ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಡಿಕೆ ಶಿವಕುಮಾರ್ ಕಿಡಿ
ಬೆಂಗಳೂರು, ಡಿಸೆಂಬರ್ 18: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಕಿಡಿಕಾರಿದ್ದಾರೆ. ಈ ಕಾಯ್ದೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ, ನಾವು ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರವು ಕೇವಲ ಕೆಲ ವರ್ಗ, ಧರ್ಮದವರನ್ನು ಗುರಿಯಾಗಿಸಬಾರದು ಎಲ್ಲ ವರ್ಗ, ಜಾತಿ, ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಪೌರತ್ವ ಕಾಯ್ದೆ ಜಾರಿಗೊಳಿಸಲಾಗಿಸುವುದರ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆಶಿ, ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಹಿತಾಸಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಹೀಗಾಗಿ ಇದೊಂದು ಅಸಂವಿಧಾನಿಕ ಕಾಯ್ದೆ. ಭಾರತ ಜಾತ್ಯತೀತ ರಾಷ್ಟ್ರ. ಇಲ್ಲಿ ಯಾವುದೇ ಪ್ರಜೆ ತಾನು ಪ್ರಾರ್ಥನೆ ಮಾಡುವ ದೇವರನ್ನು, ಪಾಲಿಸುವ ಧರ್ಮವನ್ನು ಆಯ್ಕೆ ಮಾಡುವುದು ಆತನ ಸ್ವಾತಂತ್ರ್ಯಕ್ಕೆ ಬಿಟ್ಟದ್ದು. ಪ್ರಜೆಗಳಿಗೆ ಸಂವಿಧಾನದ ಮೂಲಭೂತ ಹಕ್ಕಿನ ಅಡಿಯಲ್ಲಿ ಈ ಸ್ವಾತಂತ್ರ್ಯ ನೀಡಲಾಗಿದೆ. ಹೀಗಾಗಿ ಸರಕಾರ ಆಗಲಿ, ಯಾವುದೇ ಪಕ್ಷವಾಗಲಿ ದೇಶದ ಜನರನ್ನು ಇಂತಹುದೇ ಧರ್ಮವನ್ನು ಪಾಲಿಸುವಂತೆ ಬಲವಂತ ಹೇರುವಂತಿಲ್ಲ. ಹೀಗಾಗಿ ಕೇಂದ್ರ ಸರಕಾರದ ನಡೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು, ನಾಚಿಕೆಗೇಡಿನ ವಿಚಾರ ಎಂದರು.

ಅಸ್ಸಾಂ ಹಾಗೂ ಇತರೆ ಭಾಗಗಳಲ್ಲಿ ಇಂಟರ್ನೆಟ್ ಸೌಕರ್ಯವನ್ನು ಕಡಿತಗೊಳಿಸುತ್ತಾರೆ. ಇನ್ನೊಂದೆಡೆ ಶಾಂತಿ ಕಾಪಾಡುವಂತೆ ಇಂಟರ್ನೆಟ್ ಮೂಲಕವೇ ಪ್ರಧಾನಿ ಸಂದೇಶ ರವಾನಿಸುತ್ತಾರೆ. ಈ ಸಂದೇಶ ಅವರಿಗೆ ಹೇಗೆ ತಲುಪುತ್ತದೆ? ನನ್ನ ಪ್ರಕಾರ ದೇಶದ ಪ್ರತಿಯೊಬ್ಬರಿಗೂ ತಮ್ಮ ಪ್ರತಿಭಟನೆ ಮಾಡುವ ಅಧಿಕಾರವಿದೆ. ಸಾಮಾನ್ಯ ಪ್ರಜೆ ತನ್ನ ಧ್ವನಿಯನ್ನು ಎತ್ತುವುದೇ ಈ ಸಂದರ್ಭದಲ್ಲಿ ಹೀಗಾಗಿ ಪ್ರಜಾಪ್ರಭುತ್ವದಲ್ಲಿ ಇದಕ್ಕೆ ಅವಕಾಶವಿದೆ ಎಂದು ಹೇಳಿದರು.
ಬಿಜೆಪಿ ಸರಕಾರಕ್ಕೆ ಬಹುಮತವಿದೆ ನಿಜ. ಕಳೆದ ವಾರ ಕಾಯ್ದೆಗೆ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ. ಆದರೆ ಸಮಾಜದ ಎಲ್ಲ ವರ್ಗಗಳಿಗೂ ಕಾಯ್ದೆಯಿಂದ ನೆರವಾಗಬೇಕು. ಕೇವಲ ಒಂದು ವರ್ಗ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗಬಾರದು. ದೇಶದೆಲ್ಲೆಡೆ ಹಾಗೂ ರಾಜ್ಯದಲ್ಲೂ ಕಾಂಗ್ರೆಸ್ ಹೋರಾಟ ಮುಂದುವರೆಯಲಿದೆ ಎಂದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications