ಸಿಎಎ ಸಂವಿಧಾನ ವಿರೋಧಿ: ನೊಬೆಲ್ ಪುರಸ್ಕೃತ ಅಮಾರ್ಥ್ಯ ಸೇನ್
ಬೆಂಗಳೂರು, ಜನವರಿ 8: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮಾರ್ಥ್ಯ ಸೇನ್ ಹೇಳಿದರು.
ನಗರದಲ್ಲಿ ಬುಧವಾರ ಇನ್ಫೋಸಿಸ್ ಸೈನ್ಸ್ ಫೌಂಡೇಷನ್ನ ಇನ್ಫೋಸಿಸ್ ಪ್ರಶಸ್ತಿ 2019ರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
'ಸಿಎಎ ಕಾನೂನನ್ನು ಸುಪ್ರೀಂಕೋರ್ಟ್ ಅದರ ಅಸಾಂವಿಧಾನಿಕತೆಯ ನೆಲೆಯಲ್ಲಿ ರದ್ದುಗೊಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. ಏಕೆಂದರೆ ಪೌರತ್ವವನ್ನು ಧಾರ್ಮಿಕ ಭಿನ್ನಾಭಿಪ್ರಾಯಗಳೊಂದಿಗೆ ಬೆಸೆಯುವಂತಹ ಮೂಲಭೂತ ಮಾನವಹಕ್ಕುಗಳನ್ನು ನೀವು ಹೊಂದುವುದಿಲ್ಲ' ಎಂದು ಹೇಳಿದರು.

'ನಾನು ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಓದಿರುವಂತೆ ಅದು ಸಂವಿಧಾನದ ಆಶಯಗಳನ್ನು ಉಲ್ಲಂಘಿಸುತ್ತದೆ. ತಾರತಮ್ಯದ ಉದ್ದೇಶದಿಂದ ಧರ್ಮವನ್ನು ಬಳಸಿಕೊಳ್ಳುವ ನಡೆ ಒಪ್ಪುವಂತಹದ್ದಲ್ಲ' ಎಂದರು.
ಭಾರತದ ಆಚೆಗೆ ಧಾರ್ಮಿಕ ಕಿರುಕುಳ ಅನುಭವಿಸಿದ ಹಿಂದೂಗಳಿಗೆ ಅನುಕಂಪ ನೀಡುವುದು ಅಗತ್ಯ ಎಂಬುದನ್ನು ಅವರು ಒಪ್ಪಿಕೊಂಡರು. 'ಪೌರತ್ವ ತಿದ್ದುಪಡಿ ಕಾಯ್ದೆಯು ಧರ್ಮಗಳಿಂದ ಸ್ವತಂತ್ರವಾಗಿರಬೇಕು. ಆದರೆ ಸಂಕಷ್ಟದಲ್ಲಿರುವವರು ಮತ್ತು ಇತರೆ ಸಂಗತಿಗಳನ್ನು ಪರಿಗಣಿಸಬೇಕು' ಎಂದು ಅಭಿಪ್ರಾಯಪಟ್ಟರು.
ಜೆಎನ್ಯು ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಹೊರಗಿನವರು ವಿಶ್ವವಿದ್ಯಾಲಯದ ಆವರಣದ ಒಳಗೆ ಬರುವುದನ್ನು ಜೆಎನ್ಯು ಆಡಳಿತ ತಡೆಯಲಾಗದಿದ್ದದ್ದು ಹಲ್ಲೆಗೆ ಕಾರಣವಾಗಿದೆ ಎಂದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications