ಜೇಟ್ಲಿಗೆ ಸಂತಾಪ ಸೂಚಿಸುವಾಗ ಸಿಎಂ ಪುತ್ರ ವಿಜಯೇಂದ್ರ ಎಡವಟ್ಟು
ಬೆಂಗಳೂರು, ಆಗಸ್ಟ್ 24: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಶನಿವಾರ ನಿಧನರಾಗಿದ್ದಾರೆ. ಜೇಟ್ಲಿಗೆ ಸಂತಾಪ ಸೂಚಿಸುವಾಗ ಸಿಎಂ ಪುತ್ರ ವಿಜಯೇಂದ್ರ ಎಡವಟ್ಟು ಮಾಡಿದ್ದಾರೆ.
''ನಾನು ಮೊದಲ ಬಾರಿಗೆ ಮುಖ್ಯಮಂತ್ರಿ ಆದಾಗ ಅವರು ಕರ್ನಾಟಕ ಉಸ್ತುವಾರಿಗಳಾಗಿದ್ದರು' ಎಂದು ವಿಜಯೇಂದ್ರ ಬರೆದಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಆ ವಾಕ್ಯವನ್ನೇ ತೆಗೆದುಹಾಕಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಶ್ರೇಷ್ಠ ಸಂಸದೀಯ ಪಟು, ಅದ್ಭುತ ವಾಗ್ಮಿ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರ ನಿಧನದಿಂದ ದೇಶಕ್ಕೆ, ಪಕ್ಷಕ್ಕೆ ಮತ್ತು ವೈಯಕ್ತಿಕವಾಗಿ ನನಗೂ ಕೂಡ ಅನಾಥಪ್ರಜ್ಞೆ ಕಾಡುತ್ತಿದೆ.

• ಆ ಎತ್ತರದ ವ್ಯಕ್ತಿತ್ವದ ರಾಜನೀತಿಜ್ಞರಿಗೆ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದೇನೆ.
• ದೇವರು ಅವರ ಕುಟುಂಬದವರು ಮತ್ತು ಅಪಾರ ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
• ಎಲ್ಲ ವಿಷಯಗಳ ಬಗ್ಗೆ ಅಧಿಕಾರಯುತವಾಗಿ ಮಾತನಾಡಬಲ್ಲ ವಿದ್ವತ್ತು ಅವರಲ್ಲಿತ್ತು.
• ಏಕ ರೂಪ ತೆರಿಗೆ (GST) ಸೇರಿದಂತೆ ನಮ್ಮ ದೇಶದ ಆರ್ಥಿಕ ಸುಧಾರಣೆಯಲ್ಲಿ ಅವರ ಪಾತ್ರ ದೇಶ ಎಂದಿಗೂ ಮರೆಯುವುದಿಲ್ಲ.
• ಜೇಟ್ಲಿಯವರ ಸಮರ್ಥ ನಿರ್ವಹಣೆಯಲ್ಲಿ ಭಾರತ 2 ಟ್ರಿಲಿಯನ್ ಡಾಲರ್ ಆರ್ಥಿಕ ದೈತ್ಯಶಕ್ತಿಯಾಗಿ ಬೆಳೆಯಿತು.
• ಅವರು ಉದಾರವಾದಿಯಾಗಿದ್ದರು, ರಾಷ್ಟ್ರವಾದಿಯಾಗಿದ್ದರು, ಅತ್ಯುತ್ತಮ ನ್ಯಾಯವಾದಿಗಳಾಗಿದ್ದಂತೆ ಆರ್ಥಿಕ ತಜ್ಞರೂ ಆಗಿದ್ದರು.

• ಎಲ್ಲ ಪಕ್ಷಗಳ ನಾಯಕರು ಶ್ರೀ ಅರುಣ್ ಜೇಟ್ಲಿಯವರನ್ನು ಗೌರವಿಸುತ್ತಿದ್ದರು.
• ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲೂ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಅರುಣ್ ಜೇಟ್ಲಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದಂತೆ "ಅಮೂಲ್ಯ ವಜ್ರ" ಸದೃಶರಾಗಿದ್ದರು.
• ಅಂತಹ ಅದ್ವಿತೀಯ ನಾಯಕರಾಗಿದ್ದ ಶ್ರೀ ಅರುಣ್ ಜೇಟ್ಲಿಯವರು ಇಷ್ಟು ಬೇಗ ನಮ್ಮನ್ನು ಅಗಲಿರುವುದು ಎಂದಿಗೂ ತುಂಬಲಾರದ ನಷ್ಟವಾಗಿದೆ.
• ಅವರಿಲ್ಲದ ದೊಡ್ಡ ಶೂನ್ಯತೆ ನಮ್ಮ ಪಕ್ಷವನ್ನು ಆವರಿಸಿದೆ.
• ಮತ್ತೊಮ್ಮೆ ನನ್ನ ಆತ್ಮೀಯ ಮಾರ್ಗದರ್ಶಕರಾಗಿದ್ದ ಶ್ರೀ ಅರುಣ್ ಜೇಟ್ಲಿಯವರಿಗೆ ನನ್ನ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications