Get Updates
Get notified of breaking news, exclusive insights, and must-see stories!

ಬಿ. ವೈ. ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್: ಸಿದ್ದರಾಮಯ್ಯ ಲೇವಡಿ

Recommended Video

      ಬಿ ಎಸ್ ವೈ ಮಗ ಬಿ ವೈ ರಾಘವೇಂದ್ರರನ್ನ ಡಮ್ಮಿ ಕ್ಯಾಂಡಿಡೇಟ್ ಎಂದ ಸಿದ್ದರಾಮಯ್ಯ | Oneindia Kannada

      ಬೆಂಗಳೂರು, ಅಕ್ಟೋಬರ್ 26: ಉಪ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಟುವಟಿಕೆ ಜೋರಾಗಿದೆ. ಚುನಾವಣಾ ಪ್ರಚಾರಕ್ಕಾಗಿ ನಿರಂತರವಾಗಿ ಓಡಾಡುತ್ತಿರುವ ಅವರು, ಬಿಜೆಪಿ ವಿರುದ್ಧ ನಿತ್ಯವೂ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

      ಪ್ರಚಾರದ ಸಂದರ್ಭದ ಭಾಷಣಗಳ ನಡುವೆ ಟ್ವಿಟ್ಟರ್‌ನಲ್ಲಿಯೂ ಸಿದ್ದರಾಮಯ್ಯ ಕಾರ್ಯಪ್ರವೃತ್ತರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ಅವರು ಟ್ವಿಟ್ಟರ್‌ಅನ್ನು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಲು ಹೆಚ್ಚು ಬಳಸಿಕೊಂಡಿದ್ದರು.

      ಈಗ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕೈ ಜೋಡಿಸಿರುವುದರಿಂದ ಸಿದ್ದರಾಮಯ್ಯ ಅವರ ಗಮನ ಬಿಜೆಪಿ ವಿರುದ್ಧ ಕೇಂದ್ರೀಕರಿಸಿದೆ. ನರೇಂದ್ರ ಮೋದಿ, ಅಮಿತ್ ಶಾ, ಯಡಿಯೂರಪ್ಪ, ಈಶ್ವರಪ್ಪ, ಶ್ರೀರಾಮುಲು ಸೇರಿದಂತೆ ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ಮತ್ತು ಸ್ಥಳೀಯ ಮುಖಂಡರ ಮೇಲೆ ಟೀಕಾಪ್ರಹಾರ ನಡೆಸಲು ಅವರು ಟ್ವಿಟ್ಟರ್‌ಅನ್ನು ವ್ಯಾಪಕವಾಗಿ ಬಳಸಿಕೊಳ್ಳುತ್ತಿದ್ದಾರೆ.

      ವಿರೋಧ ಪಕ್ಷವಾದ ಬಿಜೆಪಿ ವಿರುದ್ಧ ಅವರು ಶುಕ್ರವಾರ ಟ್ವಿಟ್ಟರ್‌ನಲ್ಲಿ ಹರಿಹಾಯ್ದಿದ್ದು, ಅವರ ಕೆಲವು ಟ್ವೀಟ್‌ಗಳು ಹೀಗಿವೆ..

      ಯಡಿಯೂರಪ್ಪ-ಈಶ್ವರಪ್ಪ ಒಂದಾಗಲಿಲ್ಲವೇ?

      ಸಮ್ಮಿಶ್ರ ಸರ್ಕಾರವನ್ನು ಅಪವಿತ್ರ ಮೈತ್ರಿ ಎನ್ನುವ ಯಡಿಯೂರಪ್ಪನವರು ಈ ಹಿಂದೆ ಜೆಡಿಎಸ್ ಜೊತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿರಲಿಲ್ಲವೇ? ಯಡಿಯೂರಪ್ಪನವರು ಕೆಜೆಪಿ ಸ್ಥಾಪನೆ ಮಾಡಿ ನಮ್ಮಪ್ಪನಾಣೆ ಬಿಜೆಪಿ ಸೇರಲ್ಲ ಎಂದಿದ್ದರು, ಯಡಿಯೂರಪ್ಪ ಪಕ್ಷ ತೊರೆದಾಗ ಪಕ್ಷದಿಂದ ಶನಿ ಹೋಯಿತು ಎಂದು ಈಶ್ವರಪ್ಪನವರು ಹೇಳಿರಲಿಲ್ಲವೇ? ಈಗವರು ಒಂದಾಗಿಲ್ಲವೇ?

      ಡಮ್ಮಿ ಕ್ಯಾಂಡಿಡೇಟ್

      ಮರು ಚುನಾವಣೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದೆ. ಶಿವಮೊಗ್ಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಜಿಲ್ಲೆಯಲ್ಲಿ ಮಧು ಬಂಗಾರಪ್ಪ ಪರವಾಗಿ ಕಂಡುಬರುತ್ತಿರುವ ಜನಸ್ಪಂದನೆಯನ್ನು ಗಮನಿಸಿದರೆ, ಯಡಿಯೂರಪ್ಪನವರ ಪುತ್ರ ಬಿ.ವೈ ರಾಘವೇಂದ್ರ ಅವರೇ ಮೇಲ್ನೋಟಕ್ಕೆ ಡಮ್ಮಿ ಕ್ಯಾಂಡಿಡೇಟ್ ಎಂದು ಅನಿಸುತ್ತಿದೆ.

      ನಾನೂ ಒಬ್ಬ ಹಿಂದು

      ಮೃದು ಅಥವಾ ಕಠೋರ ಹಿಂದು ಎಂಬುದು ಇಲ್ಲ. ನಾನೂ ಕೂಡ ಹಿಂದೂ. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಕರ್ನಾಟಕ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ದುರದೃಷ್ಟವಶಾತ್ ಸಂಭವಿಸಿದ ಸಾವುಗಳನ್ನು ರಾಜಕೀಯ ಲಾಭಕ್ಕಾಗಿ ಅವರು ಬಳಸಿಕೊಂಡರು. ಅದಕ್ಕಾಗಿ ಅವರಿಗೆ ನಾಚಿಕೆಯಾಗಬೇಕು.

      ಮೋದಿ ದುರಾಡಳಿತ

      ಸಿಬಿಐಗೆ ಸಂಬಂಧಿಸಿದ ಇತ್ತೀಚಿನ ಘಟನಾವಳಿಗಳು ನರೇಂದ್ರ ಮೋದಿ ಅವರ ದುರಾಡಳಿತಕ್ಕೆ ಇನ್ನೊಂದು ಉದಾಹರಣೆಯಷ್ಟೇ. ಪ್ರಜಾಪ್ರಭುತ್ವದ ಸ್ತಂಭಗಳನ್ನು ನಾಶಪಡಿಸುವುದಕ್ಕಾಗಿಯೇ ತಾವು ಇರುವುದು ಎಂದು ಬಿಜೆಪಿ ಭಾವಿಸಿದೆ. ಜನರು ವ್ಯವಸ್ಥೆಯ ಕುರಿತು ತಮ್ಮ ನಂಬಿಕೆ ಮತ್ತು ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+