ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಜಲಮಂಡಳಿ ಗುಡ್ ನ್ಯೂಸ್
ಬೆಂಗಳೂರು, ಮೇ 28: ಬೆಂಗಳೂರಿನಲ್ಲಿ ಜಲಮಂಡಳಿಯು ಕುಡಿಯುವ ನೀರು ಒದಗಿಸುವ ಉದ್ದೇಶದಿಂದ 'ಸಂಚಾರಿ ಕಾವೇರಿ' ಆರಂಭಿಸಿದೆ. ನಗರದೊಳಗಿನ ಹಾಗೂ ಹೊರ ವಲಯದ ಅಪಾರ್ಟ್ಮೆಂಟ್ಗಳು ಹೆಚ್ಚು ಅಂತರ್ಜಲ ಅವಲಂಬಿಸಿವೆ. ಬೋರವೆಲ್ ನೀರನ್ನು ಆಧರಿಸಿವೆ. ಇದರಿಂದ ಅಂತರ್ಜಲ ಕುಸಿಯುವ ಸಾಧ್ಯತೆ ಇರುವ ಕಾರಣ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹೊಸ ಪ್ಲಾನ್ ಮಾಡಿಕೊಂಡಿದೆ.
ನಗರದ ಅಂತರ್ಜಲದ ಮೇಲೆ ಒತ್ತಡ ಕಡಿಮೆ ಮಾಡಲು ಜಲಮಂಡಳಿಯು ದೊಡ್ಡ ದೊಡ್ಡ ಅಪಾರ್ಟ್ಮೆಂಟ್ಗಳಿಗೆ 'ಸಂಚಾರಿ ಕಾವೇರಿ' ಮೂಲಕ ನೀರಿಗಾಗಿ ಬಲ್ಕ್ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ. ಇದರಿಂದ ನೀವು ಅಂತರ್ಜಲದ ಬದಲಾಗಿ ಜಲಮಂಡಳಿ ಪೂರೈಸುವ ಪ್ರಮಾಣೀಕೃತ ನೀರನ್ನು ಸುದೀರ್ಘ ಅವಧಿಗೆ ಬಳಸಬಹುದಾಗಿದೆ.

ಅಂತರ್ಜಲದ ಅತಿಯಾದ ಅವಲಂಬನೆ ಕಡಿಮೆಗೊಳಿಸಿ ನಗರದಲ್ಲಿ ಜಲ ಸಮತೋಲನ ಕಾಪಾಡುವ ನಿಟ್ಟಿನಲ್ಲಿ BWSSB ನಿರಂತರ ಹೊಸ ಹೊಸ ಉಪಕ್ರಮ ಕೈಗೊಳ್ಳುತ್ತಲೇ ಇರುತ್ತದೆ. ಅದರ ಮುಂದುವರಿದ ಭಾಗವಾಗಿ "ಸಂಚಾರಿ ಕಾವೇರಿ" ಜಾರಿ ಮಾಡಿದ್ದು, ಈ ಯೋಜನೆಯಡಿ ಅಪಾರ್ಟ್ಮೆಂಟ್ಗಳಿಗೆ ಬಲ್ಕ್ ಬುಕ್ಕಿಂಗ್ ವ್ಯವಸ್ಥೆ ಆರಂಭಿಸಲು ಮುಂದಾಗಿದೆ ಎಂದು ಎಂದು ಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಮಂಗಳವಾರ ತಿಳಿಸಿದರು.
ಬೆಂಗಳೂರು ಹೊರ ವಲಯದಲ್ಲಿರುವ ಬಹುತೇಕ ಅಪಾರ್ಟ್ಮೆಂಟ್ಗಳು ಬೋರವೆಲ್ ನೀರು ಬಳಸುತ್ತವೆ. ಅದು ಸಾಕಾಗದಿದ್ದಾಗ ಅಪಾರ್ಟ್ಮೆಂಟ್ ಜನರು ತಮ್ಮ ಕುಡಿಯುವ ನೀರಿನ ಅವಶ್ಯಕತೆಯನ್ನು ಪೂರೈಸಿಕೊಳ್ಳಲು ಟ್ಯಾಂಕರ್ ನೀರಿನ ಖರೀದಿಗೆ ಮುಂದಾಗುತ್ತಾರೆ. ವಿಪರ್ಯಾಸವೆಂದರೆ ಟ್ಯಾಂಕರ್ ನೀರು ಪೂರೈಕೆಯು ಸಹ ಕೊಳವೆ ಬಾವಿಗಳಿಂದ ಸಂಗ್ರಹಿಸುವಂತಹ ನೀರನ್ನೇ ಅವಲಂಬಿಸಿವೆ. ಅದರಿಂದಲೂ ಅಂತರ್ಜಲ ಕುಸಿಯುತ್ತದೆ.
ಅಂತರ್ಜಲದ ಮೇಲಿನ ಅವಲಂಬನೆ ನಿರಂತರವಾಗಿ ಮುಂದುವರಿದರೆ ಒತ್ತಡ ಹೆಚ್ಚಾಗುತ್ತಿದೆ. ಇದನ್ನು ಕಡಿಮೆ ಮಾಡುವ ಹಾಗೂ ಬಿಐಎಸ್ BIS ಪ್ರಮಾಣೀಕೃತ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ BWSSB ಈ ಹೊಸ ನಿರ್ಧಾರ ಕೈಗೊಂಡಿದೆ. ಅಪಾರ್ಟ್ಮೆಂಟ್ಗಳು ತಮ್ಮ ವರ್ಷಾವಧಿಯ ನೀರಿನ ಅಗತ್ಯಕ್ಕಾಗಿ BWSSB ಯ BIS ಪ್ರಮಾಣಿತ ಕುಡಿಯುವ ನೀರನ್ನು ಟ್ಯಾಂಕರ್ಗಳ ಮೂಲಕ ಬುಕ್ಕಿಂಗ್ ಮಾಡಿಕೊಳ್ಳುವ ಅವಕಾಶ ನೀಡುತ್ತಿದೆ. ಇದರ ಸದುಪಯೋಗ ಮಾಡಿಕೊಳ್ಳುವಂತೆ ಜಲಮಂಡಳಿ ಕೋರಿದೆ.
ಬುಕ್ಕಿಂಗ್ ಹೇಗಿರುತ್ತದೆ?
* ಮೊದಲು ಬಂದವರಿಗೆ ಮೊದಲು ಅವಕಾಶ (First Come, First Serve) ಆಧಾರಿತ ಬುಕ್ಕಿಂಗ್
* ಕನಿಷ್ಠ ಒಂದು ತಿಂಗಳ ಮುಂಗಡ ಪಾವತಿ ಅವಶ್ಯಕ
* ಬಲ್ಕ್ ಬುಕ್ಕಿಂಗ್ ಮೂಲಕ ನಿರಂತರ ಸರಬರಾಜು ಖಚಿತಪಡಿಸಿಕೊಳ್ಳುವ ವ್ಯವಸ್ಥೆ
* ಒಂದು ವರ್ಷ ಅವಧಿಗೆ ಬುಕ್ಕಿಂಗ್ ಮಾಡುವ ವ್ಯವಸ್ಥೆ ಲಭ್ಯ
ಸಂಚಾರಿ ಕಾವೇರಿ ಯೋಜನೆಯು ಭಾರತದ ಮೊದಲ ತಾಂತ್ರಿಕ ವ್ಯವಸ್ಥೆಯ ಟ್ಯಾಂಕರ್ ಯೋಜನೆಯಾಗಿದೆ. GPS ನಿಯಂತ್ರಣ, ಪೂರೈಕೆ ಶ್ರೇಣೀಕರಣ ಮತ್ತು ಪೂರೈಕೆ ನಿಯಂತ್ರಣ ಕೇಂದ್ರಗಳ ಮೂಲಕ ನಗರವನ್ನು ಅವಶ್ಯಕ ನೀರಿನಿಂದ ಲಭ್ಯವಾಗುವಂತೆ ಮಾಡಲಾಗುತ್ತಿದೆ.
BWSSB ಜನಪರ ಜಲಮಂಡಳಿಯಾಗಿ ಬದಲಾಗುತ್ತಿದೆ. ನಮ್ಮ ಗುರಿ ಬೆಂಗಳೂರಿನ ಮುಂದಿನ ಪೀಳಿಗೆಗೆ ಭದ್ರ ನೀರಿನ ಭವಿಷ್ಯವನ್ನು ಕಟ್ಟಿಕೊಡುವುದಾಗಿದೆ. ಈ ನಿಟ್ಟಿನಲ್ಲಿ ಅಂತರ್ಜಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಅಪಾರ್ಟ್ಮೆಂಟ್ಗಳಿಗೂ ವಿಸ್ತರಿಸಲಾಗಿದೆ. ಈ ಯೋಜನೆಯ ಸದ್ಬಳಕೆಯನ್ನು ಮಾಡಿಕೊಳ್ಳುವ ಮೂಲಕ ಬಿಐಎಸ್ ಪ್ರಮಾಣಿಕೃತ ನೀರಿನ್ನು ಪಡೆದುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಮಾಹಿತಿ ನೀಡಬೇಕು ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications