ಜೇಟ್ಲಿಗೆ ಸಂತಾಪ ಸೂಚಿಸುವಾಗ ಸಿಎಂ ಪುತ್ರ ವಿಜಯೇಂದ್ರ ಎಡವಟ್ಟು
ಬೆಂಗಳೂರು, ಆಗಸ್ಟ್ 24: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಶನಿವಾರ ನಿಧನರಾಗಿದ್ದಾರೆ. ಜೇಟ್ಲಿಗೆ ಸಂತಾಪ ಸೂಚಿಸುವಾಗ ಸಿಎಂ ಪುತ್ರ ವಿಜಯೇಂದ್ರ ಎಡವಟ್ಟು ಮಾಡಿದ್ದಾರೆ.
''ನಾನು ಮೊದಲ ಬಾರಿಗೆ ಮುಖ್ಯಮಂತ್ರಿ ಆದಾಗ ಅವರು ಕರ್ನಾಟಕ ಉಸ್ತುವಾರಿಗಳಾಗಿದ್ದರು' ಎಂದು ವಿಜಯೇಂದ್ರ ಬರೆದಿದ್ದಾರೆ. ಸ್ವಲ್ಪ ಹೊತ್ತಿನ ಬಳಿಕ ಆ ವಾಕ್ಯವನ್ನೇ ತೆಗೆದುಹಾಕಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಶ್ರೇಷ್ಠ ಸಂಸದೀಯ ಪಟು, ಅದ್ಭುತ ವಾಗ್ಮಿ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರ ನಿಧನದಿಂದ ದೇಶಕ್ಕೆ, ಪಕ್ಷಕ್ಕೆ ಮತ್ತು ವೈಯಕ್ತಿಕವಾಗಿ ನನಗೂ ಕೂಡ ಅನಾಥಪ್ರಜ್ಞೆ ಕಾಡುತ್ತಿದೆ.

• ಆ ಎತ್ತರದ ವ್ಯಕ್ತಿತ್ವದ ರಾಜನೀತಿಜ್ಞರಿಗೆ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದೇನೆ.
• ದೇವರು ಅವರ ಕುಟುಂಬದವರು ಮತ್ತು ಅಪಾರ ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
• ಎಲ್ಲ ವಿಷಯಗಳ ಬಗ್ಗೆ ಅಧಿಕಾರಯುತವಾಗಿ ಮಾತನಾಡಬಲ್ಲ ವಿದ್ವತ್ತು ಅವರಲ್ಲಿತ್ತು.
• ಏಕ ರೂಪ ತೆರಿಗೆ (GST) ಸೇರಿದಂತೆ ನಮ್ಮ ದೇಶದ ಆರ್ಥಿಕ ಸುಧಾರಣೆಯಲ್ಲಿ ಅವರ ಪಾತ್ರ ದೇಶ ಎಂದಿಗೂ ಮರೆಯುವುದಿಲ್ಲ.
• ಜೇಟ್ಲಿಯವರ ಸಮರ್ಥ ನಿರ್ವಹಣೆಯಲ್ಲಿ ಭಾರತ 2 ಟ್ರಿಲಿಯನ್ ಡಾಲರ್ ಆರ್ಥಿಕ ದೈತ್ಯಶಕ್ತಿಯಾಗಿ ಬೆಳೆಯಿತು.
• ಅವರು ಉದಾರವಾದಿಯಾಗಿದ್ದರು, ರಾಷ್ಟ್ರವಾದಿಯಾಗಿದ್ದರು, ಅತ್ಯುತ್ತಮ ನ್ಯಾಯವಾದಿಗಳಾಗಿದ್ದಂತೆ ಆರ್ಥಿಕ ತಜ್ಞರೂ ಆಗಿದ್ದರು.

• ಎಲ್ಲ ಪಕ್ಷಗಳ ನಾಯಕರು ಶ್ರೀ ಅರುಣ್ ಜೇಟ್ಲಿಯವರನ್ನು ಗೌರವಿಸುತ್ತಿದ್ದರು.
• ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲೂ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಅರುಣ್ ಜೇಟ್ಲಿಯವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದಂತೆ "ಅಮೂಲ್ಯ ವಜ್ರ" ಸದೃಶರಾಗಿದ್ದರು.
• ಅಂತಹ ಅದ್ವಿತೀಯ ನಾಯಕರಾಗಿದ್ದ ಶ್ರೀ ಅರುಣ್ ಜೇಟ್ಲಿಯವರು ಇಷ್ಟು ಬೇಗ ನಮ್ಮನ್ನು ಅಗಲಿರುವುದು ಎಂದಿಗೂ ತುಂಬಲಾರದ ನಷ್ಟವಾಗಿದೆ.
• ಅವರಿಲ್ಲದ ದೊಡ್ಡ ಶೂನ್ಯತೆ ನಮ್ಮ ಪಕ್ಷವನ್ನು ಆವರಿಸಿದೆ.
• ಮತ್ತೊಮ್ಮೆ ನನ್ನ ಆತ್ಮೀಯ ಮಾರ್ಗದರ್ಶಕರಾಗಿದ್ದ ಶ್ರೀ ಅರುಣ್ ಜೇಟ್ಲಿಯವರಿಗೆ ನನ್ನ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications