 ಹಳ್ಳಿಗಳಿಗೆ ಸಿಹಿಸುದ್ದಿ ಕೊಟ್ಟ ಬೆಂಗಳೂರು ಜಲಮಂಡಳಿ
ಬೆಂಗಳೂರು, ಮೇ 15: ಬೆಂಗಳೂರಿಗೆ ಭವಿಷ್ಯದ ಆಸರೆಯಾಗಿರುವ ಕಾವೇರಿ 5 ನೇ ಹಂತದ ಕಾಮಗಾರಿ ಸಂಪೂರ್ಣಗೊಳ್ಳಲುವ ಕಾಲ ಸನ್ನಿಹಿತವಾಗಿದೆ. ಈ ಯೋಜನೆಯಿಂದ ಬೆಂಗಳೂರಿಗೆ ನೀರು ತರಲಿರುವ ಜಲಮಂಡಳಿಯು ನಗರ ವ್ಯಾಪ್ತಿಯ 110 ಗ್ರಾಮಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.
ಕಾವೇರಿ-5ನೇ ಹಂತದ ಕಾಮಗಾರಿಯನ್ನು ಹಾರೋಹಳ್ಳಿ ಬಳಿ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪರಿಶೀಲನೆ ನಡೆಸಿ ಬಳಿಕ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.

ಬೆಂಗಳೂರು ಜಲಂಡಳಿಯು ಅಧಿಕಾರಿಗಳು ತನ್ನ ವ್ಯಾಪ್ತಿಯ 110 ಗ್ರಾಮಗಳಲ್ಲಿ ಕಾವೇರಿ ನೀರು ಪೂರೈಕೆ ಮಾಡುವ ಸಲುವಾಗಿ ಅಷ್ಟು ಗ್ರಾಮಗಳ ಜನರ ಮನೆಬಾಗಿಲಿಗೆ ತೆರಳಲಿದ್ದಾರೆ. ಅಧಿಕಾರಿಗಳು ಎಲ್ಲ ಗ್ರಾಮದ ಜನರು ಕಾವೇರಿ ನೀರು ಪಡೆಯುವಂತೆ ಪ್ರೋತ್ಸಾಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಇನ್ನೇನು ಕಾಮಗಾರಿ ಪೂರ್ಣವಾಗಿ ನೀರು ಪೂರೈಕೆ ಆರಂಭ
ಈಗಾಗಲೇ ನಡೆಯುತ್ತಿದ್ದ ಕಾವೇರಿ 5 ನೇ ಹಂತದ ಅಂತಿಮ ಹಂತದ ಕಾಮಗಾರಿಗಳು ಅಂತಿಮ ಹಂತಕ್ಕೆ ಬಂದಿವೆ. ಇನ್ನು ಕೆಲವೇ ವಾರಗಳಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ನೀರು ಸರಬರಾಜು ಆರಂಭವಾಗಲಿದೆ. ಇದಕ್ಕೂ ಮೊದಲು ನೀರಿನ ಸೂಕ್ತ ಪೂರೈಕೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಹೊಸ ಕಾವೇರಿ ಸಂಪರ್ಕಗಳನ್ನು ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ನಡೆಸಬೇಕಾಗಿದೆ ಎಂದು ಹೇಳಿದರು.
ಬೆಂಗಳೂರಿಗೆ ಹೆಚ್ಚುವರಿ ಕಾವೇರಿ ನೀರು ಲಭ್ಯ
ಈ 5 ನೇ ಹಂತದ ಯೋಜನೆಯಿಂದ ಬೆಂಗಳೂರು ನಗರಕ್ಕೆ 750 ಎಂಎಲ್ಡಿ ಯಷ್ಟು ಹೆಚ್ಚಿನ ನೀರು ಲಭ್ಯವಾಗಲಿದೆ. ಇದನ್ನ ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು 110 ಗ್ರಾಮಗಳಲ್ಲಿ ಎಲ್ಲರೂ ಕಾವೇರಿ ನೀರಿನ ಸಂಪರ್ಕ ಪಡೆಯಲು ಪ್ರೋತ್ಸಾಹಿಸಬೇಕು ಎಂದರು.

ಅನಧಿಕೃತ ಕಾವೇರಿ ನೀರಿನ ಸಂಪರ್ಕ ಪತ್ತೆಗೆ ಸೂಚನೆ
ಜಲಮಂಡಳಿಯಿಂದ ನೀರು ಪಡೆಯುವ ಉದ್ದೇಶಕ್ಕಾಗಿ 110 ಗ್ರಾಮಗಳಲ್ಲಿ ಕೆಲವೆಡೆ ಅನಧಿಕೃತವಾಗಿ ನೀರಿನ ಸಂಪರ್ಕ ಹೊಂದಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಇವುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಇವುಗಳನ್ನ ಸಕ್ರಮಗೊಳಿಸಿ ಜಲಮಂಡಳಿಗೆ ಆದಾಯ ಬರುವಂತೆ ಕ್ರಮ ಕೈಗೊಳ್ಳಿ ಎಂದು ಅಧ್ಯಕ್ಷರು ನಿರ್ದೇಶಿಸಿದರು.
ಇನ್ನೂ ಐದನೇ ಹಂತದ ಕಾವೇರಿ ನೀರು ಪಡೆಯಲು ಹೊಸ ಸಂಪರ್ಕ ಪಡೆಯುವವರು ಜಲಮಂಡಳಿಯಲ್ಲಿ ನೊಂದಾಯಿಸಿಕೊಳ್ಳಬೇಕು. ಇದರಿಂದ ನೀರಿನ ಸದ್ಬಳಕೆ ಆಗುತ್ತದೆ. ಇದರೊಂದಿಗೆ ಜಲಮಂಡಳಿಗೆ ಅಗತ್ಯವಾದ ಆದಾಯ ದೊರೆಯಲಿದೆ. ಅದು ಸಾಲದ ಮರುಪಾವತಿಗೆ ನೆರವಾಗುತ್ತದೆ.
ಆದ್ದರಿಂದ ಅಧಿಕಾರಿಗಳು ಜನರ ಮನೆಬಾಗಿಲಿಗೆ ತೆರಳಿ ನೀರಿನ ಸಂಪರ್ಕ ತಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು. ಹೆಚ್ಚಿನ ಜನರು ಕಾವೇರಿ ನೀರಿನ ಸಂಪರ್ಕ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications