ಜನರ ಹಣ ದೋಚುತ್ತಿರುವ ಜನಪ್ರತಿನಿಧಿಗಳು: ರವಿ ಕೃಷ್ಣಾರೆಡ್ಡಿ
ಬೆಂಗಳೂರು, ಡಿಸೆಂಬರ್ 01: ಶಿವಾಜಿನಗರ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾದ ಡಾ. ಅಬ್ದುಲ್ ಸುಭಾನ್ ಅವರ ಪರವಾಗಿ ಪ್ರಚಾರ ಮೆರವಣಿಗೆಯಲ್ಲಿ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರು ಭಾಗವಹಿಸಿದ್ದರು.
"ರಾಜ್ಯದ ಪ್ರಮುಖ ಪಕ್ಷದ ಜನಪ್ರತಿನಿಧಿಗಳು ವಂಚಕ ಕಂಪನಿಗಳಿಗೆ ಶ್ರೀರಕ್ಷೆಯಾಗಿ ನಿಂತಿದ್ದು, ಅದರಲ್ಲಿ ನೇರವಾಗಿ ಪಾಲುದಾರರಾಗಿದ್ದಾರೆ. ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ. ನೂರಾರು ಕುಟುಂಬಗಳಲ್ಲಿ ಈ ಕಾರಣಕ್ಕಾಗಿ ಸಾವು-ನೋವಾಗಿದೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಕಾರ್ಯಗಳು ನಿಂತುಹೋಗಿವೆ, ಕುಟುಂಬಗಳು ಮುರಿದು ಬಿದ್ದಿವೆ. ಈ ಬಗ್ಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ವಂಚಿತರ ಪರವಾಗಿ ನ್ಯಾಯಾಲಯಗಳಲ್ಲಿ ಮತ್ತು ಇತರೆಡೆಗಳಲ್ಲಿ ನಿರಂತರ ಹೋರಾಟ ಮಾಡುತ್ತಿದೆ. ನಮ್ಮ ಪ್ರಯತ್ನದ ಫಲವಾಗಿ ಸುಮಾರು 25ಕ್ಕೂ ಹೆಚ್ಚು ಪೊಂಜಿ ಕಂಪನಿಗಳು ಬಾಗಿಲು ಹಾಕಿವಂತಾಗಿದೆ. ಸಂತ್ರಸ್ತರಿಗೆ ನ್ಯಾಯ ಒದಗಿಸುವವರೆಗೂ ನಮ್ಮ ಹೋರಾಟ ಮುಂದುವರೆಯಲಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಹಾಗೂ ವಂಚಿತರಿಗೆ ಶೀಘ್ರವಾಗಿ ನ್ಯಾಯ ಒದಗಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾದ ಡಾ. ಅಬ್ದುಲ್ ಸುಭಾನ್ ಅವರಿಗೆ ಮತ ನೀಡಿ ಬೆಂಬಲಿಸಬೇಕೆಂದು'' ಮತದಾರರಲ್ಲಿ ಮನವಿ ಮಾಡಿದರು.

ಅವರು ಕ್ಷೇತ್ರದ ಭಾರತೀನಗರ, ವಸಂತನಗರ, ರಸೆಲ್ ಮಾರ್ಕೆಟ್, ಶಿವಾಜಿ ನಗರದ ಪ್ರಮುಖ ಬೀದಿಗಳು, ರಾಮಸ್ವಾಮಿಪಾಳ್ಯ, ಹಲಸೂರು ಹಾಗೂ ಇತರ ಪ್ರದೇಶಗಳಲ್ಲಿ ಇಂದು ರ್ಯಾಲಿ ಮಾಡುವ ಮೂಲಕ ಪ್ರಚಾರ ಕಾರ್ಯ ಕೈಗೊಂಡರು.
''ರಾಜ್ಯದ ನೆಲ, ಜಲ, ಭಾಷೆಯನ್ನು ರಕ್ಷಿಸಿ ಅಭಿವೃದ್ಧಿಪಡಿಸಬೇಕಾಗಿದೆ, ಭ್ರಷ್ಟ ಅಧಿಕಾರಿಗಳಿಂದ ಮತ್ತು ರಾಜಕಾರಣಿಗಳಿಂದ ರಾಜ್ಯವನ್ನು ರಕ್ಷಿಸಬೇಕಾಗಿದೆ. ಕೇವಲ ವೈಯಕ್ತಿಕ ಅಭಿವೃದ್ಧಿಗೆ, ಅಧಿಕಾರಕ್ಕಾಗಿ ಮತ್ತು ಜನರಿಗೆ ಮೋಸ ಮಾಡಲೆಂದೇ ರಾಜಕೀಯ ಮಾಡುತ್ತಿದ್ದಾರೆ. ಇಂಥವರಿಗೆ ಛೀಮಾರಿ ಹಾಕಿ, ಸ್ವಚ್ಛ- ಪ್ರಾಮಾಣಿಕ - ಜನಪರ ರಾಜಕಾರಣಕ್ಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಬೆಂಬಲಿಸಬೇಕು. ಅವರ ಹೋರಾಟವನ್ನು ಕಂಡು ಅವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮತ್ತು ಶಿವಾಜಿನಗರವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಸ್ಪರ್ಧಿಸಿದ್ದೇನೆ ಆದ್ದರಿಂದ ಶಿವಾಜಿನಗರದ ಮತದಾರರು ತಮ್ಮನ್ನು ಬೆಂಬಲಿಸಬೇಕು'' ಎಂದು ಪಕ್ಷದ ಅಭ್ಯರ್ಥಿಯಾದ ಡಾ. ಅಬ್ದುಲ್ ಸುಭಾನ್ ಮತದಾರರಲ್ಲಿ ಕೇಳಿಕೊಂಡರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications