Byappanahalli- KR Pura Metro: ಬೈಯಪ್ಪನಹಳ್ಳಿ- ಕೆಆರ್ ಪುರಂ ಮೆಟ್ರೋ ಮಾರ್ಗದಲ್ಲಿ ಕಂಡು ಬಂದ ಆರು ಬೋಗಿಯ ರೈಲು- ಮಾಹಿತಿ, ವಿವರ
ಬೆಂಗಳೂರು, ಆಗಸ್ಟ್ 12: ಬೈಯಪ್ಪನಹಳ್ಳಿ-ಕೃಷ್ಣರಾಜಪುರಂ (ಕೆಆರ್ ಪುರಂ) ಮೆಟ್ರೊ ರೈಲು ಮಾರ್ಗದ ಪ್ರಾಯೋಗಿಕ ಸಂಚಾರ ಕಳೆದು ತಿಂಗಳು ಆರಂಭವಾಗಿದೆ. 6 ಬೋಗಿಗಳ ಮೆಟ್ರೊ ರೈಲನ್ನು ಬೆನ್ನಗಾನಹಳ್ಳಿಯಲ್ಲಿ ಇರುವ ತೆರೆದ ವೆಬ್ ಗ್ರಿಡರ್ ಮೇಲೆ ನಿಲ್ಲಿಸಿರುವುದು ಕಂಡುಬಂದಿದೆ. ಬೈಯಪ್ಪನಹಳ್ಳಿ- ಕೃಷ್ಣರಾಜಪುರಂ ನೇರಳೆ ಮಾರ್ಗವು ಎರಡು ಕಿಮೀ ವಿಸ್ತರಣೆಯಾಗಿದೆ. ಇದು ವೈಟ್ಫೀಲ್ಡ್ ಪ್ರದೇಶವನ್ನು ಕೆಂಗೇರಿ, ಮೈಸೂರು ರಸ್ತೆ, ಮೆಜೆಸ್ಟಿಕ್ ಸೇರಿದಂತೆ ಬೆಂಗಳೂರಿನ ಇತರ ಭಾಗಗಳೊಂದಿಗೆ ಸಂಪರ್ಕಿಸುತ್ತದೆ.
ಪ್ರಾಯೋಗಿಕ ಚಾಲನೆಯ ಭಾಗವಾಗಿ ಆರು ಬೋಗಿಗಳ ಮೆಟ್ರೋ ರೈಲು ಕಳೆದ ತಿಂಗಳಿಂದ ಸಂಚಾರ ನಡೆಸುತ್ತಿದೆ. ಇದನ್ನು ಸಾಮಾನ್ಯವಾಗಿ ಉದ್ಘಾಟನೆಗಿಂತ ಮೊದಲು ನಡೆಸಲಾಗುತ್ತದೆ. ಟ್ರ್ಯಾಕ್ ಜೋಡಣೆ, ವೇಗ ಮತ್ತು ಇತರ ತಾಂತ್ರಿಕ ಸವಾಲುಗಳನ್ನು ಪರಿಶೀಲಿಸಲು ಪ್ರಾಯೋಗಿನ ಸಂಚಾರವನ್ನು ನಡೆಸಲಾಗುತ್ತದೆ.

ಬೆನ್ನಗಾನಹಳ್ಳಿಯ ರೈಲ್ವೆ ಹಳಿಯ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಓಪನ್ ವೆಬ್ ಗ್ರಿಡರ್ (ಒಡಬ್ಲ್ಯುಜಿ) ಮೇಲೆ ಲೋಡ್ ಪರೀಕ್ಷೆಯನ್ನೂ ನಡೆಸಲಾಗಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್ಎಸ್) ನಂತರ ಮಾರ್ಗವನ್ನು ಪರಿಶೀಲಿಸಿದ್ದಾರೆ. ಅವರು ಉದ್ಘಾಟನೆಗೆ ಅನುಮೋದನೆ ನೀಡಬೇಕಿದೆ.
ಜುಲೈ ಮಧ್ಯದಲ್ಲಿ ಕೆಆರ್ ಪುರಂ-ಬೈಯಪ್ಪನಹಳ್ಳಿ ಮಾರ್ಗವನ್ನು ಉದ್ಘಾಟಿಸುವ ಗುರಿ ಇದೆ ಎಂದು ಬಿಎಂಆರ್ಸಿಎಲ್ ಈ ಹಿಂದೆ ಘೋಷಿಸಿತ್ತು. ಆದಾಗ್ಯೂ, ಈ ಮೆಟ್ರೋ ಮಾರ್ಗದ ಉದ್ಘಾಟನಾ ದಿನಾಂಕದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.

ಕೆಲವು ವರದಿಗಳ ಪ್ರಕಾರ, ಮೆಟ್ರೋ ಇಲಾಖೆಯು ಸೆಪ್ಟಂಬರ್ನಲ್ಲಿ ಈ ವಿಸ್ತರಣೆಯನ್ನು ಉದ್ಘಾಟಿಸುವ ಸಾಧ್ಯತೆಯಿದೆ. ನೇರಳೆ ಮಾರ್ಗವು ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಏಕೆಂದರೆ ವೈಟ್ಫೀಲ್ಡ್ ಹಲವಾರು ಟೆಕ್ ಪಾರ್ಕ್ಗಳನ್ನು ಹೊಂದಿದೆ. ನಗರದ ವಿವಿಧ ಭಾಗಗಳ ಉದ್ಯೋಗಿಗಳು ಅಲ್ಲಿ ಕೆಲಸ ಮಾಡುತ್ತಾರೆ.
ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ವೈಟ್ಫೀಲ್ಡ್- ಕೆಆರ್ ಪುರಂ ಮಾರ್ಗವನ್ನು ಪ್ರಾರಂಭಿಸಿತು. ಈ ಪ್ರಮುಖ ವಿಸ್ತರಣೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು.

ನಂತರ ಬಿಎಂಆರ್ಸಿಎಲ್ ಅಧಿಕಾರಿಗಳು ಬೆನ್ನಿಗಾನಹಳ್ಳಿ ರೈಲು ನಿಲ್ದಾಣದ ಮೇಲೆ ತೆರೆದ ವೆಬ್ ಗ್ರೈಂಡರ್ ಅನ್ನು ಸ್ಥಾಪಿಸಬೇಕಾಗಿದೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನ ನಾಲ್ಕು ಹೊರವಲಯದ ಪಟ್ಟಣಗಳಿಗೆ ಮೆಟ್ರೋ ವಿಸ್ತರಣೆ
ಬೆಂಗಳೂರಿನ ನಾಲ್ಕು ಹೊರವಲಯದ ಪಟ್ಟಣಗಳಾದ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆಗೆ ನಮ್ಮ ಮೆಟ್ರೋ ಸೇವೆಯನ್ನು ವಿಸ್ತರಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಈ ವಿಚಾರದ ಕುರಿತು ಚರ್ಚೆಯಾಗಿದೆ.
ಬೆಂಗಳೂರು ಗ್ರಾಮಾಂತರ ಶಾಸಕರ ಸಭೆಯಲ್ಲಿ ಭಾಗವಹಿಸಿದ ಮಾತನಾಡಿದ ಶಾಸಕರೊಬ್ಬರು, 'ಬೆಂಗಳೂರು ನಗರದೊಂದಿಗೆ ಸಂಪರ್ಕವನ್ನು ಹೆಚ್ಚಿಸಲು ನಾವು ಈ ನಾಲ್ಕು ಪಟ್ಟಣಗಳಿಗೆ ಮೆಟ್ರೋ ವಿಸ್ತರಣೆಯನ್ನು ಪ್ರಸ್ತಾಪಿಸಿದ್ದೇವೆ' ಎಂದು ಹೇಳಿದ್ದಾರೆ.

ನಮ್ಮ ಮೆಟ್ರೋದಿಂದ ಬೆಂಗಳೂರು ಬಳಿಯ ನಾಲ್ಕು ಪಟ್ಟಣಗಳ ಅಭಿವೃದ್ಧಿಯಾಗಲಿದೆ. ಇದು ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಶಾಸಕರು ತಿಳಿಸಿದ್ದಾರೆ.
ನಮ್ಮ ಮೆಟ್ರೋ ಯೋಜನೆಯ 2ಎ ಮತ್ತು 2ಬಿ ಹಂತಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಬೆಂಗಳೂರಿನ ಉಪನಗರಗಳನ್ನು ಸಂಪರ್ಕಿಸುತ್ತದೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
ಈಗ ಸಿಲ್ಕ್ ಬೋರ್ಡ್ನಿಂದ ನೇರವಾಗಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇದು 2025ರಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ. ಈ ಯೋಜನೆಯು ಬೆಂಗಳೂರು ಪ್ರಮುಖ ಐಟಿ ಕಾರಿಡಾರ್ಗಳಿಗೆ ಸಂಪರ್ಕ ಕಲ್ಪಿಸಲಿದೆ. ಈ ಯೋಜನೆಯಿಂದ ನಗರದ ಸಂಚಾರ ದಟ್ಟಣೆ ವ್ಯಾಪಕವಾಗಿ ಕಡಿಮೆ ಆಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ












Click it and Unblock the Notifications