ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೆಲುವು-ಸೋಲಿನಲ್ಲಿ ಎರಡೂ ಪಕ್ಷಕ್ಕೆ ಸಮಪಾಲು: ದಿನೇಶ್ ಗುಂಡೂರಾವ್‌

|
Google Oneindia Kannada News

ಬೆಂಗಳೂರು, ನವೆಂಬರ್ 06: ಉಪಚುನಾವಣೆಯ ಫಲಿತಾಂಶ ಹೇಗೇ ಬರಲಿ ಕಾಂಗ್ರೆಸ್-ಜೆಡಿಎಸ್‌ ಎರಡೂ ಪಕ್ಷಕ್ಕೆ ಸಮನಾಗಿ ಹಂಚಿಕೆ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷಗಳು ಸಮಾನವಾಗಿ ಚುನಾವಣೆಯಲ್ಲಿ ತೊಡಗಿಕೊಂಡಿವೆ. ಎರಡೂ ಪಕ್ಷಗಳು ಸಮಾನ ಶ್ರಮವನ್ನು ಚುನಾವಣೆಗಾಗಿ ಹಾಕಿವೆ ಹಾಗಾಗಿ ಫಲಿತಾಂಶದ ಶ್ರೇಯ ಸಹ ಎರಡೂ ಪಕ್ಷಗಳಿಗೆ ಸಮಾನವಾಗಿ ಹಂಚಿಕೆ ಆಗುತ್ತದೆ ಎಂದು ಅವರು ಹೇಳಿದರು.

ಉಪಚುನಾವಣೆ ಫಲಿತಾಂಶ LIVE: ಬಳ್ಳಾರಿಯಲ್ಲಿ ಕಾಂಗ್ರೆಸ್ ಮುನ್ನಡೆಉಪಚುನಾವಣೆ ಫಲಿತಾಂಶ LIVE: ಬಳ್ಳಾರಿಯಲ್ಲಿ ಕಾಂಗ್ರೆಸ್ ಮುನ್ನಡೆ

ಬಿಜೆಪಿಗೆ ಚುನಾವಣೆಗೆ ಬೇರೆ ಯಾವುದೇ ಅಜೆಂಡಾ ಇರಲಿಲ್ಲ ಹಾಗಾಗಿ, ಕೇವಲ ಹಿಂದುತ್ವದ ಅಜೆಂಡಾ ಇಟ್ಟುಕೊಂಡು ಚುನಾವಣೆಗೆ ಹೋಗಿತ್ತು. ಕೋಮುವಾದಿಗಳಿಗೆ ಸೂಲು ಖಂಡಿತ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

By election 2018: election result credit must go both parties: Dinesh Gundu Rao

ಮಂಡ್ಯ ಲೋಕಸಭೆ ಉಪಚುನಾವಣೆ ಫಲಿತಾಂಶ: LIVE: ದೀಪಾವಳಿ ಹೋಳಿಗೆ ಯಾರ ಬಾಯಿಗೆಮಂಡ್ಯ ಲೋಕಸಭೆ ಉಪಚುನಾವಣೆ ಫಲಿತಾಂಶ: LIVE: ದೀಪಾವಳಿ ಹೋಳಿಗೆ ಯಾರ ಬಾಯಿಗೆ

ಉಪಚುನಾವಣೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿಗೆ ಗೆಲುವಾಗಲಿದೆ, ಲೋಕಸಭೆ ಚುನಾವಣೆಗೆ ಕರ್ನಾಟಕದಿಂದಲೇ ಬಿಜೆಪಿಯ ಪಥನ ಆರಂಭವಾಗುತ್ತದೆ ಎಂದು ಅವರು ಹೇಳಿದರು.

'ಬಿ.ಎಸ್.ಯಡಿಯೂರಪ್ಪ ಅವರಿಗೆ ಪುತ್ರ ಸೋಲುತ್ತಾನೆ ಎನ್ನುವ ಭಯ''ಬಿ.ಎಸ್.ಯಡಿಯೂರಪ್ಪ ಅವರಿಗೆ ಪುತ್ರ ಸೋಲುತ್ತಾನೆ ಎನ್ನುವ ಭಯ'

ಟಿಪ್ಪು ಜಯಂತಿ ಬಗ್ಗೆ ಸಹ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು, ಆದರೆ ಪ್ರತಿಭಟನೆ ಹಿಂಸಾತ್ಮಕವಾಗಿ ಇರಬಾರದು ಎಂದು ದಿನೇಶ್ ಗುಂಡೂರಾವ್ ಹೇಳಿದರು.

English summary
Both Congress and JDS party worked hard in this by election, what ever the result is the credit must go to both the parties says KPCC president Dinesh Gundu Rao
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X