ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಸಮಯಪ್ರಜ್ಞೆಯಿಂದ ಉಳಿಯಿತು ಕಂದಮ್ಮನ ಜೀವ
ಬೆಂಗಳೂರು, ಮಾರ್ಚ್ 07: ಸಂಪ್ಗೆ ಬಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಮಗುವನ್ನು ಬೆಂಗಳೂರು ಸಂಚಾರಿ ಪೊಲೀಸರೊಬ್ಬರು ಸಮಯಕ್ಕೆ ಸರಿಯಾಗಿ ಬಂದು ರಕ್ಷಿಸಿರುವ ಘಟನೆ ಬ್ಯಾಟರಾಯನಪುರದಲ್ಲಿ ನಡೆದಿದೆ. ಈ ಕಾರ್ಯ ಮಾಡಿದ ಬ್ಯಾಟರಾಯನಪುರ ಸಂಚಾರ ಠಾಣೆಯ ಪಿಎಸ್ಐ ಎ.ಆರ್.ನಾಗರಾಜ್ ಅವರ ಸಮಯ ಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ನಿನ್ನೆ (ಮಾರ್ಚ್ 6) ಮಧ್ಯಾಹ್ನ ನಂತರ 3.30ರ ಸಮಯದಲ್ಲಿ ಬ್ಯಾಡರಹಳ್ಳಿಯ ಬಿಇಎಲ್ ಲೇಔಟ್ನಲ್ಲಿ ಮಗು ಸಂಪ್ ಒಳಗೆ ಬಿದ್ದಿದೆ, ಯಾರಾದರೂ ಕಾಪಾಡಿ ಕಾಪಾಡಿ ಎಂದು ಮಹಿಳೆಯರು ಕೂಗಾಡುತ್ತಿದ್ದರು. ಇದೇ ಹೊತ್ತಿಗೆ ನಾಗರಾಜ್ ಕರ್ತವ್ಯಕ್ಕೆ ಹಾಜರಾಗಲು ಮನೆಯಿಂದ ಪೊಲೀಸ್ ಠಾಣೆ ಕಡೆಗೆ ಹೋಗುತ್ತಿದ್ದರು.

ಮನೆಯೊಂದರ ಬಳಿ ಹಲವು ಮಹಿಳೆಯರು ಗುಂಪುಗೂಡಿರುವುದನ್ನು ಗಮನಿಸಿದ ನಾಗರಾಜ್ ಕೂಡಲೇ ತಮ್ಮ ದ್ವಿಚಕ್ರ ವಾಹನ ನಿಲ್ಲಿಸಿ, ಆ ಕಡೆಗೆ ಓಡಿದರು. ಅಲ್ಲಿ 10 ಅಡಿ ಆಳದ ಸಂಪ್ಗೆ ಮಗುವೊಂದು ಬಿದ್ದು ನೀರಿನಲ್ಲಿ ಮುಳುಗಿ ಒದ್ದಾಡುತ್ತಿರುವುದು ಕಂಡುಬಂತು. ನಾಗರಾಜ್ ತಕ್ಷಣವೇ ಸಂಪ್ಗೆ ಇಳಿದು ಮಗುವನ್ನು ರಕ್ಷಿಸಿ ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ವಿಚಾರವನ್ನು ಬೆಂಗಳೂರು ಸಂಚಾರ ಪೊಲೀಸ್ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. 'ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ಪಿ.ಎಸ್.ಐ ನಾಗರಾಜ್ ರವರು ಬ್ಯಾಡರಹಳ್ಳಿ ಸಮೀಪದ 10 ಅಡಿ ಆಳದ ನೀರಿನ ಟ್ಯಾಂಕ್ಗೆ ಬಿದ್ದ ಎರಡುವರೆ ವರ್ಷದ ಬಾಲಕನನ್ನು ತಕ್ಷಣವೇ ರಕ್ಷಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದು, ತಮ್ಮ ಕರ್ತವ್ಯ ಪ್ರಜ್ಞೆ ಮೆರೆದು ಅತ್ಯುತ್ತಮ ಪೊಲೀಸ್ ಪಡೆಗೆ ಉತ್ತಮ ಆದರ್ಶಪ್ರಾಯವಾಗಿದ್ದಾರೆ. ಧನ್ಯವಾದಗಳು, ಪಿಎಸ್ಐ ನಾಗರಾಜ್, ನಮ್ಮ ನಗರವನ್ನು ಸುರಕ್ಷಿತವಾಗಿಡುವಲ್ಲಿನ ನಿಮ್ಮ ಈ ಅಚಲ ಬದ್ಧತೆಗಾಗಿ' ಎಂದು ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ಸೂಚಿಸಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications