ಬೈಯಪ್ಪನಹಳ್ಳಿ-ಕೆಂಗೇರಿ ನಮ್ಮ ಮೆಟ್ರೋ ರೈಲು ದರ ಪಟ್ಟಿ
ಬೆಂಗಳೂರು ಆಗಸ್ಟ್ 24; ನಮ್ಮ ಮೆಟ್ರೋ ಯೋಜನೆಯ ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗವು ಆಗಸ್ಟ್ 29ರಂದು ಉದ್ಘಾಟನೆಗೊಳ್ಳುತ್ತಿದೆ. ಮಾರ್ಗ ಉದ್ಘಾಟನೆಗೊಂಡ ಬಳಿಕ ಬೈಯಪ್ಪನಹಳ್ಳಿಯಿಂದ ಕೆಂಗೇರಿ ತನಕ ಮೆಟ್ರೋ ರೈಲು ಸಂಚಾರ ನಡೆಸಲಿದೆ.
ಆಗಸ್ಟ್ 29ರ ಭಾನುವಾರ ಬೆಳಗ್ಗೆ 10.30ಕ್ಕೆ ಮೈಸೂರು ರಸ್ತೆ-ಕೆಂಗೇರಿ ವಿಸ್ತರಿತ ಮಾರ್ಗವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭವಾಗಲಿದೆ.
ಮೈಸೂರು ರಸ್ತೆ (ನಾಯಂಡಹಳ್ಳಿ) ಯಿಂದ ಹೊರಡುವ ರೈಲು ಕೆಂಗೇರಿ ನಿಲ್ದಾಣವನ್ನು 15 ನಿಮಿಷದಲ್ಲಿ ತಲುಪಲಿದೆ. ಪ್ರತಿ 10 ನಿಮಿಷಕ್ಕೆ ಒಂದು ರೈಲನ್ನು ಓಡಿಸಲು ಬಿಎಂಆರ್ಸಿಎಲ್ ತೀರ್ಮಾನಿಸಿದೆ. ಪ್ರಯಾಣಿಕರ ದಟ್ಟಣೆ ನೋಡಿಕೊಂಡು ಹೆಚ್ಚಿನ ರೈಲು ಓಡಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೈಯಪ್ಪನಹಳ್ಳಿ-ಕೆಂಗೇರಿ ನಡುವಿನ ಪ್ರಯಾಣಕ್ಕೆ 56 ರೂ. ದರವನ್ನು ನಿಗದಿ ಮಾಡಲಾಗಿದೆ. ಬೆಳಗ್ಗೆ 7 ರಿಂದ 11 ಗಂಟೆ ಮತ್ತು ಸಂಜೆ 4.30 ರಿಂದ 7.30ರ ತನಕ ಬೈಯಪ್ಪನಹಳ್ಳಿ-ಕೆಂಗೇರಿ ನಡುವೆ 10 ನಿಮಿಷಕ್ಕೆ ಒಂದು ರೈಲು ಸಂಚಾರ ನಡೆಸಲಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದರೆ 5 ರಿಂದ 8 ನಿಮಿಷಕ್ಕೆ ಒಂದು ರೈಲು ಓಡಿಸಲು ಬಿಎಂಆರ್ಸಿಎಲ್ ಸಿದ್ಧವಿದೆ.

55 ಕಿ. ಮೀ. ಮಾರ್ಗದಲ್ಲಿ ಮೆಟ್ರೋ ಸಂಚಾರ
ಇನ್ನೂ 7.5 ಕಿ. ಮೀ. ವಿಸ್ತರಿತ ಮಾರ್ಗದಲ್ಲಿ ರೈಲು ಪ್ರಯಾಣ ಆರಂಭವಾದರೆ ಬೆಂಗಳೂರು ನಗರದಲ್ಲಿ ಒಟ್ಟು 55 ಕಿ. ಮೀ. ಮಾರ್ಗದಲ್ಲಿ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ದೆಹಲಿ ಮತ್ತು ಹೈದರಾಬಾದ್ ನಗರದಲ್ಲಿ ಈಗಾಗಲೇ ಮೆಟ್ರೋ 55 ಕಿ. ಮೀ. ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ. ಹಸಿರು ಮಾರ್ಗದಲ್ಲಿ 30 ಕಿ. ಮೀ. ಮತ್ತು ನೇರಳೆ ಮಾರ್ಗದಲ್ಲಿ 25 ಕಿ. ಮೀ. ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರೈಲು ನಿಲ್ದಾಣದ ವಿವರಗಳು
ಮೈಸೂರು ರಸ್ತೆ-ಕೆಂಗೇರಿ ಬಸ್ ಟರ್ಮಿನಲ್ ತನಕ ಮೆಟ್ರೋ ಕಾಮಗಾರಿ ಪೂರ್ಣಗೊಂಡಿದೆ ಅಲ್ಲಿಯ ತನಕ ಮಾತ್ರ ರೈಲು ಸಂಚಾರ ನಡೆಸಲಿದೆ. ಈ ಮಾರ್ಗವನ್ನು ಚಲ್ಲಘಟ್ಟ ತನಕ ವಿಸ್ತರಣೆ ಮಾಡಲಾಗುತ್ತಿದ್ದು, ಈ ಕಾಮಗಾರಿ ಇನ್ನೂ ಒಂದು ವರ್ಷದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಈ ಮಾರ್ಗದಲ್ಲಿ ಮೈಸೂರು ರಸ್ತೆ (ನಾಯಂಡಹಳ್ಳಿ) ಬಳಿಕ ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಮೈಲಸಂದ್ರ, ಕೆಂಗೇರಿ ಬಸ್ ಟರ್ಮಿನಲ್ ನಿಲ್ದಾಣಗಳಿವೆ. ಮುಂದೆ ಚಲ್ಲಘಟ್ಟ ನಿಲ್ದಾಣ ನಿರ್ಮಾಣವಾಗಲಿದೆ.

75 ಸಾವಿರ ಜನರಿಗೆ ಅನುಕೂಲವಾಗಲಿದೆ
ನಮ್ಮ ಮೆಟ್ರೋ ನೇರಳೆ ಮಾರ್ಗದ ವಿಸ್ತರಿತ ಮಾರ್ಗ ನಿರ್ಮಾಣದಿಂದ ಸುಮಾರು 75 ಸಾವಿರ ಜನರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೇ ಮೈಸೂರು ಕಡೆಯಿಂದ ಆಗಮಿಸುವ ಜನರು ವಿಧಾನಸೌಧ, ಎಂ. ಜಿ. ರಸ್ತೆ, ಬೈಯಪ್ಪನಹಳ್ಳಿ ಕಡೆಗೆ ತೆರಳಲು ಈ ರೈಲು ಅನುಕೂಲ ಕಲ್ಪಿಸಲಿದೆ.
ಒಟ್ಟು 7.5 ಕಿ. ಮೀ. ವಿಸ್ತರಿತ ಮಾರ್ಗ (ಚಲ್ಲಘಟ್ಟ ತನಕ) ಯೋಜನೆಯ ವೆಚ್ಚ 1,560 ಕೋಟಿ ರೂ. ಆಗಿದೆ. ಪ್ರತಿ ಕಿ. ಮೀ.ಗೆ 250 ಕೋಟಿ ಗೂ ಅಧಿಕ ನಿರ್ಮಾಣ ವೆಚ್ಚ ಆಗಿದೆ. ಯೋಜನೆಗಾಗಿ ಸ್ವಾಧೀನಕ್ಕೆ ಪಡೆದ ಭೂಮಿಗೆ ಪರಿಹಾರ ನೀಡಲು ಸುಮಾರು 300 ಕೋಟಿ ವೆಚ್ಚ ಮಾಡಲಾಗಿದೆ.
Recommended Video

ಹಲವು ಗಡುವು ಪೂರ್ಣಗೊಂಡಿದೆ
ಮೈಸೂರು ರಸ್ತೆ-ಕೆಂಗೇರಿ ವಿಸ್ತರಿತ ಮಾರ್ಗದ ಕಾಮಗಾರಿ ಪೂರ್ಣಗೊಳ್ಳಲು ಹಲವು ಗಡುವು ಪೂರ್ಣಗೊಂಡಿದೆ. ಈಗ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗುತ್ತಿದೆ. 2018ರ ಡಿಸೆಂಬರ್ನಲ್ಲಿಯೇ ಮಾರ್ಗ ಲೋಕಾರ್ಪಣೆಯಾಗಬೇಕಿತ್ತು. 2019ರ ಮಾರ್ಚ್ಗೆ ಮುಂದೂಡಲಾಗಿತ್ತು. ಬಳಿಕ 2019ರ ನವೆಂಬರ್, 2020ರ ಅಕ್ಟೋಬರ್, 2021ರ ಫೆಬ್ರವರಿ, ಏಪ್ರಿಲ್ ಗಡುವು ಇತ್ತು ಅಂತಿಮವಾಗಿ ಆಗಸ್ಟ್ನಲ್ಲಿ ಮಾರ್ಗ ಲೋಕಾರ್ಪಣೆಗೊಳ್ಳುತ್ತಿದೆ.
7.5 ಕಿ. ಮೀ. ಮಾರ್ಗ ಸಂಪೂರ್ಣವಾಗಿ ಎತ್ತರಿಸಿದ ಮಾರ್ಗವಾಗಿದ್ದು, ಯಾವುದೇ ಸುರಂಗದ ನಿಲ್ದಾಣಗಳಿಲ್ಲ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್












Click it and Unblock the Notifications