ಬಿ. ವೈ. ರಾಘವೇಂದ್ರ ಡಮ್ಮಿ ಕ್ಯಾಂಡಿಡೇಟ್: ಸಿದ್ದರಾಮಯ್ಯ ಲೇವಡಿ
Recommended Video

ಬೆಂಗಳೂರು, ಅಕ್ಟೋಬರ್ 26: ಉಪ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಟುವಟಿಕೆ ಜೋರಾಗಿದೆ. ಚುನಾವಣಾ ಪ್ರಚಾರಕ್ಕಾಗಿ ನಿರಂತರವಾಗಿ ಓಡಾಡುತ್ತಿರುವ ಅವರು, ಬಿಜೆಪಿ ವಿರುದ್ಧ ನಿತ್ಯವೂ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ಪ್ರಚಾರದ ಸಂದರ್ಭದ ಭಾಷಣಗಳ ನಡುವೆ ಟ್ವಿಟ್ಟರ್ನಲ್ಲಿಯೂ ಸಿದ್ದರಾಮಯ್ಯ ಕಾರ್ಯಪ್ರವೃತ್ತರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ಅವರು ಟ್ವಿಟ್ಟರ್ಅನ್ನು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಲು ಹೆಚ್ಚು ಬಳಸಿಕೊಂಡಿದ್ದರು.
ಈಗ ಉಪ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕೈ ಜೋಡಿಸಿರುವುದರಿಂದ ಸಿದ್ದರಾಮಯ್ಯ ಅವರ ಗಮನ ಬಿಜೆಪಿ ವಿರುದ್ಧ ಕೇಂದ್ರೀಕರಿಸಿದೆ. ನರೇಂದ್ರ ಮೋದಿ, ಅಮಿತ್ ಶಾ, ಯಡಿಯೂರಪ್ಪ, ಈಶ್ವರಪ್ಪ, ಶ್ರೀರಾಮುಲು ಸೇರಿದಂತೆ ಪಕ್ಷದ ರಾಷ್ಟ್ರೀಯ, ರಾಜ್ಯ ನಾಯಕರು ಮತ್ತು ಸ್ಥಳೀಯ ಮುಖಂಡರ ಮೇಲೆ ಟೀಕಾಪ್ರಹಾರ ನಡೆಸಲು ಅವರು ಟ್ವಿಟ್ಟರ್ಅನ್ನು ವ್ಯಾಪಕವಾಗಿ ಬಳಸಿಕೊಳ್ಳುತ್ತಿದ್ದಾರೆ.
ವಿರೋಧ ಪಕ್ಷವಾದ ಬಿಜೆಪಿ ವಿರುದ್ಧ ಅವರು ಶುಕ್ರವಾರ ಟ್ವಿಟ್ಟರ್ನಲ್ಲಿ ಹರಿಹಾಯ್ದಿದ್ದು, ಅವರ ಕೆಲವು ಟ್ವೀಟ್ಗಳು ಹೀಗಿವೆ..
|
ಯಡಿಯೂರಪ್ಪ-ಈಶ್ವರಪ್ಪ ಒಂದಾಗಲಿಲ್ಲವೇ?
ಸಮ್ಮಿಶ್ರ ಸರ್ಕಾರವನ್ನು ಅಪವಿತ್ರ ಮೈತ್ರಿ ಎನ್ನುವ ಯಡಿಯೂರಪ್ಪನವರು ಈ ಹಿಂದೆ ಜೆಡಿಎಸ್ ಜೊತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿರಲಿಲ್ಲವೇ? ಯಡಿಯೂರಪ್ಪನವರು ಕೆಜೆಪಿ ಸ್ಥಾಪನೆ ಮಾಡಿ ನಮ್ಮಪ್ಪನಾಣೆ ಬಿಜೆಪಿ ಸೇರಲ್ಲ ಎಂದಿದ್ದರು, ಯಡಿಯೂರಪ್ಪ ಪಕ್ಷ ತೊರೆದಾಗ ಪಕ್ಷದಿಂದ ಶನಿ ಹೋಯಿತು ಎಂದು ಈಶ್ವರಪ್ಪನವರು ಹೇಳಿರಲಿಲ್ಲವೇ? ಈಗವರು ಒಂದಾಗಿಲ್ಲವೇ?
|
ಡಮ್ಮಿ ಕ್ಯಾಂಡಿಡೇಟ್
ಮರು ಚುನಾವಣೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದೆ. ಶಿವಮೊಗ್ಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಜಿಲ್ಲೆಯಲ್ಲಿ ಮಧು ಬಂಗಾರಪ್ಪ ಪರವಾಗಿ ಕಂಡುಬರುತ್ತಿರುವ ಜನಸ್ಪಂದನೆಯನ್ನು ಗಮನಿಸಿದರೆ, ಯಡಿಯೂರಪ್ಪನವರ ಪುತ್ರ ಬಿ.ವೈ ರಾಘವೇಂದ್ರ ಅವರೇ ಮೇಲ್ನೋಟಕ್ಕೆ ಡಮ್ಮಿ ಕ್ಯಾಂಡಿಡೇಟ್ ಎಂದು ಅನಿಸುತ್ತಿದೆ.
|
ನಾನೂ ಒಬ್ಬ ಹಿಂದು
ಮೃದು ಅಥವಾ ಕಠೋರ ಹಿಂದು ಎಂಬುದು ಇಲ್ಲ. ನಾನೂ ಕೂಡ ಹಿಂದೂ. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಕರ್ನಾಟಕ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ದುರದೃಷ್ಟವಶಾತ್ ಸಂಭವಿಸಿದ ಸಾವುಗಳನ್ನು ರಾಜಕೀಯ ಲಾಭಕ್ಕಾಗಿ ಅವರು ಬಳಸಿಕೊಂಡರು. ಅದಕ್ಕಾಗಿ ಅವರಿಗೆ ನಾಚಿಕೆಯಾಗಬೇಕು.
|
ಮೋದಿ ದುರಾಡಳಿತ
ಸಿಬಿಐಗೆ ಸಂಬಂಧಿಸಿದ ಇತ್ತೀಚಿನ ಘಟನಾವಳಿಗಳು ನರೇಂದ್ರ ಮೋದಿ ಅವರ ದುರಾಡಳಿತಕ್ಕೆ ಇನ್ನೊಂದು ಉದಾಹರಣೆಯಷ್ಟೇ. ಪ್ರಜಾಪ್ರಭುತ್ವದ ಸ್ತಂಭಗಳನ್ನು ನಾಶಪಡಿಸುವುದಕ್ಕಾಗಿಯೇ ತಾವು ಇರುವುದು ಎಂದು ಬಿಜೆಪಿ ಭಾವಿಸಿದೆ. ಜನರು ವ್ಯವಸ್ಥೆಯ ಕುರಿತು ತಮ್ಮ ನಂಬಿಕೆ ಮತ್ತು ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications