ಬೆಂಗಳೂರಲ್ಲಿ ಕ್ಷುಲ್ಲಕ ಕಾರಣಕ್ಕೆ ಕ್ಯಾಬ್ ಚಾಲಕನ ಅಪಹರಣ
ಬೆಂಗಳೂರು, ಜುಲೈ 27: ನಗರದಲ್ಲಿ ಕ್ಯಾಬ್ ಚಾಲಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬ್ರೇಕ್ ಹಾಕಿ ಅಪಘಾತಕ್ಕೆ ಕಾರಣನಾಗಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ ಕ್ಯಾಬ್ ಚಾಲಕನ್ನು ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಕೆಂಗೇರಿ ಬಳಿಯ ಹೆಮ್ಮಿಗೆಪುರ ನಿವಾಸಿ ಮಂಡ್ಯ ಮೂಲದ ವಿಜಯ್ಕುಮಾರ್ (31) ಹಲ್ಲೆಗೆ ಒಳಗಾದ ಕ್ಯಾಬ್ ಚಾಲಕ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ವಿಜಯ್ ಕುಮಾರ್ ಬನಶಂಕರಿಗೆ ಹೋಗುತ್ತಿದ್ದರು.

ಆರ್ಟಿ ನಗರದ ಸಿಬಿಐ ಜಂಕ್ಷನ್ ಬಳಿಯ ಮೇಲು ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಬಸ್ನ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ, ಬಸ್ನ ಹಿಂದಿದ್ದ ವಿಜಯ್ ಕುಮಾರ್ ಕೂಡ ಬ್ರೇಕ್ ಹಾಕಿ, ಪಕ್ಕದಲ್ಲಿ ಬರುತ್ತಿದ್ದ ಮತ್ತೊಂದು ಕಾರು ಬ್ರೇಕ್ ಹಾಕಿ ಪಕ್ಕದಲ್ಲಿ ಬರುತ್ತಿದ್ದ ಕಾರು ಹಾಗೂ ಇನ್ನೊಂದು ಕಾರಿಗೆ ಡಿಕ್ಕಿಯಾಗಿದೆ. ಹಾನಿ ಉಂಟಾದ ಕಾರುಗಳ ಚಾಲಕರು ವಿಜಯ್ಕುಮಾರ್ನನ್ನು ಅಡ್ಡಗಟ್ಟಿ ನಿನ್ನಿಂದಲೇ ಅಪಘಾತವಾಗಿದೆ. ಜಾನಿಗೆ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದರು.
ಹಣ ನೀಡಲು ವಿಜಯ್ ಕುಮಾರ್ ನಿರಾಕರಿಸಿದಾಗ ಅವರನ್ನು ಕಾರಿಗೆ ಹತ್ತಿಸಿಕೊಂಡು ಹೊರಟ ಚಾಲಕರು ಹೊಂಗಸಂಧ್ರದ ಬಳಿ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಿವಿಯ ಭಾಗಕ್ಕೆ ತುಂಬಾ ಗಾಯಗಳಾಗಿವೆ. ಪೊಲೀಸರಿಗೆ ದೂರು ನೀಡಲಾಗಿದ್ದು ತನಿಖೆ ನಡೆಯುತ್ತಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications