ಬ್ಯಾಟರಾಯನಪುರ ಬೆಂಕಿ ಅವಘಡ: ಮಾಲೀಕ ಸೇರಿ ಇಬ್ಬರ ಸೆರೆ
ಬೆಂಗಳೂರು ನ.11: ಬಾಪೂಜಿನಗರದಲ್ಲಿರುವ ರಾಸಾಯನಿಕ ಕಾರ್ಖಾನೆಯ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ , ಕಾರ್ಖಾನೆ ಮಾಲೀಕ ಸಜ್ಜನ್ ರಾವ್ ಉದ್ಯೋಗಿ ಅನಿಲ್ ಎಂಬುವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
'ಬೊಮ್ಮಸಂದ್ರದಲ್ಲಿ ರೇಖಾ ಕೆಮಿಕಲ್ಸ್ ಆ್ಯಂಡ್ ಕಾರ್ಪೊರೇಷನ್ ಕಾರ್ಖಾನೆ ಹೊಂದಿರುವ ಸಜ್ಜನರಾವ್, ಸ್ಯಾನಿಟೈಸರ್ ಹಾಗೂ ಥಿನ್ನರ್ ತಯಾರಿಸುತ್ತಿದ್ದರು. ಅದಕ್ಕೆ ಬೇಕಾದ ರಾಸಾಯನಿಕಗಳನ್ನು ಬಾಪೂಜಿನಗರದ ಜನ ವಸತಿ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದರು. ಮಂಗಳವಾರ ಬೆಂಕಿ ಕಾಣಿಸಿಕೊಂಡು, ಗೋದಾಮು ಸುಟ್ಟು ಕರಕಲಾಗಿತ್ತು. ನೆರೆಹೊರೆಯ ಮನೆಗಳಿಗೂ ಹಾನಿಯಾಗಿತ್ತು.
ಇದೇ ಬೆಂಕಿ ಅವಘಡದಿಂದ ಪ್ಲಾಸ್ಟಿಕ್ ಅಂಗಡಿ ಸುಟ್ಟಿತ್ತು. ಅದರ ಮಾಲೀಕ ನಷ್ಟದ ಪರಿಹಾರ ಕೋರಿ ಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕೆ ಸೂಚಿಸಿದ್ದರು.

ಇದರ ನಡುವೆಯೇ ಕಂಪನಿ ಮಾಲೀಕ ಸಜ್ಜನ್ ರಾವ್ ಹಾಗೂ ಕೆಲಸಗಾರ ಅನಿಲ್ ಅವರನ್ನು ಬಂಧಿಸಿದ್ದು, ಸ್ಪೋಟಕ ವಸ್ತುಗಳ ಕಾಯ್ದೆಯಡಿ ಬ್ಯಾಟರಾಯನಪುರ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಗಳ ಬಂಧನ ಸಂಗತಿಯನ್ನು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ಸ್ಪಷ್ಟಪಡಿಸಿದ್ದಾರೆ.
Recommended Video
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications